Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರೈತರ ಪ್ರತಿಭಟನೆಯ ನಡುವೆಯೂ ತಮಿಳುನಾಡಿಗೆ ಇಂದು ಕಾವೇರಿ ನೀರು ಬಿಡುಗಡೆ..!

Facebook
Twitter
Telegram
WhatsApp

 

 

ಮಂಡ್ಯ: ರಾಜ್ಯದಲ್ಲಿಯೇ ಮಳೆ ಕೊರತೆ ಜಾಸ್ತಿ ಇದೆ. ಡ್ಯಾಂಗಳಲ್ಲಿ ಇರುವ ನೀರು ಬತ್ತುತ್ತಾ ಇದೆ. ಹೀಗೆ ಆದರೆ ನಮ್ಮಗಳ ಕಥೆ ಏನು..? ಕುಡಿಯುವುದಕ್ಕೂ ನೀರು ಇರುವುದಿಲ್ಲ ಎಂಬ ಚಿಂತೆಯಲ್ಲಿ ರೈತರಿದ್ದಾರೆ. ಇದರ ನಡುವೆ ತಮಿಳುನಾಡು ತನ್ನ ಪಾಲಿನ ನೀರನ್ನು ಪಡೆಯುತ್ತಲೇ ಇರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ಸುಪ್ರೀಂ ಕೋರ್ಟ್ ಸೂಚನೆಯಂತೆ ರಾಜ್ಯ ಸರ್ಕಾರ ನಡೆದುಕೊಳ್ಳುತ್ತಿರುವುದಾದರೂ ಮೊದಲು ನಮ್ಮ ರಾಜ್ಯದ ಪರಿಸ್ಥಿತಿ ನೋಡಬೇಕು ಅನ್ನೋದು ರೈತರ ಅಭಿಪ್ರಾಯ. ತಮಿಳುನಾಡಿಗೆ ನೀರು ಬಿಡುತ್ತಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ, ಬಿಜೆಪಿಯ ಸಂಸದರು ಕೂಡ ನಿನ್ನೆಯೆಲ್ಲಾ ಪ್ರತಿಭಟನೆ ನಡೆಸಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ರೈತರ ಪ್ರತಿಭಟನೆಯಂತು ಮುಂದುವರೆದಿದೆ.

ಆದರೂ ರೈತರ ಪ್ರತಿಭಟನೆಯ ನಡುವೆಯೂ ಕೆಆರ್ಎಸ್ ನಿಂದ ಇಂದು ತಮಿಳುನಾಡಿಗೆ, 10.841 ಕ್ಯೂಸೆಕ್ ನೀರನ್ನು ಹರಿಬಿಡಲಾಗಿದೆ. ನಿನ್ನೆ 12,631 ಕ್ಯೂಸೆಕ್ ನೀರು ಬಿಡಲಾಗಿತ್ತು. ನಿನ್ನೆಗಿಂತ ಎರಡು ಕ್ಯೂಸೆಕ್ ನೀರನ್ನು ಕಡಿಮೆ ಮಾಡಲಾಗಿದೆ. ಆದರೆ ದಿನೇ ದಿನೇ ಜಲಾಶಯದಲ್ಲಿ ನೀರಿನ ಮಟ್ಟ ಕಡಿಮೆಯಾದರೂ ರಾಜ್ಯ ಸರ್ಕಾರದ ಈ ನಡೆಗೆ ಮಂಡ್ಯ, ಮೈಸೂರು ಭಾಗದ ರೈತರು ಬೇಸರ ವ್ಯಕ್ತಪಡಿಸಿದ್ದಾರೆ.

ಕೆಆರ್​ಎಸ್​ ಡ್ಯಾಂನ ನೀರಿನ ಮಟ್ಟ 104 ಅಡಿಗೆ ಕುಸಿತ ಕಂಡಿದ್ದು, ಒಂದೇ ದಿನಕ್ಕೆ ನೀರಿನ ಪ್ರಮಾಣ ಒಂದು ಅಡಿಯಷ್ಟು ಕೆಳಸ್ಥರದಲ್ಲಿ ಕಂಡಿದೆ. ಹೀಗಾಗಿ ಕಾವೇರಿ ಕೊಳ್ಳದ ರೈತರಲ್ಲಿ ಆತಂಕ ಹೆಚ್ಚಾಗಿದೆ. 5269 ಕ್ಯೂಸೆಕ್ ನೀರು ಮಾತ್ರ ಹರಿದು ಬರುತ್ತಿದೆ . 124.80 ಅಡಿ ಗರಿಷ್ಠ ಮಟ್ಟದ ಡ್ಯಾಂನಲ್ಲಿ 104.90 ಅಡಿ ನೀರು ಸಂಗ್ರಹವಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ, ಈ ರಾಶಿಯವರು ಆಸ್ತಿ ಉಡುಗೊರೆಯಾಗಿ ಪಡೆಯುವಿರಿ, ಶನಿವಾರ ರಾಶಿ ಭವಿಷ್ಯ -ಜುಲೈ-27,2024 ಸೂರ್ಯೋದಯ: 05:58, ಸೂರ್ಯಾಸ್ತ : 06:47

ಹೊಳಲ್ಕೆರೆ | ಸ್ನೇಹ ಪಬ್ಲಿಕ್ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

ಸುದ್ದಿಒನ್, ಹೊಳಲ್ಕೆರೆ, ಜುಲೈ. 26 : ನಮ್ಮ ರಾಷ್ಟ್ರಧ್ವಜವು ಗಾಳಿಯಿಂದ ಹಾರುತ್ತಿಲ್ಲ ಬದಲಾಗಿ ಅದು ಹಾರುತ್ತಿರುವುದು ಈ ದೇಶಕ್ಕಾಗಿ ಮಡಿದ ವೀರ ಯೋಧರ ಸೈನಿಕರ ಉಸಿರಿನಿಂದ ಎಂದು ಸಂಸ್ಥೆಯ ಕಾರ್ಯದರ್ಶಿ ಜಿ.ಎಸ್. ವಸಂತ್ ಹೇಳಿದರು.

ಖ್ಯಾತ ನಿರೂಪಕಿ ದಿವ್ಯಾ ಆಲೂರು ತಂದೆ‌ ನಿಧನ : ತಾವೇ ಅಂತ್ಯಸಂಸ್ಕಾರ ಮಾಡಿ ಹೇಳಿದ್ದೇನು..?

ಬೆಂಗಳೂರು : ಪೋಷಕರ ಅಂತ್ಯ ಸಂಸ್ಕಾರದ ವಿಚಾರದಲ್ಲಿ ಈಗಲೂ ಮನಸ್ಥಿತಿ ಎಲ್ಲಾ ಕಡೆಯಲ್ಲೂ ಬದಲಾಗಿಲ್ಲ. ತಮಗೆ ಗಂಡು ಮಕ್ಕಳು ಇಲ್ಲದೆ ಇದ್ದರು, ಅಣ್ಣತಮ್ಮಂದಿರಿಗೆ ಇರುವ ಗಂಡು ಮಕ್ಕಳಿಂದಾನೇ ಅಂತ್ಯ ಸಂಸ್ಕಾರ ನಡೆಸುತ್ತಾರೆ. ಸತ್ತವರಿಗೆ ಅಂತ್ಯ

error: Content is protected !!