Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದಲ್ಲಿ ಸಂಭ್ರಮದ ವರಮಹಾಲಕ್ಷ್ಮೀ ಹಬ್ಬ ಆಚರಣೆ

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್.16 : ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯಾದ್ಯಂತ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಬೆಲೆ ಏರಿಕೆಯ ನಡುವೆಯೂ ಜನರು ಅದ್ದೂರಿಯಾಗಿ ವರ ಮಹಾಲಕ್ಷ್ಮಿ ಪೂಜೆಯಲ್ಲಿ ತೊಡಗಿಕೊಂಡಿರುವ ದೃಶ್ಯಗಳು ಕಂಡುಬಂದವು.


ವಿದ್ಯಾ ನಗರದ ಶ್ರೀಮತಿ ಸುನೀತಾ ಮಲ್ಲಿಕಾರ್ಜುನ ಅವರ ಮನೆಯಲ್ಲಿ ವರಮಹಾಲಕ್ಷ್ಮಿ ಹಬ್ಬ ಆಚರಣೆ

ನಗರದ ಜೆಸಿಆರ್ ಬಡಾವಣೆಯ ಶ್ರೀಮತಿ ನೇತ್ರಾ ಲೋಕೇಶ್ ಅವರ ಮನೆಯಲ್ಲಿ ವರಮಹಾಲಕ್ಷ್ಮಿ ಹಬ್ಬ ಆಚರಣೆ

ನಗರದ ಜೆಸಿಆರ್ ಬಡಾವಣೆಯ ಶ್ರೀಮತಿ ಹೇಮಾ ರಂಗನಾಥ ಅವರ ಮನೆಯಲ್ಲಿ ವರಮಹಾಲಕ್ಷ್ಮಿ ಹಬ್ಬ ಆಚರಣೆ

ಶ್ರಾವಣ ಮಾಸದಲ್ಲಿ ಬರುವ ಸಾಲು ಸಾಲು ಹಬ್ಬಗಳಲ್ಲಿ ಪ್ರಮುಖ ಹಬ್ಬ ಈ ವರಮಹಾಲಕ್ಷ್ಮಿ. ನಾಗರ ಪಂಚಮಿ ಹಬ್ಬದ ಬಳಿಕ ಬರುವ ಈ ವರಮಹಾಲಕ್ಷ್ಮಿ ಹಬ್ಬ, ವಿಶೇಷವಾಗಿ ಮಹಿಳೆಯರಿಗೆ ತುಂಬಾ ಅಚ್ಚುಮೆಚ್ಚು. ಹಬ್ಬಕ್ಕಾಗಿ ಕಳೆದ ಒಂದು ವಾರದಿಂದಲೇ ತಯಾರಿಯಲ್ಲಿ ತೊಡಗಿರುವ ಗೃಹಿಣಿಯರು ಮನೆಯಲ್ಲಿ ಮಹಾಲಕ್ಷ್ಮಿಯ ಮೂರ್ತಿ ಪ್ರತಿಷ್ಠಾಪಿಸಿ, ರೇಷ್ಮೆ ಸೀರೆ ತೊಡಿಸಿ, ಮಹಾಲಕ್ಷ್ಮಿಗೆ ಇಷ್ಟವಾದ ಕಮಲ, ತಾವರೆ, ಗುಲಾಬಿ, ಸೇವಂತಿ, ಮಲ್ಲಿಗೆ ಹೂವು ಇತ್ಯಾದಿ ಹೂಗಳಿಂದ ಮಹಾಲಕ್ಷ್ಮಿ ಯನ್ನು ಅಂದವಾಗಿ ಅಲಂಕರಿಸಿ ವಿಧವಿಧವಾದ ಖಾದ್ಯಗಳನ್ನು ತಯಾರಿಸಿ ದೇವಿಗೆ ಅರ್ಪಿಸಿ, ದಿನವಿಡಿ ವ್ರತಾಧಾರಿಗಳಾಗಿ, ಮುತ್ತೈದೆಯರೆಲ್ಲ ಸೇರಿಕೊಂಡು ಅತ್ಯಂತ ಶ್ರದ್ಧಾಭಕ್ತಿಯಿಂದ ವರವ ಕೊಡೇ ಮಹಾಲಕ್ಷ್ಮಿ ಎಂದು ದೇವಿಯಲ್ಲಿ ಪಾರ್ಥನೆಯನ್ನು ಸಲ್ಲಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!