Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಾವಯವ ಕೃಷಿಯಲ್ಲಿ ಚಳ್ಳಕೆರೆ ರೈತನ ಕ್ರಾಂತಿ: ಬೇಸಿಗೆಯಲ್ಲೇ 134 ಕ್ವಿಂಟಲ್ ರಾಗಿ ಬೆಳೆದು ದಾಖಲೆ!

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188

ಚಳ್ಳಕೆರೆ ತಾಲೂಕಿನ ಬೊಂಬೇರಹಳ್ಳಿ ಗ್ರಾಮದ ರೈತ ಮುಖಂಡ ಕೆ. ಚಿಕ್ಕಣ್ಣ ಅವರು ಸಮಗ್ರ ಕೃಷಿ ಪದ್ಧತಿಯಲ್ಲಿ ಬೇಸಿಗೆಯಲ್ಲೇ 134 ಕ್ವಿಂಟಲ್ ರಾಗಿ ಇಳುವರಿ ಪಡೆದು ಗಮನ ಸೆಳೆದಿದ್ದಾರೆ. ಸಾವಯವ ವಿಧಾನವನ್ನು ಅನುಸರಿಸಿ 6 ಎಕರೆ ನೀರಾವರಿ ಜಮೀನಿನಲ್ಲಿ ರಾಗಿ ಬೆಳೆದಿರುವ ಅವರು, ಯಾವುದೇ ರಾಸಾಯನಿಕ ಔಷಧ ಅಥವಾ ರಸಗೊಬ್ಬರ ಬಳಸದೆ ಉತ್ತಮ ಫಲಿತಾಂಶ ಗಳಿಸಿದ್ದಾರೆ.

ಸುಮಾರು 26 ಎಕರೆ ಜಮೀನಿನಲ್ಲಿ ಸಮಗ್ರ ಕೃಷಿ ಕೈಗೊಂಡಿರುವ ಚಿಕ್ಕಣ್ಣ ಅವರು, 6 ಎಕರೆ ರಾಗಿ, 16 ಎಕರೆ ಮೆಕ್ಕೆಜೋಳ ಹಾಗೂ 5 ಎಕರೆ ದಾಳಿಂಬೆ ಬೆಳೆ ಬೆಳೆದಿದ್ದಾರೆ. ರಾಗಿ ಬೆಳೆಗೆ 40 ಲೋಡ್ ಕೊಟ್ಟಿಗೆ ಗೊಬ್ಬರ ಬಳಸಿದ್ದು, ಇದರ ಫಲವಾಗಿ ಎಕರೆಗೆ ಸರಾಸರಿ 20 ಕ್ವಿಂಟಲ್ ಇಳುವರಿ ದೊರೆತಿದೆ.ಇವರ ಬಳಿ 60 ಹಸುಗಳು ಹಾಗೂ 30 ಎಮ್ಮೆಗಳು ಇರುವುದರಿಂದ ಸಾಕಷ್ಟು ಸಗಣಿ ಗೊಬ್ಬರ ಲಭ್ಯವಾಗುತ್ತಿದೆ. ಇದೇ ಜಮೀನಿನಲ್ಲಿ ಮುಂಚಿತವಾಗಿ ಹೊಂಗೆ ಸೊಪ್ಪು ಬಳಸಿ ಭತ್ತ ಬೆಳೆದಿದ್ದು, ಭೂಮಿ ಫಲವತ್ತತೆ ಹೆಚ್ಚಲು ಸಹಾಯವಾಗಿದೆ.

ಇದರ ಪರಿಣಾಮವಾಗಿ ರಾಗಿ ಬೆಳೆಯಲ್ಲಿ ಉತ್ತಮ ಇಳುವರಿ ಸಾಧ್ಯವಾಗಿದೆ.ಇದಲ್ಲದೆ, ಈ ಕೃಷಿಯಿಂದ ದಿನವೂ ಸುಮಾರು 15 ಕೂಲಿ ಕಾರ್ಮಿಕರಿಗೆ ಉದ್ಯೋಗವೂ ಲಭ್ಯವಾಗಿದೆ. ಹೈದರಾಬಾದ್‌ನ ಭಾರತೀಯ ಸಿರಿಧಾನ್ಯ ಸಂಶೋಧನಾ ಸಂಸ್ಥೆಯಲ್ಲಿ ಅಭಿವೃದ್ಧಿಪಡಿಸಿದ ಎಂಆರ್-13 ತಳಿಯ ರಾಗಿಯನ್ನು ಆಂಧ್ರ ಪ್ರದೇಶದ ಕುಂದುರ್ಪಿಯ ರೈತ ಉತ್ಪಾದಕ ಸಂಸ್ಥೆಯ ಮಾರ್ಗದರ್ಶನದಲ್ಲಿ ಬೆಳೆದಿದ್ದಾರೆ.
ಈ ಸಾಧನೆಗೆ ಮೆಚ್ಚುಗೆ ವ್ಯಕ್ತವಾಗಿದ್ದು, ಮೇ 6ರಂದು ಹೈದರಾಬಾದ್‌ನ ಭಾರತೀಯ ಸಿರಿಧಾನ್ಯ ಸಂಶೋಧನಾ ಸಂಸ್ಥೆಯಲ್ಲಿ ರೈತ ಕೆ. ಚಿಕ್ಕಣ್ಣ ಅವರನ್ನು ಸನ್ಮಾನಿಸಲಾಗುತ್ತಿದೆ. ರಾಗಿ ಬೆಳೆಯಿಂದ 8 ಲೋಡ್ ಮೇವು ದೊರೆತಿದ್ದು, ಅವರ ಜಾನುವಾರುಗಳಿಗೆ ಪೌಷ್ಟಿಕ ಆಹಾರವಾಗಲಿದೆ ಎಂದು ಅವರು ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...