Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಳ್ಳಕೆರೆ | ಬಸ್ ನಿಲ್ದಾಣದ ಸಮೀಪ ಹಾಡಹಗಲೇ ಕೊಲೆಗೆ ಯತ್ನ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

ಸುದ್ದಿಒನ್, ಚಳ್ಳಕೆರೆ, ನವೆಂಬರ್.22 : ನಗರದ ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಸಮೀಪ  ಇಂದು ಸಮಯ 11 ಗಂಟೆ ಸುಮಾರಿಗೆ ಬಸ್ ಇಳಿದು ಬರುವ ಆಶಾ ಎಂಬುವವರಿಗೆ ಪತಿ ಶಿವಕುಮಾರ್  ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ.

ತಾಲೂಕಿನ ಚೆನ್ನಮ್ಮನಾಗತಿಹಳ್ಳಿ ಗ್ರಾಮದ ಕುಮಾರ್(30) ವರ್ಷ ಎಂಬುವವರು ಕಳೆದ ಮೂರು ವರ್ಷದ ಹಿಂದೆ ವಿವಾಹವಾಗಿದ್ದರು. ಆದರೆ ಎರಡು ವರ್ಷದ ದಾಂಪತ್ಯ ಜೀವನ ನಡೆಸಿದ ನಂತರ ದಾಂಪತ್ಯದಲ್ಲಿ ಒಡಕು ಮೂಡಿ  ಹೆಂಡತಿ ಆಶಾ(25) ವಿವಾಹ ವಿಚ್ಚೇದನ ಕ್ಕೆ ಕೋರ್ಟ್ ಮೊರೆ ಹೊಗಿದ್ದರು ಎನ್ನಲಾಗಿದೆ.

ಆದರೆ ಇಂದು ಚಳ್ಳಕೆರೆ ನ್ಯಾಯಾಲಯಕ್ಕೆ ಹಾಜರಾಗಬೇಕಿದ್ದ  ಸಂದರ್ಭದಲ್ಲಿ ಮುಂಜಾನೆ ಬಸ್ ನಿಲ್ದಾಣದಲ್ಲಿ  ಕಾದು‌ ಕುಳಿತಿದ್ದ  ಪತಿ ಶಿವಕುಮಾರ್ ನಿಂದ ಈ ಕೃತ್ಯ ನಡೆದಿದೆ.

ಇನ್ನೂ ಮಚ್ಚಿನಿಂದ ಆಶಾ ತಲೆಗೆ ಹಾಗೂ ಕೈಗೆ  ಗಾಯಗಳಾಗಿದ್ದು ಸಾವು ಬದುಕಿನ ಮದ್ಯೆ ಹೋರಾಟ ನಡೆಸುತ್ತಿದ್ದಾಳೆ. ಹಲ್ಲೆ ಒಳಗಾದ ಮಹಿಳೆಗೆ ಚಳ್ಳಕೆರೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಯ ನಂತರ, ಹೆಚ್ಚಿನ ಚಿಕಿತ್ಸೆಗೆ‌ ಚಿತ್ರದುರ್ಗ ಜಿಲ್ಲಾಆಸ್ವತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಚಳ್ಳಕೆರೆ ಡಿ ವೈ ಎಸ್ ಪಿ ಟಿಬಿ  ರಾಜಣ್ಣ ಭೇಟಿ ನೀಡಿ ಪರಿಶೀಲದ ನಡೆಸಿದ್ದಾರೆ.

ಕೊಲೆ ಮಾಡಲು ಯತ್ನಿಸಿದ ವ್ಯಕ್ತಿಯನ್ನು ಪೊಲೀಸರ ವಶಕ್ಕೆ ಪಡೆಯಲಾಗಿದೆ

ಸಾರ್ವಜನಿಕರು ಶಿವಕುಮಾರನಿಗೆ ಧರ್ಮದೇಟು ನೀಡಿ ಪೋಲೀಸರಿಗೆ ಒಪ್ಪಿಸಿದ್ದಾರೆ.

ಆರೋಪಿಯನ್ನು ಚಳ್ಳಕೆರೆ ಪೋಲಿಸರು ಕ್ಷಣ ವಶಕ್ಕೆ ಪಡೆದಿದ್ದಾರೆ.

ನಗರದಲ್ಲಿ ಈ ಘಟನೆಯಿಂದ ಭಯ ಭೀತರಾದ ಸಾರ್ವಜನಿಕರು ನೂರಾರು ಜನರು ಘಟನೆ ಸ್ಥಳದಲ್ಲಿ ನೆರೆದಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಸಿಮೆಣಸಿನಕಾಯಿ ಗ್ಯಾಸ್ಟ್ರಿಕ್ ಅಲ್ಲ.. ಇದರಿಂದ ಇದೆ ಅನೇಕ ಲಾಭಗಳು

ಸುದ್ದಿಒನ್ : ಹಸಿರು ಮೆಣಸಿನಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅರೋಗ್ಯದ ದೃಷ್ಟಿಯಿಂದ ಇದು ಅನೇಕ ಪ್ರಯೋಜನಗಳನ್ನು ಹೊಂದಿದೆ. ಹಸಿರು ಮೆಣಸು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಮತ್ತು ಕಣ್ಣಿನ ದೃಷ್ಟಿ ಸುಧಾರಿಸುತ್ತದೆ. ಕಣ್ಣಿನ ಸಮಸ್ಯೆಗಳನ್ನು

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು?

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು? ಸೋಮವಾರ ರಾಶಿ ಭವಿಷ್ಯ -ಮೇ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:34 ಶಾಲಿವಾಹನ

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

error: Content is protected !!