Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಕೇಂದ್ರ ಬಜೆಟ್ | ತುಮಕೂರು ಚಿತ್ರದುರ್ಗ ದಾವಣಗೆರೆ ನೇರ ರೈಲ್ವೆ ಯೋಜನೆ ಕಾಮಗಾರಿಗೆ 300 ಕೋಟಿ ಅನುದಾನ ಮೀಸಲು

---Advertisement---

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.01 : ಕೇಂದ್ರ ಸರ್ಕಾರ ಗುರುವಾರ ಮಂಡಿಸಿದ ಮಧ್ಯಂತರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಒಟ್ಟು 7524 ಕೋಟಿ ರೂಪಾಯಿಗಳ ಅನುದಾನವನ್ನು ಮೀಸಲಿಡಲಾಗಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.

ಇದರಲ್ಲಿ ತುಮಕೂರು -ಚಿತ್ರದುರ್ಗ-ದಾವಣಗೆರೆ ನೇರ ರೈಲ್ವೆ ಕಾಮಗಾರಿಗೆ 300ಕೋಟಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಬಜೆಟ್ ಮಂಡನೆಯಲ್ಲಿ ಘೋಷಿಸಿದ್ದಾರೆ.

ಹಿಂದಿನ ಯುಪಿಎ ಸರ್ಕಾರದ ಅವಧಿಯಲ್ಲಿ ನೀಡಿದ್ದ ಬಜೆಟ್‌ಗಿಂತ ಹೆಚ್ಚು ಹಣ ಹಂಚಿಕೆ ಮಾಡಲಾಗಿದ್ದು, ಕರ್ನಾಟಕದಲ್ಲಿ ರೈಲ್ವೆಗೆ ಸಂಬಂಧಿಸಿದ ವಿವಿಧ ಮೂಲಸೌಕರ್ಯಗಳ ಅಭಿವೃದ್ಧಿ, ನಿಲ್ದಾಣಗಳು ಮತ್ತು ರೈಲುಗಳ ಆಧುನೀಕರಣ, ಸಂಪರ್ಕದ ವರ್ಧನೆ, ಪ್ರಯಾಣಿಕರಿಗೆ ಸುರಕ್ಷತೆ ಮತ್ತು ಸೌಕರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ ಎಂದು ಅವರು ಹೇಳಿದರು.

 

ಹೊಸ ಮಾರ್ಗಕ್ಕೆ 2286 ಕೋಟಿ ರೂ. ಡಬ್ಲಿಂಗ್‌ಗೆ 1531 ಕೋಟಿ ರೂ. ಪ್ರಯಾಣಿಕರಿಗೆ ನಿರಂತರ ಉತ್ತಮ ಸೇವೆಯನ್ನು ನೀಡಲು ರೂ.987 ಕೋಟಿಗಳನ್ನು ಪ್ರಯಾಣಿಕರ ಸೌಕರ್ಯಗಳಿಗಾಗಿ ವಿನಿಯೋಗಿಸಲಾಗಿದೆ.

ಕೇಂದ್ರ ಬಜೆಟ್‌ ನಲ್ಲಿ ರಾಜ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚು ಹೆಚ್ಚು ಅನುದಾನ ಸಿಗಲಿದೆ ಎನ್ನಲಾಗುತ್ತಿತ್ತು. ಕೇಂದ್ರ ರೈಲ್ವೆ ಬಜೆಟ್‌ ಕೂಡ ಸೇರಿರುವುದರಿಂದ ಕರ್ನಾಟಕದ ಹಲವಾರು ರೈಲ್ವೆ ಯೋಜನೆಗಳಿಗೆ ಈ ಬಾರಿ ಹೆಚ್ಚಿನ ಒತ್ತು ಸಿಗಬಹುದಾಗಿದೆ. ಅದರಲ್ಲೂ ಕರ್ನಾಟಕದ ರೈಲ್ವೆ ಮಾರ್ಗಗಳ ಉನ್ನತೀಕರಣ, ಹೊಸ ರೈಲುಗಳ ಮಾರ್ಗಗಳ ಬೇಡಿಕೆ, ಅನುದಾನ ಹಂಚಿಕೆ, ಹೊಸ ರೈಲುಗಳ ಆರಂಭದ ಹಲವಾರು ಬೇಡಿಕೆಗಳನ್ನು ಈಗಾಗಲೇ ರೈಲ್ವೆ ಅಧಿಕಾರಿಗಳು ಸಲ್ಲಿಸಿದ್ಧಾರೆ. ರೈಲು ಪ್ರಯಾಣಿಕರಿಂದಲೂ ಸಾಕಷ್ಟು ಬೇಡಿಕೆಗಳಿವೆ.

ಮಧ್ಯ ಕರ್ನಾಟಕದ ಬಹು ನಿರೀಕ್ಷಿತ ಯೋಜನೆಯಾದ ತುಮಕೂರು ಚಿತ್ರದುರ್ಗ ಹಾಗೂ ದಾವಣಗೆರೆ ನೇರ ರೈಲ್ವೆ ಕಾಮಗಾರಿ ತ್ವರಿತಗತಿಯಲ್ಲಿ ನಡೆಯುತ್ತಿದೆ. ಕೆಲವು ವರ್ಷಗಳಲ್ಲಿ ಕಾಮಗಾರಿ ಪೂರ್ಣಗೊಳಿಸುವ ನಿರೀಕ್ಷೆ ಇದೆ ಎನ್ನಬಹುದು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...