ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳೆಗೆರೆ, ಚಳ್ಳಕೆರೆ,
ಮೊ : 84314 13188
ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 22 : ಇತ್ತೀಚೆಗಂತು ಎಲ್ಲಿ ನೋಡಿದರೂ ಕಳ್ಳತನದ ಘಟನೆಗಳು ನಡೆಯುತ್ತಲೇ ಇವೆ. ಪೊಲೀಸರು ಕೂಡ ಮಹಿಳೆಯರಿಗೆ ಎಚ್ಚರಿಕೆಯಿಂದ ಇರಲು ಹೇಳುತ್ತಾರೆ. ಆದರೆ ಈ ಕಳ್ಳರು ಸರಿಯಾದ ಸಮಯ ನೋಡಿ ಹೊಂಚು ಹಾಕುತ್ತಾರೆ. ಅಂಥದ್ದೇ ಘಟನೆ ಇದೀಗ ಚಳ್ಳಕೆರೆಯಲ್ಲಿ ನಡೆದಿದೆ.

ಹಾಡ ಹಗಲಿನಲ್ಲಿಯೇ ಈ ದರೋಡೆ ನಡೆದಿದೆ. ನಗರದ ವಾಸವಿ ಕಾಲೋನಿಯಲ್ಲಿ ಉದ್ಯಮಿ ಗೀತ ಲಕ್ಷ್ಮಿ ಎಂಬುವರ ಮನೆಗೆ ದರೋಡೆಕೋರರು ಯಾರಿಗೂ ಅನುಮಾನ ಬಾರದಂತೆ ನುಗ್ಗಿದ್ದಾರೆ. ಪೊಲೀಸರು ಎಂದು ಹೇಳಿ ಇಬ್ಬರು ಮಹಿಳೆಯರು ಇದ್ದ ಮನೆಗೆ ಬಂದ ನಾಲ್ಕು ಜನ ದರೋಡೆಕೋರರು ಒಳಗೆ ಹೋದ ಕೂಡಲೇ ಬಾಗಿಲು ಹಾಕಿ, ಬೆದರಿಸಿದ್ದಾರೆ. ತಕ್ಷಣ ಮನೆಯಲ್ಲಿದ್ದ 300 ಗ್ರಾಂ ಚಿನ್ನಾಭರಣ ದೋಚಿ ಕಾರಿನಲ್ಲಿ ಪರಾರಿಯಾಗಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಚಳ್ಳಕೆರೆ ಡಿವೈಎಸ್ಪಿ ರಾಜಣ್ಣ ಸೇರಿದಂತೆ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಭೇಟಿ ನೀಡಿದ್ದಾರೆ. ಅಲ್ಲಿನ ಜಾಗವನ್ನೆಲ್ಲ ಪರಿಶೀಲನೆ ನಡೆಸಿದ್ದಾರೆ. ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ದರೋಡೆಕೋರರಿಗಾಗಿ ಈಗಾಗಲೇ ಬಲೆ ಬೀಸಿದ್ದಾರೆ. ಅಕ್ಕಪಕ್ಕದಲ್ಲಿದ್ದ ಸಿಸಿಟಿವಿ ಸೇರಿದಂತೆ ದರೋಡೆಕೋರರನ್ನು ಪತ್ತೆ ಹಚ್ಚುವ ಎಲ್ಲಾ ರೀತಿಯ ತನಿಖೆಯನ್ನು ನಡೆಸುತ್ತಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















