Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಎಸ್.ಆರ್.ಎಸ್ ಹೆರಿಟೇಜ್ ಶಾಲೆಯಲ್ಲಿ ಸಂಭ್ರಮದ ಮಕರ ಸಂಕ್ರಾಂತಿ ಆಚರಣೆ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಜನವರಿ.12 : ನಗರದ‌ ಎಸ್.ಆರ್.ಎಸ್ ಹೆರಿಟೇಜ್ ಶಾಲೆಯಲ್ಲಿ 3 ಮತ್ತು 4 ನೇ ತರಗತಿಯ ಮಕ್ಕಳಿಂದ ಸಡಗರ ಸಂಭ್ರಮದಿಂದ ಮಕರ ಸಂಕ್ರಾಂತಿಯ ಹಬ್ಬವನ್ನು ಆಚರಿಸಲಾಯಿತು.

ಶಾಲೆಯ ಪ್ರಾಂಶುಪಾಲ ಪ್ರಭಾಕರ್ ಎಮ್ ಎಸ್ ಮಾತನಾಡಿ,
ಸಂಕ್ರಾಂತಿ ಪೌರಾಣಿಕ ಮತ್ತು ವೈಜ್ಞಾನಿಕ ಹಿನ್ನಲೆಯುಳ್ಳ ಹಬ್ಬವಾಗಿದೆ ಹಾಗೂ ಹಬ್ಬ ಒಂದೇ ಆದರೂ ಬೇರೇ ಬೇರೇ ರಾಜ್ಯಗಳಲ್ಲಿ ಬೇರೇ ಬೇರೇ ಹೆಸರಿನಿಂದ ಆಚರಿಸುವಂತಹ ಬಹಳಷ್ಟು ಹಬ್ಬಗಳಿದ್ದು “ಸಂಕ್ರಾಂತಿ” ಈ ರೀತಿಯ ಆಚರಣೆಗೆ ಒಳಪಡುವ ಹಬ್ಬವಾಗಿದೆ. ಹಾಗೂ ಮಕರ ಸಂಕ್ರಾಂತಿಯಂದು ಸೂರ್ಯನು ಒಂದು ರಾಶಿಯಿಂದ ಇನ್ನೊಂದು ರಾಶಿಗೆ ಪ್ರವೇಶ ಪಡೆಯುತ್ತಾನೆ. ಇದು ಸೂರ್ಯನು ಉತ್ತರ ದಿಕ್ಕಿಗೆ ಪ್ರಯಾಣ ಮಾಡುವುದರ ಜೊತೆಗೆ ಚಳಿಗಾಲದ ಅಂತ್ಯವನ್ನು ಸೂಚಿಸುತ್ತದೆ. ಈ ದಿನದಂದು ಜಾನುವಾರಗಳನ್ನು ಕಿಚ್ಚಿಗೆ ಹಾಯಿಸುವುದು. ಎಳ್ಳುಬೆಲ್ಲದಿಂದ ತಯಾರಿಸಿದ ಸಿಹಿತಿನಿಸುಗಳನ್ನು ತಿನ್ನುವುದು, ವಿವಿಧ ರೀತಿ ಆಚರಣೆಗಳು ಮತ್ತು ಈ ಹಬ್ಬದ ಭಾಗವಾಗಿದೆ ಎಂದು ಹೇಳಿದರು.

ಮಕರ ಸಂಕ್ರಾಂತಿಯನ್ನು ಸೂಚಿಸುವ ಸೂರ್ಯ ದೇವರಿಗೆ ಸಮರ್ಪಿತ ಸುಗ್ಗಿಯ ಹಬ್ಬವಾದ ಸಂಕ್ರಾಂತಿ ಸಂಭ್ರಮವನ್ನು ವಿದ್ಯಾರ್ಥಿಗಳು ಉತ್ಸಾಹದಿಂದ ಶಾಲೆಯ ಹೊರಾಂಗಣದ ಪ್ರವೇಶ ದ್ವಾರದ ಹೊರಗೆ ಹೂವು, ತಳಿರುತೋರಣ. ಕಬ್ಬು, ವರ್ಣರಂಜಿತ ರಂಗೋಲಿಯಿಂದ ಅಲಂಕರಿಸಿ ನಂತರ ಪೊಂಗಲ್ ತಯಾರಿಸಿದರು. ಇವು ಅದೃಷ್ಟ ಮತ್ತು ಸಮೃದ್ಧಿಯನ್ನು ತರುತ್ತದೆ ಎಂದು ನಂಬಲಾಗಿದೆ. ಸುಗ್ಗಿಯ ಬೆಳೆಗಾಗಿ ಸೂರ್ಯ ದೇವರಿಗೆ ಕೃತಜ್ಞತೆ ಸಲ್ಲಿಸಲು ಸಾಂಪ್ರದಾಯಕ ಹಾಗೂ ವರ್ಣರಂಜಿತ ಉಡುಗೆಯಲ್ಲಿ ವಿದ್ಯಾರ್ಥಿಗಳು ನೆರೆದಿದ್ದರು.

ಪ್ರಾಂಶುಪಾಲರು, ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದ ಧಾನ್ಯದ ರಾಶಿಗೆ ಪೂಜೆ ಸಲ್ಲಿಸಿದರು.

ಈ ಕಾರ್ಯಕ್ರಮವನ್ನು ಎಸ್.ಆರ್.ಎಸ್. ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಬಿ ಎ ಲಿಂಗಾರೆಡ್ಡಿ ಹಾಗೂ ಎಸ್.ಆ‌ರ್.ಎಸ್. ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀಮತಿ ಸುಜಾತ ಲಿಂಗಾರೆಡ್ಡಿ ಉಪಾಧ್ಯಕ್ಷರಾದ ಅಮೋಫ್ ಬಿ ಎಲ್ ಹಾಗೂ ಆಡಳಿತ ಮಂಡಳಿ ಪ್ರಶಂಶಿಸಿದ್ದಾರೆ. ಶೈಕ್ಷಣಿಕ ಸಂಯೋಜಕರು, ಶಿಕ್ಷಕವೃಂದದವರು ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಾದವಾರದಲ್ಲಿ ಸಿಕ್ಕ ಕೋಟಿ ಕೋಟಿ ಹಣ : ಮೆಸೇಜ್ ಮಾಡಿ, ಕಾಲ್ ಮಾಡಿ ಸಂಕಷ್ಟಕ್ಕೆ ಸಿಲುಕಿದರಾ ಕೆ‌.ಸುಧಾಕರ್..?

ಬೆಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆ ಕಂತೆವಕಂತೆ ಹಣ ಸಾಗಾಣೆಯಾಗುವುದು ಸರ್ವೇ ಸಾಮಾನ್ಯ. ಚುನಾವಣೆಯಲ್ಲಿ ಹಣ ಸಾಗಾಟ ನಡೆಯುತ್ತದೆ ಎಂದೇ ಪೊಲೀಸರು ಹದ್ದಿನ ಕಣ್ಣು ಇಡುತ್ತಾರೆ. ಏಪ್ರಿಲ್ 25ರಂದು ಬಿಜೆಪಿ ಮುಖಂಡನ ಮನೆಯಲ್ಲಿ ಕೋಟಿ ಕೋಟಿ

ಕೇಂದ್ರದಿಂದ ರಾಜ್ಯಕ್ಕೆ ಬರಪರಿಹಾರ ಹಣ ಬಿಡುಗಡೆ : ಕೇಳಿದ್ದು ಎಷ್ಟು ಕೋಟಿ, ಕೊಟ್ಟಿದ್ದು ಎಷ್ಟು ಕೋಟಿ ಗೊತ್ತಾ..?

ಬೆಂಗಳೂರು: ರಾಜ್ಯಕ್ಕೆ ಬರಬೇಕಾದ ಬರ ಪರಿಹಾರ ಹಣವನ್ನು ಬಿಡುಗಡೆ ಮಾಡಬೇಕೆಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿತ್ತು. ಈ ಬೆನ್ನಲ್ಲೇ ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡಿದೆ. ಕರ್ನಾಟಕಕ್ಕೆ 3,454 ಕೋಟಿ ಹಣ ಬಿಡುಗಡೆ

ಖುಷಿಯಿಂದ ಕ್ಷೇತ್ರದ ಜನರ ಸೇವೆ ಸಲ್ಲಿಸುತ್ತೇನೆ : ಗೋವಿಂದ ಕಾರಜೋಳ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 27 ; ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು ಎಪ್ಪತ್ತು ವರ್ಷಗಳಾಗಿದ್ದರು ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿರುವ ಇಲ್ಲಿನ ಜನ ಮುಗ್ದರು ಅಮಾಯಕರು, ಕುಡಿಯುವ ನೀರಿಗೂ ಸಮಸ್ಯೆಯಿದೆ ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ.

error: Content is protected !!