ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳೆಗೆರೆ, ಚಳ್ಳಕೆರೆ,
ಮೊ : 84314 13188
ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 22 : ಇತ್ತೀಚೆಗಂತು ಎಲ್ಲಿ ನೋಡಿದರೂ ಕಳ್ಳತನದ ಘಟನೆಗಳು ನಡೆಯುತ್ತಲೇ ಇವೆ. ಪೊಲೀಸರು ಕೂಡ ಮಹಿಳೆಯರಿಗೆ ಎಚ್ಚರಿಕೆಯಿಂದ ಇರಲು ಹೇಳುತ್ತಾರೆ. ಆದರೆ ಈ ಕಳ್ಳರು ಸರಿಯಾದ ಸಮಯ ನೋಡಿ ಹೊಂಚು ಹಾಕುತ್ತಾರೆ. ಅಂಥದ್ದೇ ಘಟನೆ ಇದೀಗ ಚಳ್ಳಕೆರೆಯಲ್ಲಿ ನಡೆದಿದೆ.
ಹಾಡ ಹಗಲಿನಲ್ಲಿಯೇ ಈ ದರೋಡೆ ನಡೆದಿದೆ. ನಗರದ ವಾಸವಿ ಕಾಲೋನಿಯಲ್ಲಿ ಉದ್ಯಮಿ ಗೀತ ಲಕ್ಷ್ಮಿ ಎಂಬುವರ ಮನೆಗೆ ದರೋಡೆಕೋರರು ಯಾರಿಗೂ ಅನುಮಾನ ಬಾರದಂತೆ ನುಗ್ಗಿದ್ದಾರೆ. ಪೊಲೀಸರು ಎಂದು ಹೇಳಿ ಇಬ್ಬರು ಮಹಿಳೆಯರು ಇದ್ದ ಮನೆಗೆ ಬಂದ ನಾಲ್ಕು ಜನ ದರೋಡೆಕೋರರು ಒಳಗೆ ಹೋದ ಕೂಡಲೇ ಬಾಗಿಲು ಹಾಕಿ, ಬೆದರಿಸಿದ್ದಾರೆ. ತಕ್ಷಣ ಮನೆಯಲ್ಲಿದ್ದ 300 ಗ್ರಾಂ ಚಿನ್ನಾಭರಣ ದೋಚಿ ಕಾರಿನಲ್ಲಿ ಪರಾರಿಯಾಗಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಚಳ್ಳಕೆರೆ ಡಿವೈಎಸ್ಪಿ ರಾಜಣ್ಣ ಸೇರಿದಂತೆ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಭೇಟಿ ನೀಡಿದ್ದಾರೆ. ಅಲ್ಲಿನ ಜಾಗವನ್ನೆಲ್ಲ ಪರಿಶೀಲನೆ ನಡೆಸಿದ್ದಾರೆ. ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ದರೋಡೆಕೋರರಿಗಾಗಿ ಈಗಾಗಲೇ ಬಲೆ ಬೀಸಿದ್ದಾರೆ. ಅಕ್ಕಪಕ್ಕದಲ್ಲಿದ್ದ ಸಿಸಿಟಿವಿ ಸೇರಿದಂತೆ ದರೋಡೆಕೋರರನ್ನು ಪತ್ತೆ ಹಚ್ಚುವ ಎಲ್ಲಾ ರೀತಿಯ ತನಿಖೆಯನ್ನು ನಡೆಸುತ್ತಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್