Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜಾನುವಾರು ಹತ್ಯೆ ಪ್ರತಿಬಂಧಕ : ಡಿ.08 ರಂದು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ : ಪ್ರಭಂಜನ್

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 06 : ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣಾ ಕಾಯಿದೆ-2020 ನ್ನು ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಕಾಂಗ್ರೆಸ್ ಸರ್ಕಾರ ಸಡಿಲಗೊಳಿಸುವ ಸೂಚನೆಗಳು ಕಂಡು ಬರುತ್ತಿರುವುದರಿಂದ ಸೋಮವಾರ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ನಡೆಸಲಾಗುವುದೆಂದು ಬಜರಂಗದಳ ಕರ್ನಾಟಕ ಪ್ರಾಂತ ಸಂಯೋಜಕ ಪ್ರಭಂಜನ್ ತಿಳಿಸಿದರು.

ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯ ಸರ್ಕಾರ ಮುಸಲ್ಮಾನರಿಗೆ, ಕಳ್ಳಕಾಕರಿಗೆ, ದರೋಡೆಕೋರರಿಗೆ ಪ್ರಿಯವಾಗಿರುವುದರಿಂದ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣಾ ಕಾಯಿದೆ-2020 ನ್ನು ಬದಲಾಯಿಸಿ ಕಾನೂನು ದುರ್ಬಲಗೊಳಿಸುವ ಹುನ್ನಾರ ನಡೆಸುತ್ತಿದೆ. ಸಿದ್ದರಾಮಯ್ಯನವರು ರಾಜ್ಯದ ಮುಖ್ಯಮಂತ್ರಿಯಾದಾಗಿನಿಂದಲೂ ಹಿಂದೂಗಳಿಗೆ ಒಂದಲ್ಲ ಒಂದು ರೀತಿಯ ಕಿರುಕುಳ ನೀಡುತ್ತಾ ಬರುತ್ತಿದ್ದಾರೆ. ಹಿಂದೂಗಳು ದೇವರೆಂದು ಪೂಜಿಸುವ ಗೋವುಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುವ ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಾಗ ಐದು ಲಕ್ಷ ರೂ.ಗಳ ಬಾಂಡ್ ಕೊಟ್ಟರೆ ವಾಹನವನ್ನು ಬಿಡಲು ಸುಲಭವಾಗುವಂತೆ ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣಾ ಕಾಯಿದೆ ಸಡಿಲಗೊಳಿಸಿ ತಿದ್ದುಪಡಿ ತರಲು ಕ್ಯಾಬಿನೆಟ್ ಸಭೆಯಲ್ಲಿ ಬಿಲ್ ಪಾಸ್ ಮಾಡಿರುವುದಾಗಿ ಗೊತ್ತಾಗಿದೆ. ಇದರಿಂದ ಪಶುಗಳ ಹತ್ಯೆ ಜಾಸ್ತಿಯಾಗುತ್ತದೆ. ತಿದ್ದುಪಡಿಯನ್ನು ತಕ್ಷಣವೆ ಹಿಂದಕ್ಕೆ ಪಡೆಯುವಂತೆ ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಯಲಿದೆ ಎಂದು ಪ್ರಬಂಜನ್ ಹೇಳಿದರು.

ಆನೆಬಾಗಿಲಿನಿಂದ ಜಿಲ್ಲಾಧಿಕಾರಿಗೆ ಕಚೇರಿಗೆ ತೆರಳುವ ಪ್ರತಿಭಟನೆಯಲ್ಲಿ ಸಾಧು ಸಂತರು, ಗೋ ಪ್ರೇಮಿಗಳು ಹಿಂದೂಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರಬಂಜನ್ ಮನವಿ ಮಾಡಿದರು.
ವಿಶ್ವಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ಕೇಶವ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now