ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188
ಸುದ್ದಿಒನ್, ಚಳ್ಳಕೆರೆ, ಮೇ. 15 , :ಕುಡಿಯುವ ನೀರು ವ್ಯರ್ಥವಾಗುತ್ತಿರುವ ವಿಷಯವು ಅತ್ಯಂತ ಗಂಭೀರವಾದುದು. ನೀರು ಅಮೂಲ್ಯ ಸಂಪನ್ಮೂಲವಾಗಿದ್ದು, ಅದನ್ನು ಉಳಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ.

ಕುಡಿಯುವ ನೀರಿನ ಟ್ಯಾಂಕ್ ಗೆ ಸಂಪರ್ಕ ಕಲ್ಪಸುವ ಪೈಪ್ ಹೊಡೆದು ಹೋಗಿ ಅಮೂಲ್ಯವಾದ ನೀರಿ ಚರಂಡಿ ಸೇರುತ್ತಿದ್ದು ಗ್ರಾಮಸ್ಥರು ಅಧಿಕಾರಿಗಳ ವಿರುದ್ದ ಆಕ್ರೋಶ ಹೊರ ಹಾಕಿದ್ದಾರೆ..
ಕುಡಿಯುವ ನೀರು ವ್ಯರ್ಥವಾಗಿ ಹರಿಯುತ್ತಿರುವುದು ಎಲ್ಲಿ ಗೊತ್ತೇ..
ಚಳ್ಳಕೆರೆ ತಾಲ್ಲೂಕಿನ ಯಲಗಟ್ಟ ಗೊಲ್ಲರಹಟ್ಟಿಯ ಹಳೆ ಹಟ್ಟಿಯಲ್ಲಿ.
ಬೋರ್ ವೆಲ್ ನಿಂದ ನೀರಿನ ಟ್ಯಾಂಕ್ ಗೆ ಸಂಪರ್ಕ ಕಲ್ಪಿಸುವ ಪೈಪ್ ಹೊಡೆದು ಹೋಗಿದ್ದು ಇದರಿಂದ ನೀರು ವ್ಯರ್ಥವಾಗಿ ಹರಿದು ಚರಂಡಿ ಸೇರುತ್ತದೆ.
ಬೇಸಿಗೆಯ ಬಿಸಿಲು ನೀರಿನ ಅಭಾವ ಇಂಥ ಸಂದರ್ಭದಲ್ಲಿ ಅಮೂಲ್ಯವಾದ ನೀರು ವ್ಯರ್ಥವಾಗುತ್ತಿರುವುದನ್ನ ಕಂಡು ಗ್ರಾಮಸ್ಥರು ಅಧಿಕಾರಿಗಳ ಗಮನಕ್ಕೆ ತಂದರು ಯಾವುದೇ ಉಪಯೋಗವಾಗಿಲ್ಲ ವ್ಯರ್ಥವಾಗಿ ನೀರು ಹರಿಯುತ್ತಿರುವುದನ್ನು ತಡೆಯುತ್ತಿಲ್ಲ ಎಂದು ಗೊಲ್ಲರಹಟ್ಟಿ ಗ್ರಾಮಸ್ಥರಾದ ಮಂಜುನಾಥ, ಉಮೇಶ,ರಮೇಶ,ಕುಮಾರ್ ಮುತ್ತು ಅಧಿಕಾರಿಗಳ ವಿರುದ್ದ ಆಕ್ರೋಶ ಹೋರಹಾಕಿದ್ದಾರೆ.









