Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸೆಪ್ಟೆಂಬರ್ 23ರ ತನಕ ಸಿಸಿಬಿ ಕಸ್ಟಡಿಗೆ ಚೈತ್ರಾ ಕುಂದಾಪುರ : ಕೋರ್ಟ್ ನಲ್ಲಿ ಹೇಳಿದ್ದೇನು..?

Facebook
Twitter
Telegram
WhatsApp

 

ಬೆಂಗಳೂರು: ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಏಳು ಕೋಟಿ ಹಣ ಪಡೆದ ಚೈತ್ರಾ ಕುಂದಾಪುರ ಈಗ ಪೊಲೀಸರ ವಶದಲ್ಲಿದ್ದಾರೆ. ಮುಂದಿನ 10 ದಿನಗಳ ಕಾಲ ಸಿಸಿಬಿ ಪೊಲೀಸರ ವಶಕ್ಕೆ ಚೈತ್ರಾರನ್ನು ಒಪ್ಪಿಸಲಾಗಿದೆ. ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್ ಈ ಸಂಬಂಧ ಆದೇಶ ನೀಡಿದೆ.

ಇನ್ನು ಚೈತ್ರಾ ಕುಂದಾಪುರ ವಶಕ್ಕೆ ಪಡೆದ ಬಳಿಕ ಪೊಲೀಸರು ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ಈ ವೇಳೆ ಜಡ್ಜ್ ಮುಂದೆ ಮಾತನಾಡಿದ ಆಕೆ, ನನಗೆ ಉಡುಪಿ ಪೊಲೀಸರು ಬಂಧಿಸುವಾಗ ಕಿರಿಕಿರಿ ಮಾಡಿದ್ದಾರೆ, ಸಿಸಿಬಿ ಪೊಲೀಸರು ಕೈ ಹಿಡಿದು ಎಳೆದಾಡಿದ್ದಾರೆ. ನನ್ನ ತಾಯಿಯ ಜೊತೆಗೆ ಮಾತನಾಡುವುದಕ್ಕೂ ಅವಕಾಶ ನೀಡಲಿಲ್ಲ. ನನ್ನ ಮೇಲೆ ಅಂತಹ ಯಾವ ಕೇಸ್ ಇದೆ ಎಂದು ನನಗೆ ಗೊತ್ತಿಲ್ಲ ಎಂದು ಕಣ್ಣೀರು ಹಾಕಿದ್ದಾರೆ ಎನ್ನಲಾಗಿದೆ.

ಇನ್ನು ಆರೋಪಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಅವರ ಮೇಲೆ ದಾಖಲಾದ ದೂರಿನ ಬಗ್ಗೆಯೂ ಮಾಹಿತಿ ನೀಡಲಾಗಿದೆ. ಆದರೆ ದೂರು ಕೊಟ್ಟವರ ಮಾಹಿತಿ ನೀಡಿಲ್ಲ. ಇನ್ನು ವಕೀಲರ ಜೊತೆಗೆ ಮಾತನಾಡಲು, ಕೋರ್ಟ್ ಆವರಣದಲ್ಲಿಯೇ ಸಮಯಾವಕಾಶ ನೀಡಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ ಡಿ ರೇವಣ್ಣಗೆ ಬಿಗ್ ರಿಲೀಫ್..!

ಬೆಂಗಳೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. 42ನೇ ಎಸಿಎಂಎಂ ಕೋರ್ಟ್ ನಿಂದ ಜಾಮೀನು ಮಂಜೂರಾಗಿದೆ. ಯುವತಿಯ ಕಿಡ್ನ್ಯಾಪ್ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ರೇವಣ್ಣ ಅವರು ಮಧ್ಯಂತರ

ಚಿತ್ರದುರ್ಗದಲ್ಲಿ ಹೊಸ ಡಯಾಲಿಸಿಸ್ ಕೇಂದ್ರ ಪ್ರಾರಂಭ : ನೊಂದಾಯಿತ ರೋಗಿಗಳಿಗೆ ಉಚಿತ ಸೇವೆ

ಚಿತ್ರದುರ್ಗ. ಮೇ.20: ನಗರದ ಜಿಲ್ಲಾಸ್ಪತ್ರೆಯಲ್ಲಿ ಫೆಬ್ರುವರಿ 5 ರಿಂದ ಅಂತರಾಷ್ಟ್ರೀಯ ಗುಣಮಟ್ಟದ 15 ಹೊಸ ಡಯಾಲಿಸೀಸ್ ಯಂತ್ರಗಳೊಂದಿಗೆ ಡಯಾಲಿಸೀಸ್ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಎಲ್ಲಾ ನೊಂದಾಯಿತ ರೋಗಿಗಳಿಗೆ ಉಚಿತವಾಗಿ ಹಾಗೂ ಪ್ರತಿಯೊಬ್ಬ ರೋಗಿಗೂ ಪ್ರತ್ಯೇಕಾವಾದ ಡಿಸ್ಪೋಸಿಬಲ್

error: Content is protected !!