Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೇಂದ್ರ ಬಜೆಟ್ | ತುಮಕೂರು ಚಿತ್ರದುರ್ಗ ದಾವಣಗೆರೆ ನೇರ ರೈಲ್ವೆ ಯೋಜನೆ ಕಾಮಗಾರಿಗೆ 300 ಕೋಟಿ ಅನುದಾನ ಮೀಸಲು

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.01 : ಕೇಂದ್ರ ಸರ್ಕಾರ ಗುರುವಾರ ಮಂಡಿಸಿದ ಮಧ್ಯಂತರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಒಟ್ಟು 7524 ಕೋಟಿ ರೂಪಾಯಿಗಳ ಅನುದಾನವನ್ನು ಮೀಸಲಿಡಲಾಗಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.

ಇದರಲ್ಲಿ ತುಮಕೂರು -ಚಿತ್ರದುರ್ಗ-ದಾವಣಗೆರೆ ನೇರ ರೈಲ್ವೆ ಕಾಮಗಾರಿಗೆ 300ಕೋಟಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಬಜೆಟ್ ಮಂಡನೆಯಲ್ಲಿ ಘೋಷಿಸಿದ್ದಾರೆ.

ಹಿಂದಿನ ಯುಪಿಎ ಸರ್ಕಾರದ ಅವಧಿಯಲ್ಲಿ ನೀಡಿದ್ದ ಬಜೆಟ್‌ಗಿಂತ ಹೆಚ್ಚು ಹಣ ಹಂಚಿಕೆ ಮಾಡಲಾಗಿದ್ದು, ಕರ್ನಾಟಕದಲ್ಲಿ ರೈಲ್ವೆಗೆ ಸಂಬಂಧಿಸಿದ ವಿವಿಧ ಮೂಲಸೌಕರ್ಯಗಳ ಅಭಿವೃದ್ಧಿ, ನಿಲ್ದಾಣಗಳು ಮತ್ತು ರೈಲುಗಳ ಆಧುನೀಕರಣ, ಸಂಪರ್ಕದ ವರ್ಧನೆ, ಪ್ರಯಾಣಿಕರಿಗೆ ಸುರಕ್ಷತೆ ಮತ್ತು ಸೌಕರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ ಎಂದು ಅವರು ಹೇಳಿದರು.

 

ಹೊಸ ಮಾರ್ಗಕ್ಕೆ 2286 ಕೋಟಿ ರೂ. ಡಬ್ಲಿಂಗ್‌ಗೆ 1531 ಕೋಟಿ ರೂ. ಪ್ರಯಾಣಿಕರಿಗೆ ನಿರಂತರ ಉತ್ತಮ ಸೇವೆಯನ್ನು ನೀಡಲು ರೂ.987 ಕೋಟಿಗಳನ್ನು ಪ್ರಯಾಣಿಕರ ಸೌಕರ್ಯಗಳಿಗಾಗಿ ವಿನಿಯೋಗಿಸಲಾಗಿದೆ.

ಕೇಂದ್ರ ಬಜೆಟ್‌ ನಲ್ಲಿ ರಾಜ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚು ಹೆಚ್ಚು ಅನುದಾನ ಸಿಗಲಿದೆ ಎನ್ನಲಾಗುತ್ತಿತ್ತು. ಕೇಂದ್ರ ರೈಲ್ವೆ ಬಜೆಟ್‌ ಕೂಡ ಸೇರಿರುವುದರಿಂದ ಕರ್ನಾಟಕದ ಹಲವಾರು ರೈಲ್ವೆ ಯೋಜನೆಗಳಿಗೆ ಈ ಬಾರಿ ಹೆಚ್ಚಿನ ಒತ್ತು ಸಿಗಬಹುದಾಗಿದೆ. ಅದರಲ್ಲೂ ಕರ್ನಾಟಕದ ರೈಲ್ವೆ ಮಾರ್ಗಗಳ ಉನ್ನತೀಕರಣ, ಹೊಸ ರೈಲುಗಳ ಮಾರ್ಗಗಳ ಬೇಡಿಕೆ, ಅನುದಾನ ಹಂಚಿಕೆ, ಹೊಸ ರೈಲುಗಳ ಆರಂಭದ ಹಲವಾರು ಬೇಡಿಕೆಗಳನ್ನು ಈಗಾಗಲೇ ರೈಲ್ವೆ ಅಧಿಕಾರಿಗಳು ಸಲ್ಲಿಸಿದ್ಧಾರೆ. ರೈಲು ಪ್ರಯಾಣಿಕರಿಂದಲೂ ಸಾಕಷ್ಟು ಬೇಡಿಕೆಗಳಿವೆ.

ಮಧ್ಯ ಕರ್ನಾಟಕದ ಬಹು ನಿರೀಕ್ಷಿತ ಯೋಜನೆಯಾದ ತುಮಕೂರು ಚಿತ್ರದುರ್ಗ ಹಾಗೂ ದಾವಣಗೆರೆ ನೇರ ರೈಲ್ವೆ ಕಾಮಗಾರಿ ತ್ವರಿತಗತಿಯಲ್ಲಿ ನಡೆಯುತ್ತಿದೆ. ಕೆಲವು ವರ್ಷಗಳಲ್ಲಿ ಕಾಮಗಾರಿ ಪೂರ್ಣಗೊಳಿಸುವ ನಿರೀಕ್ಷೆ ಇದೆ ಎನ್ನಬಹುದು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮದಕರಿಪುರದಲ್ಲಿ ಕೊಲ್ಲಾಪುರದಮ್ಮ ಜಾತ್ರೆ | ಕೋಣ ಗುದ್ದಿ ಓರ್ವ ಮೃತ

  ಸುದ್ದಿಒನ್, ಚಿತ್ರದುರ್ಗ, ಮೇ. 01 : ಜಾತ್ರೆಯಲ್ಲಿ ದೇವಿಗೆ ಕೋಣ ಬಲಿ ಕೊಡುವ ವೇಳೆ ಕೊಣ ಗುದ್ದಿ ಕೊಲ್ಲಪ್ಪ (53 ವರ್ಷ) ಎಂಬಾತ ಸಾವನ್ನಪ್ಪಿದ ಘಟನೆ ತಾಲ್ಲೂಕಿನ ಮದಕರಿ ಪುರ ಗ್ರಾಮದಲ್ಲಿ ಇಂದು

ರಾಹುಲ್ ಚೌದ್ರಿ ನಿಧನ

  ಹಿರಿಯೂರು, ಸುದ್ದಿಒನ್, ಮೇ. 01 : ತಾಲ್ಲೂಕಿನ ಮರಡಿಹಳ್ಳಿ ಗ್ರಾಮದ ರಾಹುಲ್ ಚೌದ್ರಿ (34) ಅವರು ಅನಾರೋಗ್ಯದಿಂದ ಇಂದು(ಬುಧವಾರ) ನಿಧನ ಹೊಂದಿದರು. ಮೃತರು ಪತ್ನಿ, ಇಬ್ಬರು ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗದವರನ್ನು

ಹೆಚ್ಚು ನೀರು ಕುಡಿಯುವುದು ಅಪಾಯಕಾರಿಯೇ ?

ಸುದ್ದಿಒನ್ : ಬೇಸಿಗೆಯಲ್ಲಿ ನಮ್ಮ ದೇಹದಲ್ಲಿ ನೀರಿನಂಶ ಕಡಿಮೆಯಾದರೆ ಹಲವು ರೀತಿಯ ಆರೋಗ್ಯ ಸಮಸ್ಯೆಗಳು ಉದ್ಭವಿಸುತ್ತವೆ. ಅದಕ್ಕಾಗಿಯೇ ವೈದ್ಯರು ಬೇಸಿಗೆಯಲ್ಲಿ ಹೆಚ್ಚು ನೀರು ಕುಡಿಯಲು ಹೇಳುತ್ತಾರೆ. ಹೆಚ್ಚು ನೀರು ಇರುವ ಹಣ್ಣುಗಳು ಮತ್ತು ಆಹಾರಗಳನ್ನು

error: Content is protected !!