Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕುಡಿಯಲಿಲ್ಲ ಅಂದ್ರೆ ಕಾಂಗ್ರೆಸ್​ನವರಿಗೆ ರಾತ್ರಿ ನಿದ್ದೆ ಬರುವುದಿಲ್ಲ: ಛಲವಾದಿ ನಾರಾಯಣಸ್ವಾಮಿ‌

Facebook
Twitter
Telegram
WhatsApp

ಬೆಂಗಳೂರು: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ರಾಜಕೀಯ ಚೇಳು ಇದ್ದಂತೆ. ಕಾಂಗ್ರೆಸ್​ನವರು ಕುಡುಕರು. ಕುಡಿಯಲಿಲ್ಲ ಅಂದ್ರೆ ಅವರಿಗೆ ರಾತ್ರಿ ನಿದ್ದೆಯೇ ಬರುವುದಿಲ್ಲ ಎಂದು ಬಿಜೆಪಿ ಪರಿಶಿಷ್ಟ ಜಾತಿ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ವೇಳೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ದಲಿತರು ಹೊಟ್ಟೆ ಪಾಡಿಗಾಗಿ ಬಿಜೆಪಿಗೆ ಹೋಗಿದ್ದಾರೆ ಅಂತ ಸಿದ್ದರಾಮಯ್ಯ ಹೇಳಿದ್ದಾರೆ. ಹಾಗಾದ್ರೆ ಸಿದ್ದರಾಮಯ್ಯ ಯಾವ ಪಾಡಿಗೆ ಕಾಂಗ್ರೆಸ್​ಗೆ ಹೋಗಿದ್ದಾರೆ?. ಹೊಟ್ಟೆ ಪಾಡಿಗೆ ಹೋದ್ರಾ? ಎಂದು ಸಿದ್ದರಾಮಯ್ಯ ಸ್ಪಷ್ಟನೆ ನೀಡಬೇಕು.

ದಲಿತರ ಬಗ್ಗೆ ಈ ರೀತಿ ಮಾತನಾಡಲು ಸಿದ್ದರಾಮಯ್ಯಗೆ ಯಾವ ನೈತಿಕ ಹಕ್ಕಿದೆ?. ಕಾಂಗ್ರೆಸ್​​ನಲ್ಲಿ ದಲಿತ ಮುಖ್ಯಮಂತ್ರಿ ಆಗಬೇಕು ಅಂತ ದೊಡ್ಡ ಕೂಗಿತ್ತು. ಆದರೆ ಸಿದ್ದರಾಮಯ್ಯ ದಲಿತರನ್ನ ತುಳಿದು ಇಡೀ ಕಾಂಗ್ರೆಸ್ಸಿಗರನ್ನು ಬ್ಲಾಕ್ ಮೇಲ್ ಮಾಡಿ, ದಲಿತರ ಸಂಹಾರ ಮಾಡಿ ಮುಖ್ಯಮಂತ್ರಿಯಾದರು. ಸಿದ್ದರಾಮಯ್ಯ ಒಬ್ಬ ಕಪಟ ರಾಜಕಾರಣಿ ಎಂದು ಟೀಕಿಸಿದರು.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್​ ಅವರನ್ನು ಸಿದ್ದರಾಮಯ್ಯ ತುಳಿದಿದ್ದಾರೆ. ಪರಮೇಶ್ವರ್​ ಮುಖ್ಯಮಂತ್ರಿಯಾಗಿರಬೇಕಿತ್ತು. ಆದರೆ ಪರಮೇಶ್ವರ್ ಅವರನ್ನ ಸಿದ್ದರಾಮಯ್ಯ ಸೋಲಿಸಿಬಿಟ್ರು. ಅವರು ಇದನ್ನ ಬಹಿರಂಗವಾಗಿ ಹೇಳಿಕೊಳ್ಳಲಿಲ್ಲ ಅಷ್ಟೇ. ಕಾಂಗ್ರೆಸ್ ಮುಖಂಡರು ಬೋನ್ ಲೆಸ್ ಲೀಡರ್. ಬಂಗಾರಪ್ಪ ಯಾವಾಗಲೂ ಒಂದು ಮಾತು ಹೇಳ್ತಿದ್ದರು. ಅವರು ರಾಜಕೀಯ ಸ್ಕಾರ್ಪಿಯನ್ ಬಗ್ಗೆ ಮಾತನಾಡುತ್ತಿದ್ದರು. ಈ ಮಾತು ಸಿದ್ದರಾಮಯ್ಯನವರಿಗೆ ಸೂಟ್ ಆಗುತ್ತದೆ ಎಂದರು.

ದೇವೇಗೌಡರು, ಖರ್ಗೆ, ವಿಶ್ವನಾಥ್, ರೇವಣ್ಣ ಅವರ ಪರಿಸ್ಥಿತಿ ಏನಾಗಿದೆ ಈಗ?. ಸಿದ್ದರಾಮಯ್ಯ ಅವರ ಸಮುದಾಯದವರನ್ನೇ ಬೆಳೆಯೋಕೆ ಬಿಟ್ಟಿಲ್ಲ. ಕಾಂಗ್ರೆಸ್​ನವರು ಸಿದ್ದರಾಮಯ್ಯರನ್ನು ನೋಡಿ ಹೆದರಿಕೊಂಡಿದ್ದಾರೆ. ಎಲ್ಲಿ ನಮ್ಮನ್ನು ಮುಗಿಸಿ ಬಿಡ್ತಾರೆ ಅಂತಾ ಭಯದಲ್ಲಿದ್ದಾರೆ.‌ ಸಿದ್ದರಾಮಯ್ಯರನ್ನು ನೆನಪಿಸಿಕೊಂಡರೆ ಎಲ್ಲರ ಬಟ್ಟೆ ಹಸಿಯಾಗುತ್ತದೆ ಎಂದರು.

ಕಾಂಗ್ರೆಸ್ ಸದಸ್ಯತ್ವ ಪಡೆಯಬೇಕು ಅಂದ್ರೆ ಖಾದಿ ತೊಡುತ್ತೇನೆ, ಮದ್ಯ ಕುಡಿಯುವುದಿಲ್ಲ ಎಂದು ಸಹಿ ಹಾಕಬೇಕು. ಆದರೆ ಅವರ ಪಕ್ಷದ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿಯವರೇ ಇದನ್ನು ಪಾಲಿಸಲ್ಲ. ಅವರೆಲ್ಲಿ ಖಾದಿ ಧರಿಸುತ್ತಾರೆ?, ಸದಾ ಜೀನ್ಸ್​ನಲ್ಲಿ ಇರುತ್ತಾರೆ ಎಂದು ಟೀಕಿಸಿದರು.

ಕುಡಿಯುವವರಿಗೆ ಸದಸ್ಯತ್ವ ಇಲ್ಲ ಎಂದು ಕಾಂಗ್ರೆಸ್ ಸದಸ್ಯತ್ವ ಹೊತ್ತಿಗೆಯಲ್ಲಿದೆ. ಆದರೆ ಕಾಂಗ್ರೆಸ್​ನವರು ಕುಡುಕರು. ಕುಡಿಯಲಿಲ್ಲ ಅಂದ್ರೆ ಅವರಿಗೆ ರಾತ್ರಿ ನಿದ್ದೆ ಬರುವುದಿಲ್ಲ. ಕುಡುಕರಿಗೆ ಟಿಕೆಟ್ ಇಲ್ಲ ಅಂತಾದರೆ ಕಾಂಗ್ರೆಸ್​ನಲ್ಲಿ 224 ಕ್ಷೇತ್ರಗಳಿಗೂ ಅಭ್ಯರ್ಥಿಗಳೇ ಸಿಗುವುದಿಲ್ಲ ಎಂದು ವಿವಾದಾತ್ಮಕ ಹೇಳಿಕೆ ನೀಡಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಅಪಾರ ಖಜಾನೆ ಸಂಪತ್ತು ಹೊಂದಿರುವರು.

ಈ ರಾಶಿಯವರು ಅಪಾರ ಖಜಾನೆ ಸಂಪತ್ತು ಹೊಂದಿರುವರು. ಈ ರಾಶಿಯವರು ಬಯಸಿದ್ದೆಲ್ಲಾ ಪಡೆಯುವ ಆಶಾವಾದಿಗಳು.   ಸೋಮವಾರ ರಾಶಿ ಭವಿಷ್ಯ -ಮೇ-13,2024 ಸೂರ್ಯೋದಯ: 05:48, ಸೂರ್ಯಾಸ್ತ : 06:36 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

ಚಳ್ಳಕೆರೆ | ರೈತ ಆತ್ಮಹತ್ಯೆ

ಸುದ್ದಿಒನ್, ಚಳ್ಳಕೆರೆ, ಮೇ. 12 : ತಾಲೂಕಿನ ಬಾಲೇನಹಳ್ಳಿ ಗ್ರಾಮದ ಮೋಹನ್ ಕುಮಾರ್(36) ಎಂಬ ರೈತ ಬೆಳಗಾಗಿ ಮಾಡಿದ ಸಾಲವನ್ನು ತೀರಿಸಲಾಗದೆ ಭಾನುವಾರ ಬೆಳಗಿನ ಜಾವ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ

ಹೊಸದುರ್ಗ | ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಫೇಲ್,‌ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

  ಸುದ್ದಿಒನ್, ಚಿತ್ರದುರ್ಗ, ಮೇ. 12  : ಇತ್ತಿಚೀಗಷ್ಟೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಚಿತ್ರದುರ್ಗ ಜಿಲ್ಲೆ 21ನೇ ಸ್ಥಾನ ಪಡೆದುಕೊಂಡಿದೆ. ಇತ್ತ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆಯಲ್ಲಿ ಫೇಲ್ ಆಗಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ

error: Content is protected !!