ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188

ಸುದ್ದಿಒನ್, ಚಳ್ಳಕೆರೆ, ಮಾರ್ಚ್. 30 : ಸ್ನೇಹಿತರೊಂದಿಗೆ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಬಾಲಕನೊಬ್ಬ ಈಜು ಬಾರದೆ ನೀರಿನಲ್ಲಿ ಮುಳುಗಿ ಸಾವನಪ್ಪಿರುವಂತಹ ಘಟನೆ ಚಳ್ಳಕೆರೆ ತಾಲೂಕಿನ ಚೆನ್ನಗನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ಬಾಲಕನನ್ನ ಕೀರ್ತನ (12 ವರ್ಷ) ಎಂದು ಗುರುತಿಸಲಾಗಿದ್ದು ತನ್ನ ಮೂವರು ಸ್ನೇಹಿತರೊಂದಿಗೆ ಗ್ರಾಮದ ಗುರುಪ್ರಸಾದ್ ಎನ್ನುವವರು ಜಮೀನಿಲ್ಲಿದ್ದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ವೇಳೆ ಈಜು ಬಾರದೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.
ಜೊತೆಗಿದ್ದ ಸ್ನೇಹಿತರು ಬಾಲಕನನ್ನು ನೀರಿಂದ ಪಾರು ಮಾಡಲು ಪ್ರಯತ್ನ ಮಾಡಿದರೂ ಸಾಧ್ಯವಾಗದೆ ಬಾಲಕ ನೀರಿನಲ್ಲಿ ಮೃತಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ ತುಳುಕು ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ತಳಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.












