Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಪತ್ತೆ ಕೇಸ್ ದಾಖಲಿಸದ ಚಳ್ಳಕೆರೆ ಎಎಸ್ಐ ಅಮಾನತು..!

---Advertisement---

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 14 : ಸಾಕಷ್ಟು ಸಲ, ಹಲವು ಪ್ರಕರಣಗಳಲ್ಲಿ ಪೊಲೀಸ್ ಠಾಣೆಯಲ್ಲಿ ನಿರ್ಲಕ್ಷ್ಯ ತೋರಲಾಗುತ್ತದೆ. ದೂರು ನೀಡಲು ಬಂದಾಗಲೂ ದೂರನ್ನು ದಾಖಲಿಸುವುದಿಲ್ಲ. ಈ ರೀತಿಯ ಸುದ್ದಿಗಳು ಹಲವು ಬಾರಿ ಹೊರ ಬಂದಿವೆ. ಆದರೆ ಮೇಲಾಧಿಕಾರಿಗಳು ಕ್ರಮ ತೆಗೆದುಕೊಂಡಾಗ ಇಂಥ ನಿರ್ಲಕ್ಷ್ಯ ಕಡಿಮೆಯಾಗಬಹುದು. ಇದೀಗ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲಿ ಕರ್ತವ್ಯ ಮರೆತ ಎಎಸ್ಐ ಅನ್ನು ಅಮಾನತು ಮಾಡಿ, ಎಸ್ಪಿ ಆದೇಶ ಹೊರಡಿಸಿರುವ ಘಟನೆ ನಡೆದಿದೆ.

 

ಚಳ್ಳಕೆರೆ ಪೊಲೀಸ್ ಠಾಣೆಯ ಎಎಸ್ಐ ಮುಷ್ಟೂರಪ್ಪ ಅಮಾನತ್ತಾದ ಅಧಿಕಾರಿ. ಕರ್ತವ್ಯಲೋಪ ಹಿನ್ನೆಲೆ ಎಎಸ್ಐ ಮುಷ್ಟೂರಪ್ಪ ಅವರನ್ನು ಅಮಾನತ್ತು ಮಾಡಿ ಚಿತ್ರದುರ್ಗ ಎಸ್.ಪಿ. ಧರ್ಮೇಂದರ್ ಕುಮಾರ್ ಮೀನಾ ಆದೇಶ ಹೊರಡಿಸಿದ್ದಾರೆ.

ಚಳ್ಳಕೆರೆಯ ಪೃಥ್ವಿರಾಜ್ ಎಂಬುವವರು ನಾಪತ್ತೆಯಾಗಿದ್ದರು. ಪೃಥ್ವಿರಾಜ್ ತಾಯಿ ಚಳ್ಳಕೆರೆ ಪೊಲೀಸ್ ಠಾಣೆಗೆ ದೂರು ನೀಡಲು ಬಂದಿದ್ದರು. ದೂರು ಸ್ವೀಕರಿಸದೆ ಎಎಸ್ಐ ನಿರ್ಲಕ್ಷ್ಯ ವಹಿಸಿದ್ದರು. ಈ ಮೂಲಕ ಕರ್ತವ್ಯ ಲೋಪ ಮೆರೆದಿದ್ದಾರೆ. ಹೀಗಾಗಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಈ ನಾಪತ್ತೆಯಾದ ಪೃಥ್ಚಿರಾಜ್ ಎಲ್ಲರಿಗೂ ನೆನಪಿರಬೇಕು. ವಿಡಿಯೋ ಮಾಡಿ ಪೊಲೀಸ್ ಠಾಣೆ ಬಳಿ ಹುಚ್ಚಾಟ ಮಾಡಿದ್ದನು. ಡಿಆರ್ ಡಿಓ, ಐಐಎಸ್ಸಿ, ವಿಧಾನಸೌಧ ಸ್ಪೋಟಿಸುವುದಾಗಿ ವಿಡಿಯೋ ಮಾಡಿದ್ದನು. ಹಾಗೇ ಬಂಧಿಸಿದ ಮೇಲೆ ನಟ ದರ್ಶನ್ ಪಕ್ಕದ ಸೆಲ್ ನಲ್ಲಿಡುವಂತೆ ಹೇಳಿದ್ದನು. ಇಂದು ವಿಧಾನಸೌಧ ಬಳಿ ಬೈಕಿಗೆ ಬೆಂಕಿಯಿಟ್ಟು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದನು. ಪೃಥ್ವಿರಾಜ್ ಚಳ್ಳಕೆರೆ ಪೊಲೀಸರ ನಿರ್ಲಕ್ಷದ ಬಗ್ಗೆ ಈ ಹಿಂದೆ ದೂರು ನೀಡಿದ್ದನು. ಇದೀಗ ಡಿವೈಎಸ್ಪಿ ರಾಜಣ್ಣ ವರದಿ ಆಧರಿಸಿ ಎಎಸ್ಐ ಅಮಾನತ್ತು ಮಾಡಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment