Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಳ್ಳಕೆರೆ | ವಿಷಜಂತು ಕಚ್ಚಿ ಬಾಲಕ ಸಾವು

Facebook
Twitter
Telegram
WhatsApp

ಸುದ್ದಿಒನ್, ಚಳ್ಳಕೆರೆ, ಆಗಸ್ಟ್. 25 : ಮಳೆಗಾಲ ಬೇರೆ ಇದೆ. ಹಾವು, ಚೇಳು ಸೇರಿದಂತೆ ವಿಷ ಜಂತುಗಳು ಎಲ್ಲೆಂದರಲ್ಲಿ ಅಡ್ಡಾಡುತ್ತಾ ಇರುತ್ತವೆ. ಅದರಲ್ಲೂ ಜಮೀನು ಗಳಿಗೆ ಹೋಗುವವರು, ಜಮೀನಿನಲ್ಲಿರುವ ಮನೆಗಳಲ್ಲಿ ಮಲಗುವವರು ಎಚ್ಚರದಿಂದ ಇರಬೇಕು. ಜಮೀನಿನಲ್ಲಿರುವ ಮನೆಗಳನ್ನು ಕ್ಲೀಸ್ ಮಾಡದೆ ಇದ್ದಲ್ಲಿ ಮಲಗುವುದಕ್ಕೆ ಹೋಗಬೇಡಿ. ಇಷ್ಟೆಲ್ಲ ಹೇಳುವುದಕ್ಕೆ ಕಾರಣ ಚಳ್ಳಕೆರೆಯಲ್ಲಿ ನಡೆದ ಘಟನೆ.

ಜಮೀನಿನ ಶೆಡ್ ಒಂದರಲ್ಲಿ ಮಲಗಿದ್ದ ಬಾಲಕ ಈಗ ಶವವಾಗಿ ಬಿದ್ದಿದ್ದಾನೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ರವಿತೇಜ ಹೀಗೆ ಸತ್ತು ಮಲಗಿರುವುದು. ಈ ಬಾಲಕನಿಗೆ ಈಗಿನ್ನು ಕೇವಲ 8 ವರ್ಷ. ಆಟವಾಡಿಕೊಂಡಿದ್ದವ ಈಗ ಜೀವಂತವಾಗಿಲ್ಲ. ಅದಕ್ಕೆ ಕಾರಣ, ಜಮೀನಿಗೆ ಹೋಗಿ ಶೆಡ್ ನಲ್ಲಿ ಮಲಗಿದ್ದಷ್ಟೇ.

ಎಂಟು ವರ್ಷದ ಮೃತ ರವಿತೇಜ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಸಿದ್ದಾಪುರ ಗ್ರಾಮದವರು. ಸಿದ್ದಾಪುರದ ಬಳಿಯೇ ಇವರದ್ದು ಜಮೀನು ಇದೆ. ಆ ಜಮೀನಿನಲ್ಲಿ ಏನಾದರು ವಸ್ತುಗಳನ್ನು ಹಾಕುವುದಕ್ಕೆಂದು ಶೆಡ್ ನಿರ್ಮಾಣ‌ ಮಾಡಿದ್ದಾರೆ. ಇತ್ತೀಚೆಗೆ ಒಂದೇ ಸಮನೆ ಮಳೆ ಬಂದು ಈಗ ಎರಡ್ಮೂರು ದಿನದಿಂದ ವಿಶ್ರಾಂತಿ ನೀಡಿದೆ. ಕೊಂಚ ಬಿಸಿಲು ತಟ್ಟಿದೆ. ಇಂದು ಭಾನುವಾರವೂ ಆದ ಕಾರಣ ಬಾಲಕ ಜಮೀನಿಗೆ ಹೋಗಿದ್ದಾನೆ. ಮಧ್ಯಾಹ್ನದ ಸಮಯ ಆಗಿದ್ದರಿಂದ ನಿದ್ದೆ ಬಂದಿದೆ. ತಮ್ಮ ಜಮೀನಿನಲ್ಲಿಯೇ ಶೆಡ್ ಇದ್ದ ಕಾರಣ ಬಾಲಕ ಸೀದಾ ಹೋಗಿ ಶೆಡ್ ನಲ್ಲಿ ಮಲಗಿದ್ದಾನೆ. ಆದರೆ ಅದ್ಯಾವ ವಿಷ ಜಂತು ಕಚ್ಚಿತೋ ಏನೋ, ಬಾಲಕ ಸಾವನ್ನಪ್ಪಿದ್ದಾನೆ. ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಪ್ರಕರಣ ಇದಾಗಿದೆ. ಜಮೀನಿಗೆ ಹೋದ ಬಾಲಕ ಸೀದಾ ಮನೆಗೆ ಬಂದಿದ್ದರೆ ಜೀವಂತವಾಗಿ ಆದ್ರೂ ಇರುತ್ತಿದ್ದ. ಆದರೆ ವಿಧಿ ಶೆಡ್ ನಲ್ಲಿ ಯಾವುದೋ ವಿಷ ಜಂತು ಕಚ್ಚಿ ಪ್ರಾಣವನ್ನೇ ಬಲಿ ಪಡೆದಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!