ಚಳ್ಳಕೆರೆ : 60 ವರ್ಷಗಳ ಹಿಂದಿನ ದೇವರ ಆಭರಣಗಳು ಪತ್ತೆ..!

ಚಳ್ಳಕೆರೆ, ಮಾರ್ಚ್. 25 : ಕಳ್ಳತನದಂತ ಪ್ರಕರಣಗಳು ಸಿನಿಮಾದಲ್ಲಿ ನಡೆದಂತೆ ನಡೆಯುವುದನ್ನು ನೋಡಿದ್ದೇವೆ. ಆದರೆ ದೇವರ ಈಗ ದೇವರ ಆಭರಣಗಳು ಕೂಡ ಸಿನಿಮಾದಲ್ಲಿ ನಡೆದಂತೆಯೇ ಆಗಿದೆ. ಕಾಂತಾರ ಸಿನಿಮಾದ ಕಥೆಯನ್ನೇ ಹೋಲುವಂತಹ ದೈವದ ಆಭರಣಗಳು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನನ್ನಿವಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಂಗಾರ ದೇವರಹಟ್ಟಿ ಗ್ರಾಮದಲ್ಲಿ ನಡೆದಿದೆ. ದೇವಸ್ಥಾನಕ್ಕೆ ಬುನಾದಿ ಹಾಕುವ ವೇಳೆ ದೇವರ ಚಿನ್ನದ ಆಭರಣ ಇರುವ ಪೆಟ್ಟಿಗೆ ಪತ್ತೆಯಾಗಿದೆ.

ಮ್ಯಾಸ ನಾಯಕ ಬುಡಕಟ್ಟು ಸಂಸ್ಕೃತಿಗೆ ಸೇರಿದ ದೇವರ ಆಭರಣ ಇದಾಗಿದೆ. ಪೂಜಾರಿಯೊಬ್ಬ 60 ವರ್ಷಗಳ ಹಿಂದೆ ಜಾತ್ರೆ ನಂತರ ಆಭರಣದ ಪೆಟ್ಟಿಗೆಯನ್ನು ಹೂತಿಟ್ಟಿದ್ದ. ಪ್ರತಿವರ್ಷ ಜಾತ್ರೆಯಲ್ಲಿ ಮಾತ್ರ ಆ ದೇವರ ಆಭರಣ ಹೊರ ತೆಗೆಯುತ್ತಿದ್ದ ಪೂಜಾರಿ. ಆದರೆ ಆಭರಣ ಪೆಟ್ಟಿಗೆ ಎಲ್ಲಿದೆ ಅಂತ ಯಾರಿಗೂ ಹೇಳದೆ ಪೂಜಾರಿ ಮೃತ ಪಟ್ಟಿದ್ದ. ದೇವರ ಒಡವೆಯ ವಿಚಾರಕ್ಕೆ ಗ್ರಾಮಸ್ಥರು ಹಾಗೂ ಪೂಜರಿಯ ನಡುವೆ ಆಗಾಗ ಜಗಳವೂ ಆಗುತ್ತಿತ್ತು. ಈ ಜಗಳ ಜಾಸ್ತಿಯಾಗುತ್ತಲೇ ಇದ್ದ ಕಾರಣ ಪೂಜಾರಿ ಕುಟುಂಬವೂ ಊರನ್ನ ತೊರೆದಿತ್ತು. ಇದೀಗ ಆ ಆಭರಗಳೆಲ್ಲಾ ಮತ್ತೆ ಸಿಕ್ಕಿವೆ.

ದೇವಸ್ಥಾನವನ್ನು ನಿರ್ಮಾಣ ಮಾಡುವುದಕ್ಕೆ ಗ್ರಾಮಸ್ಥೆರಲ್ಲಾ ತೀರ್ಮಾನ ಮಾಡಿದ್ದರು. ಅದರ ಅಂಗವಾಗಿಯೇ ಬುನಾದಿಯನ್ನು ಅಗೆಯುವುದಕ್ಕೆ ಶುರು ಮಾಡಿದರು. ಆಗ ನೆಲದ ಒಳಗೆ ಪೆಟ್ಟಿಗೆಯೊಂದು ಸದ್ದು ಮಾಡಿದೆ. ಸರಿ ಎಂದು ಆ ಪೆಟ್ಟಿಗೆಯನ್ನ ಹೊರ ತೆಗೆಯುವ ಪ್ರಯತ್ನವನ್ನು ಮಾಡಿದರು. ಇದೊಂದು ಖಾಲಿ ಪೆಟ್ಟಿಗೆ ಎಂದುಕೊಂಡು ಗುಜರಿಗೆ ಹಾಕಲು ಯೋಚನೆ ಮಾಡಿದರು. ಆದರೆ ಒಮ್ಮೆ ಪೆಟ್ಟಿಗೆ ತೆರೆದು ನೋಡುವ ಆಲೋಚನೆ ಮಾಡಿದಾಗ ಅದರಲ್ಲಿ ದೇವರ ಚಿನ್ನಾಭರಣ ಇದ್ದದ್ದು ಬೆಳಕಿಗೆ ಬಂದಿದೆ. ಪತ್ತೆಯಾದ ಲಾಕರ್‌ನಲ್ಲಿ ದೇವರ ಒಡವೆಗಳು, ನಾಗರ ಹೆಡೆ, ರಾಗಿ ಪೂಜಾ ಸಾಮಗ್ರಿಗಳು, ದೇವರ ದೀಪಗಳು, ವಿಗ್ರಹ, ನಾಣ್ಯಗಳು, ಭಕ್ತರು ಅರ್ಪಿಸಿದ ಕಾಣಿಕೆಗಳು ಇವೆ. ಸದ್ಯ ಪಾಲಿಶ್ ಮಾಡಿಸಲು ಗ್ರಾಮಸ್ಥರು ಆಭರಣಗಳನ್ನ ನೀಡಿದ್ದಾರೆ.

suddionenews

Recent Posts

ಸಾರ್ವಜನಿಕರಿಗೆ ಮಹತ್ವದ ಮಾಹಿತಿ : ಚಿತ್ರದುರ್ಗದಲ್ಲಿಂದು ನಾಣ್ಯಗಳ ಮೇಳ

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28 : ನಗರದ ಐ.ಯು.ಡಿ.ಪಿ. ಲೇಔಟ್ ನ ಕರ್ನಾಟಕ ಗ್ರಾಮೀಣ ಬ್ಯಾಂಕ್ ನಕರೆನ್ಸಿ ಚೆಸ್ಟ್ ಶಾಖೆಯಲ್ಲಿ…

2 hours ago

ಚಿತ್ರದುರ್ಗದಲ್ಲಿ ಏಪ್ರಿಲ್‌ 01 ರಿಂದ ಬೇಸಿಗೆ ಶಿಬಿರ : ಇಲ್ಲಿದೆ ಮಾಹಿತಿ… !

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 27 : ಎಲ್ಲೆಡೆ ಪರೀಕ್ಷೆಗಳು ಮುಗಿಯುವ ಹಂತಕ್ಕೆ ಬಂದಿವೆ. ಇನ್ನೇನೂ ಸದ್ಯದಲ್ಲೇ ಶಾಲಾ-ಕಾಲೇಜು ರಜೆ ಘೋಷಣೆ…

2 hours ago

ತಲೆನೋವು ಸದಾ ಕಾಡುತ್ತಾ..? ಈ ಮನೆ ಮದ್ದನ್ನ ಟ್ರೈ ಮಾಡಿ ಸಾಕು

ಹಲವರಿಗೆ ಇದ್ದಕ್ಕಿದ್ದ ಹಾಗೇ ತಲೆ ನೋವು ಬರುತ್ತೆ. ಮಾತ್ರೆಗಳಿಗೆ ಅಂತವರು ಅಡಿಕ್ಟ್ ಆಗಿರುತ್ತಾರೆ. ಆದರೆ ಮಾತ್ರೆ ತೆಗೆದುಕೊಳ್ಳುವುದು ಸದಾ ಕಾಲ…

3 hours ago

ಈ ರಾಶಿಯವರು ಕ್ಯಾಂಟೀನ್ ಬೇಕರಿ ಅಂತಹ ಸಣ್ಣ ಪುಟ್ಟ ವ್ಯಾಪಾರ ಪ್ರಾರಂಭಿಸಿ

ಈ ರಾಶಿಯವರು ಕ್ಯಾಂಟೀನ್ ಬೇಕರಿ ಅಂತಹ ಸಣ್ಣ ಪುಟ್ಟ ವ್ಯಾಪಾರ ಪ್ರಾರಂಭಿಸಿ, ಶುಕ್ರವಾರದ ರಾಶಿ ಭವಿಷ್ಯ 28 ಮಾರ್ಚ್ 2025…

5 hours ago

ಐಮಂಗಲ ಪೊಲೀಸರಿಂದ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ಭಾಗಿಯಾಗಿದ್ದ ಇಬ್ಬರ ಬಂಧನ

ಸುದ್ದಿಒನ್, ಹಿರಿಯೂರು, ಮಾರ್ಚ್. 27 : ಅಕ್ರಮ ಆನ್‌ಲೈನ್ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ಭಾಗಿಯಾಗಿದ್ದ ಇಬ್ಬರು ವ್ಯಕ್ತಿಗಳನ್ನು ಐಮಂಗಲ ಪೊಲೀಸರು…

12 hours ago

ಬೆಂಗಳೂರಲ್ಲಿ ಬೆಚ್ಚಿಬೀಳಿಸಿದ ಕೊಲೆ ; ಪತ್ನಿಯನ್ನ ಕೊಂದು ಸೂಟ್ ಕೇಸ್ ಗೆ ತುಂಬಿದ ಗಂಡ..!

ಬೆಂಗಳೂರು; ಇತ್ತೀಚೆಗಂತೂ ಕೊಲೆ ಕೇಸದ ಗಳನ್ನೇ ಹೆಚ್ಚಾಗಿ‌ಕೇಳ್ತಾ ಇದ್ದೀವಿ. ಅದರಲ್ಲೂಈ ರೀತಿಯ ಕೊಲೆಗಳು ಕೂಡ ಜಾಸ್ತಿ ಆಗ್ತಾ ಇದಾವೆ. ಇಂದು…

12 hours ago