ಚಳ್ಳಕೆರೆ | 80 ಎಕರೆ ಈರುಳ್ಳಿ ಬೆಳೆಗೆ ಕೊಳೆ ರೋಗ : ಕೃಷಿ ಅಧಿಕಾರಿಗಳ ಭೇಟಿ, ಪರಿಶೀಲನೆ

ಸುದ್ದಿಒನ್,  ಚಿತ್ರದುರ್ಗ, ಆಗಸ್ಟ್ 23 : ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ಸುರಿದ ಮಳೆ ರೈತರಿಗೆ ಸಂತಸದ ಜೊತೆಗೆ ಸಂಕಷ್ಟವನ್ನೂ ತಂದಿದೆ. ಕೆಲವು ಬೆಳೆಗಳಿಗೆ ಮಳೆ ಅನುಕೂಲವಾಗಿದ್ದರೆ ಇನ್ನೂ ಕೆಲವು ಬೆಳಗಳಿಗೆ ರೋಗ, ಕೀಟದ ಬಾಧೆ ಕಾಡುತ್ತಿದೆ. ಕೆಲವು ಬೆಳೆಗಳು ಕೊಳೆತು ಹೋಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಚಳ್ಳಕೆರೆ ತಾಲೂಕಿನಾದ್ಯಂತ 11,299 ಹೆಕ್ಟೇರ್ ಪ್ರದೇಶದಲ್ಲಿ ಈರುಳ್ಳಿ ಬಿತ್ತನೆ ಮಾಡಲಾಗಿದ್ದು ಮಳೆಗೆ  80 ಎಕರೆ ಪ್ರದೇಶದಲ್ಲಿ  ಬೆಳೆ ಕೊಳೆ ರೋಗಕ್ಕೆ ತುತ್ತಾಗಿದೆ.

ತಾಲ್ಲೂಕಿನ ರಾಮಜೋಗಿಹಳ್ಳಿ, ಬಾಲೆನಹಳ್ಳಿ, ಹೆಗ್ಗೆರೆ, ಹೊಟ್ಟಜ್ಜನ ಕಪಿಲೆ,  ಸಾಣಿಕೆರೆ,  ಹಿರೇಮಧುರೆ,  ಚಿಗುತನಹಳ್ಳಿ ಕಪ್ಪುಭೂಮಿ ಇರುವಂತಹ ಪ್ರದೇಶದಲ್ಲಿ ಮಳೆ ನೀರು ನಿಂತು ಈರುಳ್ಳಿ ಬೆಳಗ್ಗೆ ಕೊಳೆರೋಗ ಆವರಿಸಿದೆ.

ತೋಟಗಾರಿಕೆ ಹಿರಿಯ ಸಹಾಯಕ ನಿರ್ದೇಶಕ  ವಿರುಪಾಕ್ಷಪ್ಪನವರು ರೋಗಪೀಡಿತ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ರೈತರಿಗೆ ಉಳಿದಂಥ ಬೆಳೆಗಳನ್ನು ಉಳಿಸಿಕೊಳ್ಳಲು ಹಲವು ಸಲಹೆಗಳನ್ನು ನೀಡಿದ್ದಾರೆ.

ಈ ಸಂದರ್ಭದಲ್ಲಿ ಅವರು ಮಾತನಾಡಿ, ಈರುಳ್ಳಿ ಬೆಳೆಯು ಒಂದು ಸೂಕ್ಷ್ಮ ಬೆಳೆಯಾಗಿದ್ದು ಇದಕ್ಕೆ ಹೆಚ್ಚು ಮಳೆ ಬಂದರೂ ಸಹ ಹಲವು ರೋಗದ ಬಾಧೆ ಕಾಡುತ್ತದೆ. ಈಗಾಗಲೇ ಮಳೆಯಿಂದ ಬೆಳೆ ಇರುವ ಜಮೀನುಗಳಿಗೆ ನೀರು ನುಗ್ಗಿದ್ದು ಕೊಳೆರೋಗ ಕಾಣಿಸಿಕೊಂಡಿದೆ. ಕೆಲವು ಜಮೀನುಗಳಲ್ಲಿ ಈರುಳ್ಳಿ ಬೆಳೆಗೆ ಸುಳಿರೋಗ, ನೇರಳೆ, ಮಚ್ಚೆ ರೋಗ ಇತರೆ ರೋಗಗಳು ಕಾಣಿಸಿಕೊಂಡಿದ್ದು ರೋಗದ ಹತೋಟಿಗೆ ರೈತರಿಗೆ ಹಲವು ಕ್ರಮಗಳನ್ನ ಕೈಗೊಳ್ಳುವಂತೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ರೈತ ಮುಖಂಡರಾದ ಓ. ಟಿ. ತಿಪ್ಪೇಸ್ವಾಮಿ, ಚಿದಾನಂದಪ್ಪ, ನಾಗಣ್ಣ, ತಿಮ್ಮೇಗೌಡ, ಹಾಗೂ ತೋಟಗಾರಿಕೆ ಅಧಿಕಾರಿ ಪ್ರವೀಣ್ ಇದ್ದರು.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

40 minutes ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

1 hour ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

4 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago