ಕೇಂದ್ರದಿಂದ ಬಿಡುಗಡೆಯಾಯ್ತು GST ಹಣ : ರಾಜ್ಯಕ್ಕೆ ಸಿಕ್ಕಿದ್ದು ಎಷ್ಟು ಕೋಟಿ ಗೊತ್ತಾ..?

suddionenews
1 Min Read

ಬೆಂಗಳೂರು: ರಾಜ್ಯ ಮತ್ತು ಕೇಂದ್ರ ಎರಡು ಕಡೆ ಬಿಜೆಪಿ ಸರ್ಕಾರವೇ ಇದ್ದರೂ, ರಾಜ್ಯಕ್ಕೆ ಸಿಗಬೇಕಾದ ಹಣ ಸಿಗುವುದು ಕಷ್ಟ. ಅದರಲ್ಲಿ ಜಿಎಸ್ಟಿ ಹಣ ಕೂಡ ಒಂದು. ಆದರೆ ಸದ್ಯಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಮಾಹಿತಿ ಹಂಚಿಕೊಂಡಿರುವ ಪ್ರಕಾರ ರಾಜ್ಯಕ್ಕೆ ಜಿಎಸ್ಟಿ ಹಣ ಬಿಡುಗಡೆ ಮಾಡಲಾಗಿದೆ.

ರಾಜ್ಯಸಭಾ ಚುನಾವಣೆಗೆ ಬಿಜೆಪಿಯಿಂದ ನಟ ಜಗ್ಗೇಶ್ ಮತ್ತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ನಿನ್ನೆ ನಾಮಪತ್ರವನ್ನು ಸಲ್ಲಿಸಿದ್ದಾರೆ. ಈ ಬೆನ್ನಲ್ಲೇ ಕೇಂದ್ರದಿಂದ ಜಿಎಸ್ಟಿ ಹಣ ಬಿಡುಗಡೆಯಾಗಿದೆ‌. ಒಟ್ಟು 86,912 ಕೋಟಿ ಜಿಎಸ್ಟಿ ಹಣ ಬಿಡುಗಡೆಯಾಗಿದ್ದು, ಅದರಲ್ಲಿ 8,633 ಕೋಟಿ ಹಣ ರಾಜ್ಯಕ್ಕೆ ಸಿಕ್ಕಿದೆ.

ರಾಜ್ಯಕ್ಕೆ ಹಣ ಬಿಡುಗಡೆಯಾದ ಬೆನ್ನಲ್ಲೇ ಸಿಎಂ ಅವರು ಪ್ರಧಾನಿ ಮೋದಿ ಹಾಗೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಗೆ ಧನ್ಯವಾದ ತಿಳಿಸಿದ್ದಾರೆ. ರಾಜ್ಯಗಳಿಗೆ ನೀಡಬೇಕಾದ ಸಂಪೂರ್ಣ ಹಣವನ್ನು ನೀಡಿದ್ದಕ್ಕೆ ನಿರ್ಮಲಾ ಸೀತರಾಮನ್ ಅವರಿಗೆ ಧನ್ಯವಾದಗಳು. ರಾಜ್ಯಕ್ಕೆ ಸಿಗಬೇಕಾದ 8,633 ಕೋಟಿ ಹಣವನ್ನು ನೀಡಿದ್ದಕ್ಕೆ ಧನ್ಯವಾದ ಎಂದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *