ಬೆಂಗಳೂರು: ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಐದು ಕೋಟಿ ವಂಚನೆ ಮಾಡಿರುವ ಚೈತ್ರಾ ಅಂಡ್ ಗ್ಯಾಂಗ್ ತನಿಖೆಯಿಂದ ತಪ್ಪಿಸಿಕೊಳ್ಳುವುದಕ್ಕೆ ತರಹೇವಾರಿ ಡ್ರಾಮಾ ಆಡ್ತಾ ಇದ್ದಾರೆ. ಅದರಲ್ಲಿ ಕಳೆದ ಮೂರು ದಿನಗಳ ಹಿಂದೆ ಪಿಟ್ಸ್ ಬಂದವರಂತೆ ನಾಟಕವಾಡಿದ್ದು ಕೂಡ ಒಂದು. ಬಾಯಲ್ಲಿ ನೊರೆ ಬಂದ ತಕ್ಷಣ ಅಧಿಕಾರಿಗಳು ಚೈತ್ರಾಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಿದ್ದರು. ಇದೀಗ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾಳೆ.
ಚೈತ್ರಾಳಿಗೆ ಚಿಕಿತ್ಸೆ ನೀಡಿದ ವೈದ್ಯರು ಹೇಳಿದ ಪ್ರಕಾರ, ಚೈತ್ರಾಗೆ ಯಾವುದೇ ರೀತಿಯ ಪಿಟ್ಸ್ ಕಂಡು ಬಂದಿಲ್ಲವಂತೆ. ದಿವ್ಯ ಪ್ರಕಾಶ್ ಪ್ರತಿಕ್ರಿಯೆ ನೀಡಿ, ಚೈತ್ರಾ ಕುಂದಾಪುರಗೆ ಪಿಟ್ಸ್ ಏನು ಕಂಡು ಬಂದಿಲ್ಲ. ಮೊದಲ ಬಾರಿಗೆ ಇಸಿಜಿ ಮಾಡಿಸಿದಾಗ ಸ್ವಲ್ಪ ವ್ಯತ್ಯಾಸ ಕಂಡು ಬಂದಿತ್ತು. 24 ಗಂಟೆ ಬಿಟ್ಟು ಮತ್ತೆ ಮಾಡಿಸಿದಾಗ ಅಂಥದ್ದೇನು ವ್ಯತ್ಯಾಸ ಕಂಡು ಬರಲಿಲ್ಲ. ಚೈತ್ರಾ ಕುಂದಾಪುರ ಆರಾಮವಾಗಿದ್ದಾರೆ. ಅವರ ಆರೋಗ್ಯದ ಸ್ಥಿತಿ ಸರಿಯಾಗಿಯೇ ಇದೆ. ನ್ಯೂರಾಲಾಜಿಸ್ಟ್ ಮಾತ್ರೆಗಳನ್ನು ಕೊಟ್ಟಿದ್ದಾರೆ ಎಂದಿದ್ದಾರೆ.
ಚೈತ್ರಾ ಕುಂದಾಪುರ ಸಿಸಿಬಿ ಪೊಲೀಸರಿಗೆ ತಗಲಾಕಿಕೊಂಡ ನಂತರ ಹೈಡ್ರಾಮಾಗಳನ್ನು ಶುರು ಮಾಡಿದ್ದಾರೆ. ವಿಚಾರಣೆಯಿಂದ ತಪ್ಪಿಸಿಕೊಳ್ಳುವ ನಾಟಕವಾಡುತ್ತಿದ್ದಾಳೆ. ಈಗ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಮತ್ತೆ ಸಿಸಿಬಿ ಪೊಲೀಸರು ನಾಳೆಯಿಂದ ತನಿಖೆ ಆರಂಭಿಸಲಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















