Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮತ್ತೆ ಮುನ್ನೆಲೆಗೆ ಬಂದ ದಲಿತ ಸಿಎಂ ವಿಚಾರ: ಕನಸು ಕಾಣುವವನು ಹುಚ್ಚ ಎಂದ ನಾರಾಯಣಸ್ವಾಮಿ..!

Facebook
Twitter
Telegram
WhatsApp

ಆನೇಕಲ್: ಸಾಕಷ್ಟು ವರ್ಷಗಳಿಂದಲೂ ದಲಿತ ಸಿಎಂ ವಿಚಾರ ಆಗಾಗ ಸದ್ದು , ಗದ್ದಲ ಎಬ್ಬಿಸಿ, ಹಂಗೆ ತಣ್ಣಗಾಗಿಬಿಡುತ್ತದೆ. ಚುನಾವಣೆ ಹತ್ತಿರವಾಗುತ್ತಿದ್ದಂತೆ ಮತ್ತೆ ದಲಿತ ಸಿಎಂ ವಿಚಾರ ಮುನ್ನೆಲೆಗೆ ಬಂದಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಎ ನಾರಾಯಣ ಸ್ವಾಮಿ, ಕರ್ನಾಟಕ ರಾಜಕಾರಣದಲ್ಲಿ ದಲಿತ ಸಿಎಂ ಆಗುತ್ತಾನೆ ಅಂತ ಕನಸು ಕಾಣೋನು ಹುಚ್ಚ ಎಂದಿದ್ದಾರೆ.

ದಲಿತ ಸಿಎಂ ಚರ್ಚೆ ಕೇವಲ ರಾಜಕೀಯ ತೆವಲು ಅಷ್ಟೇ. ಈವರೆಗೆ ರಾಜ್ಯ ರಾಜಕಾರಣದಲ್ಲಿ ದಲಿತ ಸಿಎಂ ಯಾಕೆ ಆಗಿಲ್ಲ ಎಂಬುದಕ್ಕೆ ಈ ದೇಶದಲ್ಲಿ ಬಹಳಷ್ಟು ಉದಾಹರಣೆಗಳಿವೆ. ಸಂವಿಧಾನ ಬರೆದ ಡಾ.ಬಿ ಆರ್ ಅಂಬೇಡ್ಕರ್ ಅವರಿಗೆ ಐದು ವರ್ಷಗಳ ಕಾಲ ಮಂತ್ರಿಯಾಗಿ ಮುಂದುವರೆಯಲು ಬಿಡಲಿಲ್ಲ. ಆ ಬಳಿಕ ಅಂಬೇಡ್ಕರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಅವರ ಮನೆಗೆ ಹೋಗಿ, ಐದು ವರ್ಷ ಮುಂದುವರೆಯಿರಿ ಎಂದು ಹೇಳಲಿಲ್ಲ ಒಂದು ಕಪ್ ಟೀ ಕೂಡ ಕುಡಿಯಲಿಲ್ಲ ಎಂದಿದ್ದಾರೆ.

ಇನ್ನು ಮಲ್ಲಿಕಾರ್ಜುನ ಖರ್ಗೆಯವರು ಇನ್ನೇನು ಮುಖ್ಯಮಂತ್ರಿಯಾಗಬೇಕಿತ್ತು. ಆದರೆ ಅವರನ್ನು ಬೇಕು ಎಂದೇ ಮಾಡಲಿಲ್ಲ. ಪರಮೇಶ್ಚರ್ ಅವರು ಇನ್ನೆಲ್ಲಿ ಮುಖ್ಯಮಂತ್ರಿಯಾಗಿ ಬಿಡುತ್ತಾರೋ ಅಂತ ಅವರನ್ನು ಸೋಲಿಸಿದರು ಎಂದು ಆನೇಕಲ್ ನ ಸಾಯಿರಾಮ್ ಕಾಲೇಜಿನಲ್ಲಿ ಪದವಿ ಪ್ರಧಾನ ಕಾರ್ಯಕ್ರಮದಲ್ಲಿ ಈ ಬಗ್ಗೆ ಮಾತನಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕುಡಿಯುವ ನೀರಿನ ಸಮಸ್ಯೆ : ಮತದಾನ ಬಹಿಷ್ಕರಿಸಿದ್ದವರಿಂದ ಸಂಜೆ ವೇಳೆಗೆ ಮತದಾನ..!

ಚಿತ್ರದುರ್ಗ : ಇಂದು ಕರ್ನಾಟಕದಲ್ಲಿ ಮೊದಲ ಲೋಕಸಭಾ ಚುನಾವಣೆಗೆ ನಡೆದಿದೆ. ಎಷ್ಟೇ ಜಾಗೃತಿ ಮೂಡಿಸಿದರು ಸಾಕಷ್ಟು ಮಂದಿ ಮತದಾನ ಮಾಡಿಲ್ಲ. ಪರಿಪೂರ್ಣ ಮತದಾನ ನಡೆದಿಲ್ಲ. ಚುನಾವಣೆ ಬಂದಾಗೆಲ್ಲಾ ಜಾಗೃತಿ ಕಾರ್ಯ ನಡೆದರು ಮತದಾನ ಪೂರ್ಣವಾಗುವುದರಲ್ಲಿ

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಸಂಜೆ 5 ರವೇಳೆಗೆ ಶೇಕಡಾವಾರು ಮತದಾನ ಎಷ್ಟು ? 

ಚಿತ್ರದುರ್ಗ.ಏ.26: ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಏ.26 ರಂದು  ಜರುಗಿದ ಮತದಾನದಲ್ಲಿ ಸಂಜೆ 5 ಗಂಟೆ ವೇಳೆಗೆ  ಶೇ.67 ರಷ್ಟು ಮತದಾನ ದಾಖಲಾಗಿದೆ. ಸಂಜೆ 6 ಗಂಟೆಯವರೆಗೂ ಮತ ಚಲಾಯಿಸಲು ಅವಕಾಶವಿದ್ದು, ಮತದಾರರು ಉತ್ಸಾಹ ತೋರಿ

ಮತದಾನಕ್ಕೂ ಮುನ್ನ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳರವರು ಮತದಾನಕ್ಕೂ ಮುನ್ನ

error: Content is protected !!