Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಾವೇರಿಗಾಗಿ ತಮಿಳುನಾಡು ಕ್ಯಾತೆ : ಬಿಜೆಪಿ ಸಂಸದರಿಂದ ಪ್ರತಿಭಟನೆ..!

---Advertisement---

 

ಕರ್ನಾಟಕದಲ್ಲಿ ಮಳೆಯ ಪರಿಸ್ಥಿತಿ ಹೇಗಿದೆ ಅನ್ನೋದು ತಿಳಿದಿದ್ದರು ಸಹ ತಮಿಳುನಾಡು ತನ್ನ ಕ್ಯಾತೆ ನಿಲ್ಲಿಸಿಲ್ಲ. ನಮಗೆ ಬರಬೇಕಾದ ನೀರನ್ನು ಬಿಡಬೇಕು ಎಂದು ತಮಿಳುನಾಡು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಿತ್ತು. ಇಂದು ತುರ್ತು ಅರ್ಜಿ ವಿಚಾರಣೆ ಮಾಡುವುದಕ್ಕೆ ತಿಳಿಸಿತ್ತು. ಅದರಂತೆ ಸುಪ್ರೀಂ ಕೋರ್ಟ್ ನಲ್ಲಿ ಹೊಸ ಪೀಠ ರಚನೆ ಮಾಡಿ, ಆ ಮೂಲಕ ಸಮಸ್ಯೆಗಳನ್ನು ಹೊಸ ಪೀಠದ ಮುಂದೆ ಹೇಳಿಕೊಳ್ಳಲು ಸೂಚಿಸಿದೆ.

ಈ ಕಡೆ ತಮಿಳುನಾಡಿನ ನಡೆಗೆ ಕೋಪಗೊಂಡ ಮಂಡ್ಯ, ಮೈಸೂರು ಜನ ಇದೀಗ ಪ್ರತಿಭಟನೆ ನಡೆಸುತ್ತಿದ್ದಾರೆ‌. ಬಿಜೆಪಿ ನಾಯಕರು ಇಂದು ಪ್ರತಿಭಟನೆಗೆ ಮುಂದಾಗಿದ್ದಾರೆ. ಪ್ರತಿಭಟನೆಯಲ್ಲಿ ಮೈಸೂರು, ಬೆಂಗಳೂರು ಸಂಸದರು ಭಾಗಿಯಾಗಿದ್ದು, ತೇಜಸ್ವಿ ಸೂರ್ಯ, ಪಿಸಿ ಮೋಹನ್, ಸುಮಲತಾ ಸೇರಿದಂತೆ ಹಲವರು ಸಾಥ್ ನೀಡಿದ್ದಾರೆ.

ಈಗಾಗಲೇ ರೈತರೆಲ್ಲ ಪ್ರತಿಭಟನೆ ನಡೆಸಿದ್ದರು. ಇಂದು ಬಿಜೆಪಿ‌ ನಾಯಕರು ಪ್ರತಿಭಟನೆ ನಡೆಸುತ್ತಿದ್ದು, ರಾಜ್ಯ ಸರ್ಕಾರದ ನಡೆಯನ್ನು ಕಂಡು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೀರು ಬಿಡುಗಡೆ ವಿರೋಧಿಸಿ, ಮಂಡ್ಯದ ಸಂಜಯ್ ವೃತ್ತದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...