Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಳ್ಳಕೆರೆ | ಸಿಡಿಲು ಬಡಿದು 106 ಕುರಿಗಳು ಮೃತ

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

ಸುದ್ದಿಒನ್, ಚಳ್ಳಕೆರೆ, ಆಗಸ್ಟ್.17 : ತಾಲೂಕಿನ ಜಾಜೂರು ಗ್ರಾಮದಲ್ಲಿ ಶುಕ್ರವಾರ ರಾತ್ರಿ ಗುಡುಗು ಸಹಿತ ಮಳೆಯಾಗಿದ್ದು, ಸಿಡಿಲು ಬಡಿದ ಪರಿಣಾಮ 106 ಕುರಿಗಳು ಸಾವನ್ನಪ್ಪಿವೆ.

ಆಂಜನೇಯ ಎನ್ನುವವರಿಗೆ ಸೇರಿದ 90 ಹಾಗೂ ಓಬಣ್ಣ ಎನ್ನುವವರಿಗೆ ಸೇರಿದ 16  ಕುರಿಗಳು ಸೇರಿದಂತೆ  ಒಟ್ಟು 106 ಕುರಿಗಳು ಸಿಡಿಲಿಗೆ ಮೃತಪಟ್ಟಿವೆ.

ತಾಲ್ಲೂಕಿನಾದ್ಯಂತ ರಾತ್ರಿ ಮಳೆ ಸುರಿದಿದ್ದು ರಾತ್ರಿ 8.30 ರ ವೇಳೆಯಲ್ಲಿ ಸಿಡಿಲು ಬಡಿದ ಕಾರಣ ಕುರಿಗಳು ಸಾವನ್ನಪ್ಪಿವೆ. ಕುರಿ ಸಾಕಾಣಿಕೆದಾರರಿಗೆ ಲಕ್ಷಾಂತರ ರೂಪಾಯಿಗಳು ನಷ್ಟವಾಗಿದ್ದು, ಸಂಬಂಧಪಟ್ಟ ಅಧಿಕಾರಿ ಪರಿಹಾರ ದೊರಕಿಸಿಕೊಡುವಂತೆ ಮನವಿ ಮಾಡಿಕೊಂಡಿದ್ದಾರೆ.

ಜಾಜೂರು ಗ್ರಾಮಕ್ಕೆ ಪಶುಸಂಗೋಪನೆ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಮರಣೋತ್ತರ ಪರಿಕ್ಷೆ ನಡೆಸಿ ಅನುಗ್ರಹ ಯೋಜನೆಯಡಿ ಪರಿಹಾರಕ್ಕೆ ಸರಕಾರಕ್ಕೆ ಕಳೊಸಿಕೊಡಲಾಗುವುದು ಎಂದು ಸಹಾಯಕ ನಿರ್ದೇಶಕ ಡಾ.ರೇವಣ್ಣ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ತಹಶೀಲ್ದಾರ್ ರೇಹಾನ್ ಪಾಷ ಹಾಗೂ ಆರ್ ಐ ರಾಜೇ ಮತ್ತು ಗ್ರಾಮಲೆಕ್ಕಿಗ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...