Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

MLA ಟಿಕೆಟ್ ಕೊಡಿಸುವುದಾಗಿ ಕೋಟಿ ಕೋಟಿ ವಂಚಿಸಿದ ಚೈತ್ರಾ ಕುಂದಾಪುರ : ಈಗ ಪೊಲೀಸರ ಅತಿಥಿ

---Advertisement---

 

ಉಡುಪಿ: ಉದ್ಯಮಿಗೆ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಬಹುಕೋಟಿ ರೂಪಾಯಿ ವಂಚನೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ಚೈತ್ರಾರನ್ನು ಪೊಲೀಸ್ ಅರೆಸ್ಟ್ ಮಾಡಿದ್ದಾರೆ.

ಕಳೆದ ಕೆಲ ಸಮಯದಿಂದ ತಲೆಮರೆಸಿಕೊಂಡಿದ್ದ ಚೈತ್ರ ಕುಂದಾಪುರ, ಇಂದು ಉಡುಪಿ ಶ್ರೀ ಕೃಷ್ಣ ಮಠದಲ್ಲಿ ತಗಲಾಕಿಕೊಂಡಿದ್ದಾರೆ. ಬೆಂಗಳೂರು ಸಿಸಿಬಿ ಪೊಲೀಸರು, ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ಮಿಂಚಿನ ಕಾರ್ಯಾಚರಣೆ ನಡೆಸಿ ಕಡೆಗು ಬಂಧಿಸಿದ್ದಾರೆ. ಸಿನಿಮಿಯ ಶೈಲಿಯಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೈಂದೂರು ಬಿಜೆಪಿ ಟಿಕೆಟ್ ಆಕಾಂಕ್ಷಿಗೆ ಸುಮಾರು ಏಳು ಕೋಟಿ ರೂಪಾಯಿ ವಂಚನೆ ಮಾಡಿದ್ದಾರೆ. ಉಡುಪಿ ಜಿಲ್ಲೆ, ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿ ವಂಚನೆಗೊಳಗಾದವರು. ಉದ್ಯಮಿಯ ಮುಗ್ಧತೆ ಯನ್ನು ಬಳಸಿಕೊಂಡು ಮಹಾವಂಚನೆ ಮಾಡಿದ್ದಾರೆ ಎನ್ನಲಾಗಿದೆ.

ಉತ್ತರ ಕರ್ನಾಟಕ ಭಾಗದಲ್ಲಿ ಭಾಷಣಕಾರ್ತಿಯಾಗಿ ಗುರುತಿಸಿಕೊಂಡಿರುವ ಚೈತ್ರ ಕುಂದಾಪುರ, ಟಿಕೆಟ್ ಕೊಡಿಸುವುದಾಗಿ ನಾಲ್ಕೈದು ಜನರ ತಂಡದಿಂದ ಬೃಹನ್ನಾಟಕವಾಡಿದ್ದರು. ಕೇಂದ್ರದ ನಾಯಕರು, ಆರೆಸ್ಸೆಸ್ ಪ್ರಮುಖರ ಹೆಸರಿನಲ್ಲಿ ಪಂಗನಾಮ ಹಾಕಿದ್ದಾರೆ. ಆರ್ ಎಸ್ ಎಸ್ ಪ್ರಮುಖರು ಎಂದು ನಕಲಿ ನಾಯಕರನ್ನು ಸೃಷ್ಟಿ ಮಾಡಿದ್ದ ಚೈತ್ರ ಅಂಡ್ ಟೀಮ್, ಸುಮಾರು ಮೂರು ಹಂತದಲ್ಲಿ ಏಳು ಕೋಟಿ ರೂಪಾಯಿ ಪೀಕಿದ್ದಾರೆ. ಬೈಂದೂರು ಬಿಜೆಪಿಯ ಟಿಕೆಟ್ ಪಕ್ಕ ಮಾಡಿಕೊಡುವುದಾಗಿ ನಂಬಿಸಿ ವಂಚನೆ ಮಾಡಿದ್ದಾರೆ.

ವಂಚನೆ ಪ್ರಕರಣದಲ್ಲಿ ಈವರೆಗೆ ಒಟ್ಟು ನಾಲ್ವರನ್ನ ವಶಕ್ಕೆ ಪಡೆದಿದ್ದಾರೆ. ಚೈತ್ರಾ ಕುಂದಾಪುರ, ಗಗನ್ ಕಡೂರು,
ಶ್ರೀಕಾಂತ ನಾಯಕ್, ಪೊಲೀಸ್ ವಶದಲ್ಲಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment