ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188
ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 23 :ಹೆದ್ದಾರಿ ಸಮೀಪ ಇರುವ ಶೌಚಲಯಕ್ಕೆ ಹೋಗಿ ವಾಪಸ್ ಬರುತ್ತಿದ್ದ ವ್ಯಕ್ತಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಒರ್ವ ಸ್ಥಳದಲ್ಲೇ ಮೃತ ಪಟ್ಟು ಕಾರಿನಲ್ಲಿದ್ದ ಇಬ್ಬರಿಗೆ ಗಾಯಗಾಳಾಗಿರುವ ಘಟನೆ ಇಂದು ಬೆಳಿಗ್ಗೆ ಸುಮಾರು 3 ಗಂಟೆ ಸಮಯದಲ್ಲಿ ನಡೆದಿದೆ.
ಚಳ್ಳಕೆರೆ ಸಮೀಪದ ರಾಷ್ಟ್ರೀಯ ಹೆದ್ದಾರಿ 150 ಎ ರಲ್ಲಿ ಈ ಅಪಘಾತ ಸಂಭವಿಸಿದ್ದು, ತಾಲ್ಲೂಕಿನ ಮನ್ನೆಕೊಟೆ ಗ್ರಾಮದ ಚಂದ್ರ ತನ್ನ ಸ್ನೇಹಿತರ ಜೊತೆಗೆ ಈಚರ್ ಲಾರಿಯಲ್ಲಿ ಬೆಂಗಳೂರಿಗೆ ಹೋಗಿ ವಾಪಸ್ ಬರುವಾಗ ಲಾರಿಯಿಂದ ಕೆಳಗೆ ಇಳಿದು ರಸ್ತೆ ಬದಿಯಲ್ಲಿದ್ದ ಸಾರ್ವಜನಿಕ ಶೌಚಾಲಯಕ್ಕೆ ಹೋಗಿ ವಾಪಸ್ ಬರುತ್ತಿರುವಾಗ ಚಿತ್ರದುರ್ಗದಿಂದ ಕೊಂಡ್ಲಹಳ್ಳಿ ಕಡೆ ಹೋರಟಿದ್ದ ಕಾರು ಚಂದ್ರುಗೆ ಹಿಂಬದಿಯಿಂದ ವೇಗವಾಗಿ ಡಿಕ್ಕಿ ಹೊಡೆದ ಪರಿಣಾಮ ಚಂದ್ರು ರಸ್ತೆಗೆ ಬಿದ್ದು ಸ್ಥಳದಲ್ಲೇ ಸಾವನಪ್ಪಿದರು. ಕಾರು ರಸ್ತೆಯ ಕಂಬಕ್ಕೆ ಡಿಕ್ಕಿಹೊಡೆದು ಪಲ್ಟಿಯಾಗಿದೆ. ಕಾರಿನ ಚಾಲಕ ಕೊಂಡ್ಲಹಳ್ಳಿಯ ಶಿವು ಹಾಗೂ ಅಜ್ಜಂಪುರ ತಾಲ್ಲೂಕಿನ ಕಲ್ಲೇನಹಳ್ಳಿ ಗ್ರಾಮದ ಚಂದನ್ ಈ ಇಬ್ಬರಿಗೆ ಗಾಯಗಳಾಗಿದ್ದ ಇಬ್ಬರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಳ್ಳಕೆರೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ ಪರಿಶೀಲನೆ ನಡೆಸಿದ್ದಾರೆ. ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ



