Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿಬಿಐ ಪ್ರಕರಣ: ಯಾರ ನಾಲಿಗೆಯಲ್ಲಿ ಏನೇನಿದೆ ಅನ್ನೋದು ಈಗ ತಿಳಿಯುತ್ತಿದೆ : ಡಿಕೆ ಶಿವಕುಮಾರ್

ಡಿಕೆ ಶಿವಕುಮಾರ್
---Advertisement---

ದೆಹಲಿ: ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ಅವರ ಪ್ರಕರಣವನ್ನು ಹಿಂಪಡೆಯಲು ರಾಜ್ಯ ಸರ್ಕಾರ ಸಮ್ಮತಿ ನೀಡಿದೆ. ಇದಾದ ಬಳಿಕ ಬಿಜೆಪಿ ನಾಯಕರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಯಾರ್ಯಾರ ಮನಸ್ಸು ಹಾಗೂ ನಾಲಿಗೆಯಲ್ಲಿ ಏನೇನು ಇದೆ ಎಂಬುದು ಈಗ ತಿಳಿಯುತ್ತಿದೆ ಎಂದಿದ್ದಾರೆ.

ದೆಹಲಿಯ ಕರ್ನಾಟಕ ಭವನದಲ್ಲಿ ಮಾತನಾಡಿದ ಡಿಕೆ ಶಿವಕುಮಾರ್ ಅವರು, ನನ್ನ ವಿರುದ್ಧ ಪ್ರಕರಣದಲ್ಲಿ ಸಿಬಿಐಗೆ ನೀಡಿದ್ದ ಅನುಮತಿ ಹಿಂಪಡೆದ ನಂತರ ಅನೇಕರು ಮಾತನಾಡುತ್ತಿದ್ದಾರೆ. ಯಾರು ಯಾರ ಮನಸ್ಸಲ್ಲಿ ಹಾಗೂ ನಾಲಿಗೆಯಲ್ಲಿ ಏನು ಇದೆ ಎಂಬುದು ಈಗ ತಿಳಿಯುತ್ತಿದೆ. ಯಾರು ಗೆಳೆಯರು..? ಅವರ ಭಾವನೆ ಏನಿದೆ..? ಎಂಬುದು ಈಗ ತಿಳಿಯುತ್ತಿದೆ. ಸಿಬಿಐ ತನಿಖೆಗೆ ಅನುಮತಿ ಹಿಂಪಡೆದಿರುವ ಬಗ್ಗೆ ಈಗ ಮಾತನಾಡುವುದಿಲ್ಲ. ಮುಂದೊಂದು ದಿನ ಖಂಡಿತವಾಗಿಯೂ ಮಾತನಾಡುತ್ತೀನಿ ಎಂದಿದ್ದಾರೆ.

 

ಇದೆ ವೇಳೆ ಆರ್ ಅಶೋಕ್ ಬಗ್ಗೆ ಮಾತನಾಡಿದ್ದಾರೆ. ಬೋಗಸ್ ಜನತಾ ದರ್ಶನ. ಸರ್ಕಾರ ಈಗ ಎಚ್ಚೆವಾಗಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ವ್ಯಂಗ್ಯವಾಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿಕೆ ಶಿವಕುಮಾರ್, ಹೊಸದಾಗಿ ವಿರೋಧ ಪಕ್ಷದ ನಾಯಕರಾಗಿದ್ದಾರೆ. ಅವರಲ್ಲಿ ಜೋಶ್ ಇದೆ. ಹೊಸದಾಗಿ ಬಟ್ಟೆ ಜೋರಾಗಿ ಒಗೆಯಲಿ. ನಾವೂ ಎಲ್ಲರ ಮನಸ್ಥಿತಿ ಅರಿಯುತ್ತಿದ್ದೇವೆ ಎಂದಿದ್ದಾರೆ. ಅವರು ಕಾಂಗ್ರೆಸ್ ಪಕ್ಷದ ವಕ್ತಾರರಾಗಿ ಮಾತನಾಡಲು ಆಗುವುದಿಲ್ಲ. ಅವರು ಅವರದ್ದೇ ಪಕ್ಷದ ವಕ್ತಾರರಾಗಿ ಸರಿಪಡಿಸಿಕೊಳ್ಳಲಿ ಎಂದು ಆರ್ ಅಶೋಕ್ ಹೇಳಿಕೆಗೆ ಕಿಡಿಕಾರಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...