Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ आध्यात्मिक अन्य

---Advertisement---

ಚಳ್ಳಕೆರೆ : ಗೋಪನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಎಚ್ ಕೆ ಸುಮಿತ್ರ ಶ್ರೀನಿವಾಸ ಅವಿರೋಧ ಆಯ್ಕೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188

ಸುದ್ದಿಒನ್, ಚಳ್ಳಕೆರೆ, ಜುಲೈ. 23 : ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳ ಮೂಲಸೌಕರ್ಯಗಳಿಗೆ ಹೆಚ್ಚಿನ ಆದ್ಯತೆಯ ನೀಡುತ್ತೇನೆ ಎಂದು ಗೋಪನಹಳ್ಳಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷೆ ಎಚ್ ಕೆ. ಸುಮಿತ್ರ ಶ್ರೀನಿವಾಸ್ ಹೇಳಿದರು.

ಗೋಪನಹಳ್ಳಿ ಗ್ರಾಮ ಪಂಚಾಯತಿಯಲ್ಲಿ ನಡೆದ ಅಧ್ಯಕ್ಷರ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿ ನಂತರ ಅವರು ಮಾತನಾಡಿ, ಅಧ್ಯಕ್ಷರ ಚುನಾವಣೆಯಲ್ಲಿ ನನ್ನನ್ನ ಅವಿರೋಧವಾಗಿ ಆಯ್ಕೆ ಮಾಡಿದ ಎಲ್ಲಾ ಸದಸ್ಯರಿಗೂ ಈ ಮೂಲಕ ಅಭಿನಂದನೆ ತಿಳಿಸುತ್ತೇನೆ. ನಮ್ಮ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಗೋಪನಹಳ್ಳಿ, ಚಿಕ್ಕೇನಹಳ್ಳಿ ಹಾಗೂ ರೆಡ್ಡಿ ಹಳ್ಳಿಗಳು ಒಳಪಟ್ಟಿದ್ದು ಗ್ರಾಮಗಳಲ್ಲಿನ ಮೂಲಸೌಕರ್ಯಗಳಾದ ಚರಂಡಿ ಸ್ವಚ್ಛತೆ ಶುದ್ಧವಾದ ಕುಡಿಯುವ ನೀರು, ಮನೆ ಇಲ್ಲದವರಿಗೆ ಮನೆ ನಿರ್ಮಾಣಕ್ಕೆ ಅವಕಾಶ ಹಾಗೂ ಸ್ಮಶಾನಗಳ ಸ್ವಚ್ಛತೆ, ಹಾಗೂ ವಿದ್ಯುತ್ ಕಂಬಗಳಿಗೆ ಬಲ್ಪಗಳ ವ್ಯವಸ್ಥೆ, ಕಲ್ಪಿಸಲು ನಮ್ಮ ಗ್ರಾಮ ಪಂಚಾಯತಿ ಸದಸ್ಯರ ಒಡಗೂಡಿ ಪ್ರಯತ್ನ ಮಾಡುತ್ತೇನೆ. ಇಂದು ನನಗೆ ಅಧ್ಯಕ್ಷರಾಗಲು ಅವಕಾಶ ಮಾಡಿಕೊಟ್ಟ ಗ್ರಾಮ ಪಂಚಾಯತಿ ಸದಸ್ಯರಿಗೆ ಹಾಗೂ 3 ಗ್ರಾಮಗಳ ಮುಖಂಡರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಚುನಾವಣೆ ಪ್ರಕ್ರಿಯೆಯಲ್ಲಿ ಪಾಲ್ಗೊಂಡ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ರಾಜನಾಯ್ಕ್ ಎಚ್. ಕೆ. ಸುಮಿತ್ರ ಶ್ರೀನಿವಾಸ್ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಣೆ ಮಾಡಿದರು.

ಈ ವೇಳೆ ಗ್ರಾಮ ಪಂಚಾಯಿತಿ ಸದಸ್ಯರಾದ ಭವಾನಿ ಉಮೇಶ, ಎಸ್ ಡಿ.ನಾಗರಾಜ್, ಗೀತಾ ಪರಮೇಶ, ಲಕ್ಷ್ಮಿ ಹರೀಶ, ಕಲಾವತಿ, ಕೆ.ಟಿ.ಶಿವಣ್ಣ, ಹೊಚಿ ಬೋರಯ್ಯ, ಕೊಡಳ್ಳಮ್ಮ,ಲಕ್ಷ್ಮಕ್ಕ, ಪಿ.ಎನ್.ದೊಡ್ಡೆರಂಗೆಗೌಡ,
ಪಿಡಿಓ ಎನ್ ಆರ್ ತಿಪ್ಪೇಸ್ವಾಮಿ, ಕಾರ್ಯಕ್ರದರ್ಶಿ ಎಸ್ ಆರ್ ಕರಿಯಪ್ಪ, ಜೆಡಿಎಸ್ ನ ತಾಲೂಕು ಕಾರ್ಯದರ್ಶಿ ಹೆಗ್ಗೆರೆ ಆನಂದಪ್ಪ, ಗ್ರಾಮಪಂಚಾಯಿತಿ ಸಿಬ್ಬಂದಿಗಳು ಚಿಕ್ಕೇನಹಳ್ಳಿ ಗ್ರಾಮಸ್ಥರು, ಗೋಪನಹಳ್ಳಿ ಗ್ರಾಮದ ಮುಖಂಡರಾದ ಗಿರೀಶ್, ಪರಮೇಶ್ ಮೂರ್ತಿ,ಹಾಗೂ ರೆಡ್ಡಿಹಳ್ಳಿ ಗ್ರಾಮದ ಮುಖಂಡರು ಇದ್ದರು.

Join WhatsApp

Join Now

Join Telegram

Join Now

Leave a Comment