Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಳ್ಳಕೆರೆ | ವಾಣಿಜ್ಯ ಮಳಿಗೆಗಳ ತೆರವು ಕಾರ್ಯಾಚರಣೆ ಆರಂಭ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ನಗರಸಭೆಗೆ ಸೇರಿದ 94 ಇಂದಿರಾ ವಾಣಿಜ್ಯ ಮಳಿಗೆಗಳ ತೆರವು ಕಾರ್ಯಾಚರಣೆ ಇಂದು ಶನಿವಾರ ಬೆಳಗಿನ ಜಾವದಿಂದಲೇ ಆರಂಭವಾಗಿದೆ.

ನಗರಸಭೆ ವ್ಯಾಪ್ತಿಯ ಮಾದೇವಿ ರಸ್ತೆ ಹಾಗೂ ಬೆಂಗಳೂರು ರಸ್ತೆ ಹಾಗೂ ಪಾವಗಡ ರಸ್ತೆಯಲ್ಲಿ ಇರುವ ಈ ಮಳಿಗೆಗಳು ಶಿಥಿಲಾವಸ್ಥೆಗೆ ತಲುಪಿರುವ ಹಿನ್ನೆಲೆಯಲ್ಲಿ, ಪೌರ ಆಯುಕ್ತೆ ಡಾ. ನಾಗವೇಣಿ ಅವರ ಸಮ್ಮುಖದಲ್ಲಿ ಹಾಗೂ ಪೊಲೀಸ್ ಬಿಗಿ ಬಂದೋಬಸ್ತ್ ನಡುವೆ ತೆರವು ಕಾರ್ಯ ಮಾಡಲಾಗುತ್ತಿದೆ.

ಸುಮಾರು ಹಲವು ವರ್ಷಗಳಿಂದ ಕಡಿಮೆ ಬಾಡಿಗೆಯಲ್ಲಿ ನೀಡಲಾಗುತ್ತಿದ್ದ ಈ ಮಳಿಗೆಗಳಿಂದ ನಗರಸಭೆ ಬೊಕ್ಕಸಕ್ಕೆ ಭಾರೀ ನಷ್ಟ ಉಂಟಾಗಿರುವುದು ಬೆಳಕಿಗೆ ಬಂದಿದೆ. ಅಲ್ಲದೆ, ಕೆಲ ಬಾಡಿಗೆದಾರರು ಮಳಿಗೆಗಳನ್ನು ಇತರರಿಗೆ ಹೆಚ್ಚಿನ ಮೊತ್ತಕ್ಕೆ ಬಾಡಿಗೆಗೆ ನೀಡಿ ಲಾಭ ಪಡೆಯುತ್ತಿರುವ ಪ್ರಕರಣಗಳೂ ಪತ್ತೆಯಾಗಿವೆ. ಅಷ್ಟೇ ಅಲ್ಲದೆ 94 ಮಳಿಗೆಗೆಳಿ ಈಗಾಗಲೆ ಶಿಥಲಗೊಂಡಿದ್ದು ಅಪಾಯದ ಪರಿಸ್ಥಿತಿಯಲ್ಲಿವೆ.

 

ಈ ಹಿನ್ನೆಲೆಯಲ್ಲಿ, ನ್ಯಾಯಾಲಯದ ಆದೇಶದ ಮೇರೆಗೆ ನಗರಸಭೆ ಅಧಿಕಾರಿಗಳು ತೆರವು ಕಾರ್ಯಾಚರಣೆಗೆ ಮುಂದಾಗಿದ್ದಾರೆ. 1970ರಲ್ಲಿ ನಿರ್ಮಾಣಗೊಂಡ ಈ ಮಳಿಗೆಗಳು ಹಳೆಯದಾಗಿ ಶಿಥಿಲಗೊಂಡಿರುವುದರಿಂದ, ಸಾರ್ವಜನಿಕ ಸುರಕ್ಷತೆ ದೃಷ್ಟಿಯಿಂದಲೂ ಈ ಕ್ರಮ ಕೈಗೊಳ್ಳಲಾಗಿದೆ. ಇನ್ನೊಂದೆಡೆ, ಮಳಿಗೆ ಬಾಡಿಗೆದಾರರು ಈ ಕ್ರಮಕ್ಕೆ ವಿರೋಧ ವ್ಯಕ್ತಪಡಿಸಿದರೂ, ನ್ಯಾಯಾಲಯದ ಆದೇಶದಂತೆ ಅಧಿಕಾರಿಗಳು ತೆರವು ಕಾರ್ಯ ಮುಂದುವರೆಸುತ್ತಿದ್ದಾರೆ

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now