ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆದಿದೆ. ಇದರ ಮಧ್ಯೆ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಲಾಗಿದೆ. ಆ ಅರ್ಜಿಯಲ್ಲಿ ಎರಡು ಬೇಡಿಕೆಗಳಿಗೆ ಮನವಿ ಮಾಡಿದೆ. ಅದರಲ್ಲಿ ತಮಿಳುನಾಡಿಗೆ ನೀರು ಬಿಡುವುದಕ್ಕೆ ಸಾಧ್ಯವಿಲ್ಲ ಎಂಬುದು, ಮತ್ತೊಂದು ಮೇಕೆದಾಟು ಯೋಜನೆಗೆ ಅನುಮತಿ ಕೋರಿ ಬೇಡಿಕೆ ಇಡಲಾಗಿದೆ.
ಕಾವೇರಿ ವಿಚಾರದಲ್ಲಿ ಪದೇ ಪದೇ ಕರ್ನಾಟಕಕ್ಕೆ ಸೋಲಾಗುತ್ತಿದೆ. ರಾಜ್ಯದಲ್ಲಿ ಮಳೆ ಇಲ್ಲದೆ, ಕಾವೇರಿ ಕೊಳ್ಳದಲ್ಲಿ ನೀರು ದಿನೇ ದಿನೇ ಖಾಲಿಯಾಗುತ್ತಿದೆ. ಹೀಗಾಗಿ ಬೆಂಗಳೂರಿಗರಿಗೂ ಕುಡಿಯುವ ನೀರು ಕೂಡ ಕಷ್ಟವಾಗಲಿದೆ ಎಂದು ರೈತರೆಲ್ಲಾ ಹೋರಾಟ ಮಾಡಿದ್ದಾರೆ. ಒಂದಿನ ಬೆಂಗಳೂರು ಬಂದ್, ಒಂದಿನ ಕರ್ನಾಟಕ ಬಂದ್ ಮಾಡಲಾಗಿದೆ. ಇದರ ನಡುವೆಯೂ ತಮಿಳುನಾಡಿಗೆ ಪ್ರತಿ ದಿನ 3 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಆದೇಶ ನೀಡಲಾಗಿದೆ.
ಇದರ ನಡುವೆ ನಿನ್ನೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಅಧಿಕಾರಿಗಳ ಸಭೆಯೂ ನಡೆದಿದೆ. ನ್ಯಾಯಾಧೀಶರು, ನ್ಯಾಯಮೂರ್ತಿಗಳ ಈ ಸಭೆಯಲ್ಲಿ ಹಾಜರಾಗಿದ್ದರು. ಈ ವೇಳೆ ಸಭೆಯಲ್ಲಿ ಕಾನೂನಿನ ಹೋರಾಟ ಮಾಡುವ ವಿಚಾರವಾಗಿ ಚರ್ಚೆ ನಡೆದಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.















