Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಎಸ್.ಆರ್.ಎಸ್ ಹೆರಿಟೇಜ್ ಶಾಲೆಯಲ್ಲಿ ಸಂಭ್ರಮದ ಮಕರ ಸಂಕ್ರಾಂತಿ ಆಚರಣೆ

---Advertisement---

ಸುದ್ದಿಒನ್, ಚಿತ್ರದುರ್ಗ, ಜನವರಿ.12 : ನಗರದ‌ ಎಸ್.ಆರ್.ಎಸ್ ಹೆರಿಟೇಜ್ ಶಾಲೆಯಲ್ಲಿ 3 ಮತ್ತು 4 ನೇ ತರಗತಿಯ ಮಕ್ಕಳಿಂದ ಸಡಗರ ಸಂಭ್ರಮದಿಂದ ಮಕರ ಸಂಕ್ರಾಂತಿಯ ಹಬ್ಬವನ್ನು ಆಚರಿಸಲಾಯಿತು.

ಶಾಲೆಯ ಪ್ರಾಂಶುಪಾಲ ಪ್ರಭಾಕರ್ ಎಮ್ ಎಸ್ ಮಾತನಾಡಿ,
ಸಂಕ್ರಾಂತಿ ಪೌರಾಣಿಕ ಮತ್ತು ವೈಜ್ಞಾನಿಕ ಹಿನ್ನಲೆಯುಳ್ಳ ಹಬ್ಬವಾಗಿದೆ ಹಾಗೂ ಹಬ್ಬ ಒಂದೇ ಆದರೂ ಬೇರೇ ಬೇರೇ ರಾಜ್ಯಗಳಲ್ಲಿ ಬೇರೇ ಬೇರೇ ಹೆಸರಿನಿಂದ ಆಚರಿಸುವಂತಹ ಬಹಳಷ್ಟು ಹಬ್ಬಗಳಿದ್ದು “ಸಂಕ್ರಾಂತಿ” ಈ ರೀತಿಯ ಆಚರಣೆಗೆ ಒಳಪಡುವ ಹಬ್ಬವಾಗಿದೆ. ಹಾಗೂ ಮಕರ ಸಂಕ್ರಾಂತಿಯಂದು ಸೂರ್ಯನು ಒಂದು ರಾಶಿಯಿಂದ ಇನ್ನೊಂದು ರಾಶಿಗೆ ಪ್ರವೇಶ ಪಡೆಯುತ್ತಾನೆ. ಇದು ಸೂರ್ಯನು ಉತ್ತರ ದಿಕ್ಕಿಗೆ ಪ್ರಯಾಣ ಮಾಡುವುದರ ಜೊತೆಗೆ ಚಳಿಗಾಲದ ಅಂತ್ಯವನ್ನು ಸೂಚಿಸುತ್ತದೆ. ಈ ದಿನದಂದು ಜಾನುವಾರಗಳನ್ನು ಕಿಚ್ಚಿಗೆ ಹಾಯಿಸುವುದು. ಎಳ್ಳುಬೆಲ್ಲದಿಂದ ತಯಾರಿಸಿದ ಸಿಹಿತಿನಿಸುಗಳನ್ನು ತಿನ್ನುವುದು, ವಿವಿಧ ರೀತಿ ಆಚರಣೆಗಳು ಮತ್ತು ಈ ಹಬ್ಬದ ಭಾಗವಾಗಿದೆ ಎಂದು ಹೇಳಿದರು.

ಮಕರ ಸಂಕ್ರಾಂತಿಯನ್ನು ಸೂಚಿಸುವ ಸೂರ್ಯ ದೇವರಿಗೆ ಸಮರ್ಪಿತ ಸುಗ್ಗಿಯ ಹಬ್ಬವಾದ ಸಂಕ್ರಾಂತಿ ಸಂಭ್ರಮವನ್ನು ವಿದ್ಯಾರ್ಥಿಗಳು ಉತ್ಸಾಹದಿಂದ ಶಾಲೆಯ ಹೊರಾಂಗಣದ ಪ್ರವೇಶ ದ್ವಾರದ ಹೊರಗೆ ಹೂವು, ತಳಿರುತೋರಣ. ಕಬ್ಬು, ವರ್ಣರಂಜಿತ ರಂಗೋಲಿಯಿಂದ ಅಲಂಕರಿಸಿ ನಂತರ ಪೊಂಗಲ್ ತಯಾರಿಸಿದರು. ಇವು ಅದೃಷ್ಟ ಮತ್ತು ಸಮೃದ್ಧಿಯನ್ನು ತರುತ್ತದೆ ಎಂದು ನಂಬಲಾಗಿದೆ. ಸುಗ್ಗಿಯ ಬೆಳೆಗಾಗಿ ಸೂರ್ಯ ದೇವರಿಗೆ ಕೃತಜ್ಞತೆ ಸಲ್ಲಿಸಲು ಸಾಂಪ್ರದಾಯಕ ಹಾಗೂ ವರ್ಣರಂಜಿತ ಉಡುಗೆಯಲ್ಲಿ ವಿದ್ಯಾರ್ಥಿಗಳು ನೆರೆದಿದ್ದರು.

ಪ್ರಾಂಶುಪಾಲರು, ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದ ಧಾನ್ಯದ ರಾಶಿಗೆ ಪೂಜೆ ಸಲ್ಲಿಸಿದರು.

ಈ ಕಾರ್ಯಕ್ರಮವನ್ನು ಎಸ್.ಆರ್.ಎಸ್. ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಬಿ ಎ ಲಿಂಗಾರೆಡ್ಡಿ ಹಾಗೂ ಎಸ್.ಆ‌ರ್.ಎಸ್. ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀಮತಿ ಸುಜಾತ ಲಿಂಗಾರೆಡ್ಡಿ ಉಪಾಧ್ಯಕ್ಷರಾದ ಅಮೋಫ್ ಬಿ ಎಲ್ ಹಾಗೂ ಆಡಳಿತ ಮಂಡಳಿ ಪ್ರಶಂಶಿಸಿದ್ದಾರೆ. ಶೈಕ್ಷಣಿಕ ಸಂಯೋಜಕರು, ಶಿಕ್ಷಕವೃಂದದವರು ಉಪಸ್ಥಿತರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment