ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729
ಸುದ್ದಿಒನ್, ಚಳ್ಳಕೆರೆ, ಏಪ್ರಿಲ್.26 : ಲೋಕಸಭಾ ಚುನಾವಣೆ ಕರ್ತವ್ಯ ವೇಳೆ ಹೃದಯಘಾತದಿಂದ ಕರ್ತವ್ಯ ನಿರತ ಎಪಿಆರ್ ಓ ಶಿಕ್ಷಕಿ ಯಶೋದಮ್ಮ(55) ಮೃತಪಟ್ಟಿದ್ದಾರೆ.

ತಾಲ್ಲೂಕಿನ ಹೊಟ್ಲೆಪನಹಳ್ಳಿ 202 ಮತ ಕೇಂದ್ರದಲ್ಲಿ ಕರ್ತವ್ಯ ನಿರತರಾಗಿದ್ದಾಗ ಕುಸಿದು ಬಿದ್ದಿದ್ದು ಅವರನ್ನು ಸರ್ಕಾರಿ ಆಸ್ಪತ್ರೆಗೆ ಕರೆತರುವ ವೇಳೆ ಮಾರ್ಗ ಮಧ್ಯದಲ್ಲಿ ಸಾವನಪ್ಪಿದ್ದಾರೆ.
ಚಳ್ಳಕೆರೆ ನಗರದ ವಿಠಲನಗರದಲ್ಲಿ ವಾಸಮಾಡುತ್ತಿದ್ದು ಇಂದು ಲೋಕಸಭಾ ಚುನಾವಣೆ ಕರ್ತವ್ಯಕ್ಕೆ ಹಾಜರಾಗಿದ್ದರು.
ಆಸ್ಪತ್ರೆಗೆ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಹಾಗೂ ಚುನಾವಣಾಧಿಕಾರಿಗಳು ಭೇಟಿ ನೀಡಿ ಮೃತ ಯಶೋದಮ್ಮ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.
ಈ ಸಂದರ್ಭದಲ್ಲಿ ಚುನಾವಣೆ ಅಧಿಕಾರಿಗಳಾದ ಕುಮಾರಸ್ವಾಮಿ,ಎಎಸ್ಪಿ ಎಸ್ ಜೆ ಕುಮಾರಸ್ವಾಮಿ ಸಹಾಯಕ ಚುನಾವಣಾಧಿಕಾರಿ ಆನಂದ ಡಿವೈಎಸ್ ಪಿ ಟಿ.ಬಿ.ರಾಜಣ್ಣ,ಸೇರಿದಂತೆ ಅಧಿಕಾರಿಗಳು ಇದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












