Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ರೈತರಿಗೆ ಬಂಪರ್ ಆಫರ್ ನೀಡಿದ ಕೇಂದ್ರ ಸರ್ಕಾರ ; ಏನದು..?

---Advertisement---

ರೈತರಿಗೆ ಯುಗಾದಿ ಹಬ್ಬದ ಬೆನ್ನಲ್ಲೇ ಕೇಂದ್ರ ಸರ್ಕಾರ ಸಿಹಿ ಸುದ್ದಿಯನ್ನ ನೀಡಿದೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ನಡರದ ಸಚಿವ ಸಂಪುಟ ಸಭೆಯಲ್ಲಿ ರಸಗೊಬ್ಬರದ ಮೇಲೆ ಪೋಷಾಕಾಂಶ ಆಧಾರಿತ ಸಬ್ಸಿಡಿ‌ ನೀಡಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಸಚಿವ ಸಂಪುಟ ಸಭೆಯಲ್ಲಿ ಫಾಸ್ಫೆಟಿಕ್ ಮತ್ತು ಪೊಟ್ಯಾಸಿಯಮ್‌ ರಸಗೊಬ್ಬರಗಳ ಮೇಲೆ ಖಾರಿಫ್ -2025 ಇಂದಿನಿಂದ ಅಂದರೆ 1-4-2025 ರಿಂದ ಐದು ತಿಂಗಳ ಕಾಲ ಅಂದರೆ 30-9-2025ರ ತನಕ ಪೋಷಕಾಂಶ ಆಧಾರಿತ ಸಬ್ಸಿಡಿ ದರಗಳಿಗೆ ಅನುಮೋದನೆ ನೀಡಿದೆ‌.

2025ರ ಖಾರಿಫ್ ಋತುವಿಗೆ ಪಿ ಮತ್ತು ಕೆ ರಸಗೊಬ್ಬರಗಳ ಮೇಲೆ ಪೋಷಾಕಾಂಶ ಆಧಾರಿತ ಸಬ್ಸಿಡಿ ದರಗಳನ್ನು ನಿಗದಿಪಡಿಸಲು ರಸಗೊಬ್ಬರ ಇಲಾಖೆಯು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಕೆ ಮಾಡಿತ್ತು. ಇದಕ್ಕೆ ಒಪ್ಪಿಗೆ ನೀಡಲಾಗಿದೆ.2024ರ ಖಾರಿಫ್ ಋತುವಿಗೆ ಬಜೆಟ್ ಅವಶ್ಯಕತೆ ಸುಮಾರು 37,216,15 ಕೋಟಿ ರೂಪಾಯಿ ಇದೆ. 2024-25ರ ರಬಿ ಋತುವಿನ ಬಜೆಟ್ ಅಗತ್ಯಕ್ಕಿಂತ ಅಂದಾಜು 13 ಸಾವುರ ಕೋಟಿ ರೂಪಾಯಿ ಹೆಚ್ಚಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ರಸಗೊಬ್ಬರ ಸಬ್ಸಿಡಿ ನೀಡುವುದರಿಂದ ಕಡಿಮೆ ದರದಲ್ಲಿ ಕೈಗೆಟಕುವ ಮತ್ತು ಸಮಂಜಸವಾದ ಬೆಲೆಯಲ್ಲಿ ರೈತರಿಗೆ ರಸಗೊಬ್ಬರ ಲಭ್ಯವಾಗಲಿದೆ. ರಸಗೊಬ್ಬರದ ಬೆಲೆ ಮತ್ತು ಅಂತರಾಷ್ಟ್ರೀಯ ಬೆಲೆಗಳಲ್ಲಿನ ಇತ್ತೀಚಿನ ಪ್ರವೃತ್ತಿಗಳನ್ನು ಗಮನದಲ್ಲಿಟ್ಟುಕೊಂಡು ಪಿ ಮತ್ತು ಕೆ ರಸಗೊಬ್ಬರಗಳ ಮೇಲಿನ ಸಬ್ಸಿಡಿಯನ್ನು ತರ್ಕಬದ್ಧಗೊಳಿಸುತ್ತದೆ. ಸರ್ಕಾರವು ರಸಗೊಬ್ಬರ ತಯಾರಕರು ಅಥವಾ ಆಮದುದಾರರ ಮೂಲಕ ರೈತರುಗೆ ಸಬ್ಸಿಡು ದರದಲ್ಲಿ 28 ದರ್ಜೆಯ ಪಿ ಮತ್ತು ಕೆ ರಸಗೊಬ್ಬರಗಳನ್ನು ಒದಗಿಸುತ್ತಿದೆ. ರೈತ ಸ್ನೇಹಿ ವಿಧಾನಕ್ಕೆ ಅನುಗುಣವಾಗಿ ರೈತರಿಗೆ ಕೈಗೆಟಕುವ ಬೆಲೆಯಲ್ಲಿ ರಸಗೊಬ್ಬರ ನೀಡಲು ಕೇಂದ್ರ ಸರ್ಕಾರ ಬದ್ಧವಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...