ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ತುಮಕೂರು; ಜಾತಿಗಣತಿ ವರದಿಯ ಅಂಕಿ ಅಂಶಗಳು ವೈರಲ್ ಆಗಿದ್ದೇ ಆಗಿದ್ದು ಎಲ್ಲಾ ಕಡೆಯಿಂದಾನೂ ವಿರೋಧ ವ್ಯಕ್ತವಾಗ್ತಾ ಇದೆ. ಈ ಸಂಬಂಧ ಸಿದ್ದಗಂಗಾ ಮಠದ ಶ್ರೀಗಳು ಕೂಡ ಮಾತನಾಡಿದ್ದು, ಸರ್ಕಾರ 10 ವರ್ಷದ ಹಿಂದಿನದ್ದನ್ನು ಪ್ರಕಟ ಮಾಡುವುದು ನ್ಯಾಯೋಜಿತವಲ್ಲ. ಹೊಸ ಸಮೀಕ್ಷೆ ಮಾಡಿದರೆ ಒಳ್ಳೆಯದು. ಜಾತಿಗಣತಿ ಮಾಡಿ, ಮತ್ತೊಮ್ನೆ ವೈಜ್ಞಾನಿಕವಾಗಿ ಎಲ್ಲರನ್ನೂ ಕೇಳಲಿ ಎಂದು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.
ಕಳೆದ 10 ವರ್ಷದ ಹಿಂದೆ ಮಾಡಿರುವ ವರದಿಯನ್ನು ಈಗ ಯಾಕೆ ಪ್ರಕಟ ಮಾಡ್ತಾ ಇದಾರೆ ಅನ್ನೋದು ತಿಳಿಯುತ್ತಿಲ್ಲ. ಹತ್ತು ವರ್ಷದಿಂದ ಈಚೆಗೆ ಅದೆಷ್ಟೋ ಬದಲಾವಣೆಗಳು ಆಗಿರಬಹುದು. ಜನಸಂಖ್ಯೆಯೂ ಹೆಚ್ಚಿರಬಹುದು. ಅದೆಲ್ಲವೂ ಇಂದಿಗೆ ವ್ಯತ್ಯಾಸ ಆಗಲಿದೆ. ಹಾಗಾಗಿ ಹತ್ತು ವರ್ಷದ ಹಿಂದಿನದ್ದನ್ನ ಇಂದು ಪ್ರಕಟ ಮಾಡುವುದು ನ್ಯಾಯಯೋಜಿತವಲ್ಲ. ಸರ್ಕಾರ ಸಮಿತಿ ರಚನೆ ಮಾಡಿ, ಜಾತಿ ಗಣನೆ ಮಾಡಲಿ. ಅದರ ಆಧಾರದ ಮೇಲೆ ಸಾಮಾಜಿಕ, ಶೈಕ್ಷಣಿಕ ಹಿನ್ನೆಲೆ ತಿಳಿದುಕೊಂಡು ಆಯಾ ವರ್ಗಗಳಿಗೆ ನ್ಯಾಯ ಒದಗಿಸಬೇಕು ಅನ್ನೋದು ಶ್ಲಾಘನೀಯ.
ಈ ಗೊಂದಲವನ್ನು ನಿವಾರಣೆ ಮಾಡಿ ಪ್ರತಿಯೊಬ್ಬರನ್ನೂ ಭೇಟಿ ಮಾಡಬೇಕು. ಎಲ್ಲರಿಗೂ ನ್ಯಾಯ ಒದಗಿಸಿಕೊಡುವಂತಹ ಕೆಲಸ ಮಾಡಬೇಕು. ಎಲ್ಲಾ ಸಮಾಜದಲ್ಲೂ ಹಿಂದುಳಿದವರು, ಬಡವರು, ನಿರ್ಗತಿಕರಿದ್ದಾರೆ. ಅವರೆಲ್ಲರನ್ನೂ ಆರ್ಥಿಕ ಸ್ವಾವಲಂಬಿಗಳನ್ನಾಗಿ ಮಾಡಬೇಕಿದೆ. ಅವರಿಗೆ ನೌಕರಿ, ಉತ್ತಮ ಶಿಕ್ಷಣ ಒದಗಿಸಿಕೊಡಬೇಕಿದೆ. ಆಗಾದರೆ ಮಾತ್ರ ಆರೋಗ್ಯಪೂರ್ಣ, ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ. ಆ ನಿಟ್ಟಿನಲ್ಲಿ ಅಸಮಾನತೆ ಹೋಗಲಾಡಿಸಬೇಕು, ಸಮಾನತೆಯನ್ನ ತರಬೇಕು. ಹಿಂದುಳಿದವರನ್ನ ಮುಂದೆ ತರಬೇಕು, ಬಡವರನ್ನ ಮೇಲೆತ್ತಬೇಕು ಎನ್ನುವ ಉದ್ದೇಶ ಒಳ್ಳೆಯದಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್