Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಳ್ಳಕೆರೆ | ಹಸು ಹಾಗು ವ್ಯಕ್ತಿ ಮೇಲೆ ಚಿರತೆ ದಾಳಿ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

ಸುದ್ದಿಒನ್, ಚಳ್ಳಕೆರೆ, ಸೆಪ್ಟೆಂಬರ್. 24 : ಆಹಾರ ಅರಸಿ ಕಾಡುಪ್ರಾಣಿಗಳು ನಾಡಿನತ್ತ ಬಂದು ಪ್ರಾಣಿಗಳ ಮೇಲೆ ಮನುಷ್ಯರ ಮೇಲೆ ದಾಳಿ ಮಾಡುತ್ತಿರುವುದು ದಿನೇ ದಿನೇ ಹೆಚ್ಚುತ್ತಿದೆ.

ಹಸುಗಳು ಮೇಯಿಸಿಕೊಂಡು ಬರುವಾಗ ಹಸು ಹಾಗೂ ವ್ಯಕ್ತಿ ಮೇಲೆ ಚಿರತೆ ದಾಳಿ ಮಾಡಿರುವ ಘಟನೆ ಭಾನುವಾರ ಸಂಜೆ ತಾಲ್ಲೂಕಿನ ಬಂಡೆಹಟ್ಟಿ ಅರಣ್ಯ ಪ್ರದೇಶದಲ್ಲಿ ಘಟನೆ ಜರುಗಿದೆ.

ಬಂಡೆಹಟ್ಟಿ ಸಮೀಪ ಅರಣ್ಯ ಪ್ರದೇಶದಲ್ಲಿ ಬಂಡಿಹಟ್ಟಿ ಗ್ರಾಮದ ರಘು ಎನ್ನುವ ವ್ಯಕ್ತಿ ಹಸುಗಳು ಮೇಯಿಸಿಕೊಂಡು ಅರಣ್ಯದಿಂದ ಹಸುಗಳನ್ನ ಹೊಡೆದುಕೊಂಡು ಹಟ್ಟಿಗೆ ಬರುವಾಗ ಏಕಾಏಕಿ ಚಿರತೆ ಹಸುವಿನ ಮೇಲೆ ದಾಳಿ ಮಾಡಿದೆ. ಈ ಸಮಯದಲ್ಲಿ ಮಾಲೀಕ ರಘು ಚಿರತೆಯನ್ನು ಒಡಿಸಲು ಹಸುವಿನ ಬಳಿ ಒಡಿದಾಗ ರಘು ಮೇಲೆ ಸಹ ಚಿರತೆ ಎಗರಿ ದಾಳಿಗೆ ಮುಂದಾಗಿದ್ದಾಗ ರಸ್ತೆಯಲ್ಲಿ ಬರುತ್ತಿದ್ದ ಟ್ರಾಕ್ಟರ್ ಚಾಲಕ ಹಾಗೂ ಕುರಿಗಾಯಿಗಳು ಕಿರುಚಾಟ ನಡೆಸಿದಾಗ ವ್ಯಕ್ತಿ ಮೇಲೆ ದಾಳಿ ಮಾಡಿದೆ ಚಿರತೆ ಬಿಟ್ಟು ಅರಣ್ಯ ಪ್ರದೇಶದಲ್ಲಿ ಒಡಿಹೋಗಿದ್ದು, ರಘು ಪ್ರಾಣಪಾಯದಿಂದ ಪಾರಾಗಿದ್ದಾನೆ.

ಈ ಹಿಂದೆ ಗ್ರಾಮದ ಕುರಿ, ಮೇಕೆ, ನಾಯಿಗಳ ಮೇಲೆ ಚಿರತೆ ದಾಳಿ ಮಾಡಿದೆ, ಈಗ ಮತ್ತೆ ದಾಳಿ ಮಾಡಿರುವುದರಿಂದ ಗ್ರಾಮದ ಕುರಿಗಾಯಿಗಳು ಆತಂಕಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment