Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಳ್ಳಕೆರೆ | ಮದುವೆಗೆ ಕುಟುಂಬದವರ ವಿರೋಧ : ಯುವಕ ಆತ್ಮಹತ್ಯೆ

Facebook
Twitter
Telegram
WhatsApp

ಸುದ್ದಿಒನ್, ಚಳ್ಳಕೆರೆ, ಆಗಸ್ಟ್. 24 : ಪೋಷಕರಿಗೂ ಮಕ್ಕಳ ಭವಿಷ್ಯವೇ ಮುಖ್ಯವಾಗಿರುತ್ತದೆ. ಮಕ್ಕಳು ಬೆಳೆದ ಮೇಲೆ ಮದುವೆ ಮಾಡಿಸಿ, ಅವರಿಗೊಂದು ಜೀವನ ಕಲ್ಪಿಸಿಕೊಡುವ ಯೊಇಚನೆಯಲ್ಲಿಯೇ ಇರುತ್ತಾರೆ. ಆದರೆ ಅದಕ್ಕೂ ಮುನ್ನ ಮಕ್ಕಳು ಆರ್ಥಿಕವಾಗಿಯೂ ಬೆಳೆಯಬೇಕು, ಜವಾಬ್ದಾರಿ ಕಲಿತಿರಬೇಕೆಂಬ ಆಸೆ. ಅದೇ ವಯಸ್ಸಲ್ಲಿ ಪ್ರೀತಿ, ಪ್ರೇಮ ಅಂತ ಮಾಡಿದರೆ, ಆ ಮದುವೆಯನ್ನು ಒಪ್ಪುವುದಕ್ಕೆ ಆಗದೆ ಇದ್ದಾಗ ಮಕ್ಕಳಾದರೂ ಅರ್ಥ ಮಾಡಿಕೊಳ್ಳಬೇಕು. ಮಗ ಒಪ್ಪಿದ ಹುಡುಗಿಯನ್ನ ತಂದೆ ತಾಯಿ ಒಪ್ಪದೆ ಇದ್ದ ಕಾರಣಕ್ಕೆ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮದುವೆಗೆ ಕುಟುಂಬದವರು ನಿರಾಕರಿಸಿದ ಹಿನ್ನೆಲೆಯಲ್ಲಿ ಯುವಕ ನೇಣಿಗೆ ಶರಣಾದ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.

ನಗರದ ರಹೀಂನಗರ ಬಡಾವಣೆ ಅಬ್ದುಲ್ ರಹೆಮಾನ್(22) ಆತ್ಮಹತ್ಯೆ ಮಾಡಿಕೊಂಡ ಯುವಕ. ಅಪ್ರಾಪ್ತ ಬಾಲಕಿಯನ್ನು ಪ್ರೇಮಿಸಿ ಮದುವೆಯಾಗಬೇಕೆಂದುಕೊಂಡಿದ್ದ. ಆದರೆ
ಅಪ್ರಾಪ್ತೆ ಜತೆ ಮದುವೆಗೆ ಕುಟುಂಬದವರು ವಿರೋಧಿಸಿದ್ದರು. ಈ ಘಟನೆಯಿಂದ ಮನ ನೊಂದು ರೆಹಮಾನ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಈಗಿನ್ನು ಭವಿಷ್ಯದತ್ತ ಗಮನ ಹರಿಸಬೇಕಾದ ವಯಸ್ಸು. ದುಡಿದು ಬದುಕು ಕಟ್ಟಿಕೊಳ್ಳುವ ವಯಸ್ಸು. ಅಪ್ಪ ಅಮ್ಮನಿಗೆ ಆಸರೆಯಾಗಬೇಕಾದ ವಯಸ್ಸು. ಆದರೆ ಪ್ರೀತಿ ಪ್ರೇಮದ ಪಾಶಕ್ಕೆ ಸಿಲುಕಿ ಹುಡುಗ ಭವಿಷ್ಯದ ಬಗ್ಗೆ ಯೋಚನೆಯೇ ಮಾಡದೆ ಪ್ರಾಣವನ್ನೇ ಕಳೆದುಕೊಂಡಿದ್ದಾನೆ. ಮಗನ ಉಜ್ವಲ ಭವಿಷ್ಯದ ಚಿಂತೆ ಮಾಡಿದ್ದ ಪೋಷಕರಿಗೆ ಕಣ್ಣೀರೊಂದೆ ಬರ್ತಿದೆ. ಮಗನ ಸಾವು ಪೋಷಕರನ್ನ ಕಾಡುತ್ತಿದೆ. ಅಪ್ರಾಪ್ತೆಯನ್ನು ಲವ್ ಮಾಡಿದ್ದಕ್ಕೆ ಪ್ರೀತಿಯನ್ನು ತಿರಸ್ಕಾರ ಮಾಡಿದ್ದರು. ಆದರೆ ಪೋಷಕರ ಕಾಳಜಿ ಅರ್ಥ ಮಾಡಿಕೊಳ್ಳದೆ ಆತ್ಮಹತ್ಯೆಗೆ ಶರಣಾಗಿದ್ದಾನೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!