Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರೈತರೊಂದಿಗೆ ಒಂದು ದಿನಕ್ಕೆ ವರ್ಷದ ಸಂಭ್ರಮ : ಸಚಿವ ಬಿ ಸಿ ಪಾಟೀಲ್ ಗೆ ಹರುಷ

Facebook
Twitter
Telegram
WhatsApp

ಬೆಂಗಳೂರು: ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರ ಮಹತ್ವಾಕಾಂಕ್ಷೆಯ ರೈತರೊಂದಿಗೊಂದು ದಿನ ಕಾರ್ಯಕ್ರಮಕ್ಕೆ ಇಂದಿಗೆ ಒಂದು ವರ್ಷ ತುಂಬಿದೆ. ಇದೇ ಖುಷಿಯಲ್ಲಿ ಸಚಿವ ಬಿ ಸಿ ಪಾಟೀಲ್ ತಮ್ಮ ಹುಟ್ಟುಹಬ್ಬವನ್ನ ರೈತರೊಂದಿಗೆ ಆಚರಿಸಿಕೊಳ್ಳಲು ನಿರ್ಧರಿಸಿದ್ದಾರೆ. ಕಳೆದ ಬಾರಿಯೂ ಅವರ ಹುಟ್ಟುಹಬ್ಬವನ್ನ ರೈತರೊಟ್ಟಿಗೇನೆ ಆಚರಿಸಿದ್ದರು. ಅಂದ್ಹಾಗೆ ನ.14 ಬಿ ಸಿಪಾಟೀಲರ ಜನ್ಮದಿನ.

ರೈತರಿಗೆ ಆತ್ಮವಿಶ್ವಾಸ ಮೂಡಿಸುವ ನಿಟ್ಟಿನಲ್ಲಿ ಆತ್ಮಹತ್ಯೆ ತಡೆಗಟ್ಟಿ ಕೋಲಾರ ಮಾದರಿಯ ಸಮಗ್ರ ಕೃಷಿ ಪದ್ಧತಿ ಅಳವಡಿಸಲು ರೈತರಲ್ಲಿ ಈ ಕುರಿತು ಜಾಗೃತಿ ಹೆಚ್ಚಿಸಲು ಆರಂಭವಾಗಿದ್ದೇ “ರೈತರೊಂದಿಗೊಂದು ದಿನ”. ಕಳೆದ ನ.14 ರಂದು ಆರಂಭವಾದ ಈ ದಿನ ಈಗ ಒಂದು ವರ್ಷ ಪೂರೈಸುತ್ತಿದ್ದು, ರೈತರೊಂದಿಗೊಂದು ದಿನ ಕಾರ್ಯಕ್ರಮವನ್ನು ಮೆಚ್ಚಿ ಕೃಷಿ ಇಲಾಖೆಗೆ ಸ್ವಯಂಪ್ರೇರಿತರಾಗಿ ರಾಯಭಾರಿಯಾಗಿರುವ ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಈ ಬಾರಿಯ “ರೈತರೊಂದಿಗೊಂದು ದಿನ” ಕಾರ್ಯಕ್ರಮದಲ್ಲಿ ಕೃಷಿ ಸಚಿವರೊಂದಿಗೆ ಪಾಲ್ಗೊಳ್ಳುತ್ತಿದ್ದಾರೆ.

ರೈತರೊಂದಿಗೊಂದು ದಿನ ಈಗಾಗಲೇ 10 ಜಿಲ್ಲೆಗಳಲ್ಲಿ ನಡೆದಿದ್ದು, ಹಾವೇರಿ 11 ನೇ ಜಿಲ್ಲೆಯಾಗಿದೆ. ಬಿ.ಸಿ.ಪಾಟೀಲರು ಕೋವಿಡ್ ನಿರ್ಬಂಧದಲ್ಲಿಯೂ ರಾಜ್ಯದ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ರೈತರ ಸಂಕಷ್ಟವನ್ನು ಅರಿಯುವ ಪ್ರಯತ್ನ ಮಾಡಿದ್ದರು. ಇದೆಲ್ಲದರಿಂದ ರೂಪತಳೆದಿದ್ದೇ “ರೈತರೊಂದಿಗೊಂದು ದಿನ”. ಕೃಷಿ ಸಚಿವರು ಹಾಗೂ ಕೃಷಿ ಅಧಿಕಾರಿಗಳು ರೈತರ ಬಳಿಯೇ ತೆರಳಿ ಅವರ ಸಂಕಷ್ಟವನ್ನು ಅರಿತು ಸಾಧ್ಯವಾದಲ್ಲಿ ಸ್ಥಳೀಯವಾಗಿಯೇ ಸಮಸ್ಯೆಗಳನ್ನು ಪರಿಹರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಅಂದ್ಹಾಗೆ ಈ ಬಾರಿಯ ರೈತರೊಂದಿಗೊಂದು ದಿನ ಕೃಷಿ ಸಚಿವರ ಮತಕ್ಷೇತ್ರ ಹಿರೇಕೆರೂರಿನಲ್ಲಿ ಆಯೋಜನೆ ಮಾಡಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಣ್ಣಾವ್ರಿಗೆ ಅಣ್ಣಾವ್ರೇ ಸಾಟಿ, ಹಿರಿಯೂರಲ್ಲಿ ಬಿ.ಎನ್.ಚಂದ್ರಪ್ಪ ಬಣ್ಣನೆ

ಸುದ್ದಿಒನ್, ಚಿತ್ರದುರ್ಗ, ಏ. 24 :  ಮುಖ್ಯಮಂತ್ರಿ ಸ್ಥಾನವನ್ನು ಸುಲಭವಾಗಿ ಅಲಂಕರಿಸುವ ಬಂದಿದ್ದ ಅವಕಾಶವನ್ನು ನಿರಾಕರಿಸಿ, ಕನ್ನಡ ನಾಡು-ನುಡಿಗೆ ಬದುಕು ಮಿಸಲಿಟ್ಟ ಡಾ.ರಾಜಕುಮಾರ್ ಅವರಿಗೆ ಅವರೇ ಸಾಟಿ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಬಣ್ಣಿಸಿದರು.

ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಸುಳ್ಳು ಹೇಳಿದರೆ ತಾಯಿ ಭದ್ರೆ ಸಹಿಸುವುದಿಲ್ಲ : ಕಮಲ ಪಡೆಗೆ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ತಿರುಗೇಟು

ಸುದ್ದಿಒನ್, ಚಿತ್ರದುರ್ಗ, ಏ. 24 : ಭದ್ರಾ ಮೇಲ್ದಂಡೆ ಯೋಜನೆ ವಿಷಯದಲ್ಲಿ ನಿರಂತರ ಸುಳ್ಳು ಹೇಳಿಕೊಂಡು ಬರುತ್ತಿರುವ ಬಿಜೆಪಿಯವರಿಗೆ ಭದ್ರಾ ಮೇಲ್ದಂಡೆ ಯೋಜನೆ ಜಾರಿ, ಅದಕ್ಕಾಗಿ ನಡೆದ ಹೋರಾಟದ ಮಾಹಿತಿ ಕೊರತೆ ಇದೆ ಅಥವಾ

ಏಪ್ರಿಲ್ 26 ರಂದು ಲೋಕಸಭೆ ಚುನಾವಣೆ | ಸಾರ್ವತ್ರಿಕ ರಜಾದಿನ ಘೋಷಣೆ

ಚಿತ್ರದುರ್ಗ. ಏ.24: ಎರಡನೇ ಹಂತದ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಏಪ್ರಿಲ್ 26 ರಂದು ಚಿತ್ರದುರ್ಗ ಜಿಲ್ಲೆಯಲ್ಲಿ ಮತದಾನ ಜರುಗಲಿದೆ. ಮತದಾನದ ದಿನವನ್ನು ಸಾರ್ವತ್ರಿಕ ರಜಾದಿನವನ್ನಾಗಿ ಘೋಷಣೆ ಮಾಡಲಾಗಿದೆ. ಅಂದು ಎಲ್ಲಾ ಸರ್ಕಾರಿ ಹಾಗೂ ಖಾಸಗಿ

error: Content is protected !!