ಬೆಂಗಳೂರು: ಕೇಂದ್ರಿಯ ಪ್ರೌಢ ಶಿಕ್ಷಣ ಮಂಡಳಿಯ 9ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದೆ. ತೆರೆದ ಪುಸ್ತಕ ಪರೀಕ್ಷಾ ಪದ್ಧತಿಯನ್ನ ಜಾರಿಗೆ ತರಲು ಮುಂದಾಗಿದೆ. ಪುಸ್ತಕವನ್ನು ನೋಡಿಕೊಂಡೆ ಪರೀಕ್ಷೆಯನ್ನ ಬರೆಯಬಹುದಾಗಿದೆ. 2026-27 ರಿಂದ ಈ ಯೋಜನೆ ಜಾರಿಗೆ ಬರಲಿದೆ. ಕಂಠಪಾಠಕ್ಕೆ ಗುಡ್ ಬೈ ಹೇಳಿ, ಸಾಮರ್ಥ್ಯ ಕೌಶಲ್ಯಕ್ಕೆ ಹೆಚ್ಚು ಒತ್ತು ನೀಡಲಾಗುತ್ತದೆ.
ಮುಂದಿನ ಶೈಕ್ಷಣಿಕ ವರ್ಷದಿಂದ ತೆರೆದ ಪುಸ್ತಕ ಪರೀಕ್ಷಾ ಪದ್ಧತಿ ಜಾರಿ ಮಾಡಲಾಗುತ್ತಿದೆ. ಹೀಗಾಗಿ ಇನ್ಮುಂದೆ ವಿದ್ಯಾರ್ಥಿಗಳು ಪಠ್ಯ ಪುಸ್ತಕ ನೋಡಿ ಪರೀಕ್ಷೆ ಬರೆಯಲು ಅವಕಾಶ ಇರುತ್ತದೆ. ಕೇಂದ್ರಿಯ ಮಾಧ್ಯಮ ಶಿಕ್ಷಣ ಮಂಡಳಿ ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ ಮಾಡಲಾಗಿದೆ. ಹಳೆಯ ಪರೀಕ್ಷಾ ಪದ್ಧತಿ ಕಂಠ ಪಾಠಕ್ಕೆ ಸಮಯ ಕೊಡುತ್ತೆ ಅನ್ನೋ ವಾದ ಇತ್ತು. ಈಗಿನ ಹೊಸ ಪರೀಕ್ಷಾ ಪದ್ಧತಿ ವಿದ್ಯಾರ್ಥಿ ಸಾಮರ್ಥ್ಯವನ್ನು ಗಣನೆಗೆ ತೆಗೆದುಕೊಳ್ಳುತ್ತದೆ. ಇಂತಹ ಕ್ರಮ ಆಯ್ಕೆ ಮಾಡುವ, ಅನುಸರಿಸುವ ಹಕ್ಕು ಆಯಾ ಶಾಲೆಗಳಿಗೆ ಬಿಟ್ಟಿರುತ್ತದೆ.
ನ್ಯಾಷನಲ್ ಕರಿಕುಲಮ್ ಫ್ರೇಮ್ ವರ್ಕ್ ಫಾರ್ ಸ್ಕೂಲ್ ಎಜುಕೇಷನ್ ಚೌಕಟ್ಟು 2023 ಮತ್ತು ರಾಷ್ಟ್ರೀಯ ಶಿಕ್ಷಣ ನೀತಿ 2020ಕ್ಕೆ ಇದು ಅನುಗುಣವಾಗಿ ಈ ಪ್ರಸ್ತಾವನೆ ಇದೆ. 9ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲೆಯಲ್ಲಿನ ಭಾಷೆ, ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ಈ ವಿಷಯಗಳನ್ನು ಪುಸ್ತಕ ಮೌಲ್ಯಮಾಪನ ಒಳಗೊಂಡಿದೆ ಎಂದೇ ಹೇಳಬಹುದು. ಒಟ್ಟಾರೆ ಮುಂದಿನ ವರ್ಷ ಶೈಕ್ಷಣಿಕ ವರ್ಷ ಶುರುವಾದ ಬೆನ್ನಲ್ಲೇ ಸಿಬಿಎಸ್ಸಿ ಮಕ್ಕಳಿಗೆ ಪುಸ್ತಕವನ್ನು ನೋಡಿಕೊಂಡೆ ಪರೀಕ್ಷೆ ಬರೆಯುವ ಅವಕಾಶ ಸಿಕ್ಕಂತೆ ಆಗಿದೆ.
ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






