ಕಾವೇರಿಗಾಗಿ ಧನಿಗೂಡಿಸಿದ ಕನ್ನಡದ ಬಿಗ್ ಸ್ಟಾರ್ಸ್

1 Min Read

 

ಮಂಡ್ಯ: ಕಾವೇರಿ ನದಿ ದಿನೇ ದಿನೇ ಖಾಲಿಯಾಗುತ್ತ ಇದೆ. ಆದರೆ ತಮಿಳುನಾಡಿಗೆ ನೀರು ಬಿಡಬೇಕು ಎಂಬ ತೀರ್ಮಾನ ಮಾತ್ರ ಹಿಂದೆ ತೆಗೆದುಕೊಳ್ಳುತ್ತಿಲ್ಲ. ಸರ್ಕಾರ ಕೂಡ ಕಾವೇರಿ ನೀರಿನ ಬಗ್ಗೆ ಮನವರಿಕೆ ಮಾಡಲು ಸಾಕಷ್ಟು ಪ್ರಯತ್ನ ನಡೆಸುತ್ತಿದೆ. ಇತ್ತ ಸ್ಯಾಂಡಲ್ ವುಡ್ ನಟರು ಯಾರು ಕಾವೇರಿ ಪರ ಧ್ವನಿ ಎತ್ತುತ್ತಿಲ್ಲ ಎಂದು ರೈತರು ಆಕ್ರೋಶ ಹೊರ ಹಾಕಿದ್ದರು. ಈ ಬೆನ್ನಲ್ಲೇ ಸ್ಯಾಂಡಲ್ ವುಡ್ ಸ್ಟಾರ್ ಗಳು ಕಾವೇರಿ ಬಗ್ಗೆ ಮಾತನಾಡಲು ಶುರು ಮಾಡಿದ್ದಾರೆ.

ನಿನ್ನೆಯೆಲ್ಲಾ ದರ್ಶನ್ ಹಾಗೂ ಸುದೀಪ್ ದನಿ ಎತ್ತಿದ್ದರು. ಇಂದು ಅನಂತ್ ನಾಗ್, ಶಿವಣ್ಣ ಸೇರಿದಂತೆ ಹಲವರು ಮಾತನಾಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಮಾಡಿರುವ ನಟ ಶಿವ ರಾಜ್ ಕುಮಾರ್, ರೈತ ದೇಶದ ಬೆನ್ನೆಲುಬು ಅಂತಾರೆ ಆ ರೈತನ ಬೆನ್ನೆಲುಬು ನಮ್ಮ ಕಾವೇರಿ. ರಾಜ್ಯದಲ್ಲಿ ಈ ಸರಿ ಮಳೆಯ ಅಭಾವವಿದು ರೈತ ಆಗಲೇ ಸಂಕಷ್ಟದಲ್ಲಿದಾನೆ. ಎರಡು ರಾಜ್ಯದ ನಾಯಕರು ಹಾಗು ನ್ಯಾಯಾಲಯ ಎಲ್ಲ ಅಂಶಗಳನ್ನು ಪರಿಶೀಲಿಸಿ ಒಂದು ಸಮಾಧಾನಕರ ಪರಿಹಾರ ಕಂಡುಕೊಳ್ಳಬೇಕು ಅನ್ನೋದು ನನ್ನ ಪ್ರಾರ್ಥನೆ ಎಂದಿದ್ದಾರೆ.

ಹಿರಿಯ ನಟ ಅನಂತ್ ನಾಗ್ ಮಾತನಾಡಿ, ಕಾವೇರಿ ಗಲಾಟೆಯನ್ನು ಸುಮಾರು 60 ವರ್ಷದಿಂದ ನೋಡಿಕೊಂಡು ಬಂದಿದ್ದೇವೆ. ಕಾಂಗ್ರೆಸ್ ಕಾಲದಿಂದಾನು ಇದೆ. ಡಿಎಂಕೆ ಜೊತೆ ಸೇರಿ ಸಮಸ್ಯೆ ಬಗೆಹರಿಸಿಲ್ಲ. ಬ್ರಿಟಿಷ್ ಸರ್ಕಾರ ಇದ್ದಾಗ ತಮಿಳು ನಾಡಿಗೆ ಹೆಚ್ಚು ನೀರು ಬಿಡುಗಡೆ ಮಾಡುವ ಉಲ್ಲೇಖವಿದೆ. ಇದನ್ನು ಸರಿ ಮಾಡುವ ಕೆಲಸ ಆಗಿಲ್ಲ ಎಂದಿದ್ದಾರೆ.

ಇನ್ನು ಡಾಲಿ ಧನಂಜಯ ಟ್ವೀಟ್ ಮಾಡಿದ್ದು, ಮಳೆಯ ಅಭಾವದಿಂದ ರೈತರು ಸಂಕಷ್ಟದಲ್ಲಿದ್ದಾರೆ.
ಕಾವೇರಿ ಕೃಷ್ಣ ನದಿಗಳ ಹೋರಾಟ ನಮ್ಮ ಎಲ್ಲರ ಕರ್ತವ್ಯ . ನಮ್ಮ ರೈತರಿಗೆ ಸಿಗಬೇಕಾದ ಪಾಲು ಸಿಗಲೇಬೇಕು. ನಮ್ಮ ಹಕ್ಕಿಗಾಗಿ ಸದಾ ಹೋರಾಡೋಣ. ಕಾವೇರಿ ಸಂಘರ್ಷ ಬೇಗ ಅಂತ್ಯವಾಗಲಿ ಎಂದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *