Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಳ್ಳಕೆರೆ | ನೂತನ ಐದು ಅಶ್ವಮೇಧ ಸಾರಿಗೆ ಬಸ್ಸುಗಳಿಗೆ ಶಾಸಕ ಟಿ. ರಘುಮೂರ್ತಿ ಚಾಲನೆ

Facebook
Twitter
Telegram
WhatsApp

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

ಚಳ್ಳಕೆರೆ, ಸೆಪ್ಟೆಂಬರ್ 01 : ನಗರ ಹೊರಭಾಗದಲ್ಲಿ ವಿದ್ಯಾರ್ಥಿ ಗಳ ನಿಲಯಗಳು ಇರುವುದರಿಂದ ಅಲ್ಲಿಂದ ಶಾಲಾ ಕಾಲೇಜುಗಳಿಗೆ ನಗರಕ್ಕೆ ಬರುವ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ವಿದ್ಯಾರ್ಥಿಗಳನ್ನು ಸರಿಯಾದ ಸಮಯಕ್ಕೆ ಶಾಲೆಗೆ ತಲುಪಿಸುವಂತಹ ಕಾರ್ಯವಾಗಬೇಕು. ಜತೆಗೆ ನಗರದ ಒಳಗೆ ಬರುವಂತಹ ಎಲ್ಲಾ ಕೆ ಎಸ್ ಆರ್ ಟಿ ಸಿ ಬಸ್ಸುಗಳು ಕಡ್ಡಾಯವಾಗಿ ಬಸ್ ನಿಲ್ದಾಣಕ್ಕೆ ಬಂದು ಹೋಗುವಂತೆ ನೋಡಿಕೊಳ್ಳಬೇಕು ಎಂದು

ಶಾಸಕ ಟಿ .ರಘುಮೂರ್ತಿ ಹೇಳಿದರು.

ನಗರದ ಸಾರಿಗೆ ಬಸ್ ನಿಲ್ದಾಣದಿಂದ ವಿವಿಧ ಗ್ರಾಮಗಳಿಂದ ಬೆಂಗಳೂರಿಗೆ ನೂತನ ಐದು ಅಶ್ವಮೇಧ ಸಾರಿಗೆ ಬಸ್ ಗಳಿಗೆ ಚಾಲನೆ ನೀಡಿ ಮಾತನಾಡಿದರು. ಗ್ರಾಮೀಣ ಭಾಗದಿಂದ ನಗರಕ್ಕೆ ಬರುವಂತಹ ಪ್ರಯಾಣಿಕರಿಗೆ ಕೆ ಎಸ್ ಆರ್ ಟಿ ಸಿ ಬಸ್ಸು ನಿಂದ ಅನುಕೂಲವಾಗಬೇಕು.

ಜೊತೆಗೆ ವಿದ್ಯಾರ್ಥಿಗಳಿಗೂ ಸಹ ಇದರಿಂದ ಅನುಕೂಲವಾಗುತ್ತದೆ. ಬಸ್ ನಿಲ್ದಾಣದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು . ಪ್ರಯಾಣಿಕರಿಗೆ ಯಾವುದೇ ರೀತಿಯ ತೊಂದರೆ ಆಗಬಾರದು. ನಗರದಿಂದ ಹಾದು ಹೋಗುವ ಎಲ್ಲಾ ಕೆಎಸ್ಆರ್ಟಿಸಿ ಬಸ್ ಗಳು ಬಸ್ ನಿಲ್ದಾಣಕ್ಕೆ ಕಡ್ಡಾಯವಾಗಿ ಬರಬೇಕು. ಶಕ್ತಿ ಯೋಜನೆ ಸಮರ್ಪಕವಾಗಿ ಬಳಕೆಯಾಗಲಿ. ಓಬಳಾಪುರ, ನಾಯಕನಹಟ್ಟಿ ಈ ಮಾರ್ಗಗಳಿಗೆ ಹಲವು
ವರ್ಷಗಳಿಂದ ಬೆಂಗಳೂರಿಗೆ ಸರ್ಕಾರಿ ಬಸ್ಸಿನ
ಬೇಡಿಕೆ ಇತ್ತು ಅದೇರೀತಿ ಗಡಿ ಭಾಗದ . ವಿದ್ಯಾರ್ಥಿಗಳು, ರೈತರು,
ಗ್ರಾಮಸ್ಥರು , ನಗರಗಳಿಗೆ ತೆರಳಲು
ಪರದಾಡುವುದನ್ನು ತಪ್ಪಿಸಲು ನಿತ್ಯವೂ ನಿಗದಿತ ಸಮಯಕ್ಕೆ ಬಸ್ ವ್ಯವಸ್ಥೆ ಮಾಡುವಂತೆ ತಿಳಿಸಿದರು.

ಕೆ ಎಸ್ ಆರ್ ಟಿ ಸಿ ಇಲಾಖೆ ಡಿಸಿ ಅಶ್ವಮೇಧ ನೂತನ ಐದು ಬಸ್ಸಿಗಳಿಗೆ ಇಂದು ಶಾಸಕರು ಚಾಲನೆ ನೀಡಿದ್ದು ಶ್ರೀನಿವಾಸ್ ಮೂರ್ತಿ ಮಾತನಾಡಿ. ಚಳ್ಳಕೆರೆ ಹೋಬಳಾಪುರ ಹಾಗೂ ಬೆಂಗಳೂರು ಈ ಮಾರ್ಗವಾಗಿ ಒಂದು ಬಸ್ ಚಲಿಸುತ್ತೆ.

ಚಳ್ಳಕೆರೆ ನಾಯಕನಹಟ್ಟಿ ಬೆಂಗಳೂರು ಹಾಗೂ ಚಳ್ಳಕೆರೆ ತಪ್ಪಾಗೊಂಡನಹಳ್ಳಿ ಬೆಂಗಳೂರು, ಮತ್ತು ಚಳ್ಳಕೆರೆ ಚಿತ್ರದುರ್ಗ ಚಳ್ಳಕೆರೆ ಬೆಂಗಳೂರು, ಚಳ್ಳಕೆರೆ ಚಿತ್ರದುರ್ಗ ಚಳ್ಳಕೆರೆ ಬೆಂಗಳೂರಿಗೆ ಈ ಬಸ್ಸುಗಳು ಹೋಗಲಿವೆ. ನಿಲ್ದಾಣದಲ್ಲಿ ಸಿಬ್ಬಂದಿಗಳ ಕೊರತೆ ಇದ್ದು ಹೆಚ್ಚಿನ ಸಿಬ್ಬಂದಿಗಳ ವ್ಯವಸ್ಥೆ ಮಾಡಲಾಗುತ್ತದೆ. ನಿಲ್ದಾಣದ ಒಳಗೆ ಖಾಸಗಿ ವಾಹನಗಳು ಬರುತ್ತಿದ್ದು. ವಾಹನ ಕಡೆಗೆ ಕಡಿವಾಣ ಹಾಕಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಜೈತುನ್ಬಿ ಬಿ.ಉಪಾಧ್ಯಕ್ಷೆ ಓ.ಸುಜಾತ, ಸದಸ್ಯರಾದ ಮಂಜುಳ, ಆರ್ ಪ್ರಸನ್ನ ಕುಮಾರ್,ಎಂ.ಜೆ. ರಾಘವೇಂದ್ರ, ವೀರಭದ್ರಪ್ಪ, ಪರಶುರಾಮಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ. ಟಿ. ಶಶಿಧರ್, ಭದ್ರಪ್ಪ, ಚಳ್ಳಕೆರೆ ಕೆ ಎಸ್ ಆರ್ ಟಿ ಸಿ ಡಿಪೋ ವ್ಯವಸ್ಥಾಪಕರಾದ ಎಸ್ ಪ್ರಭು, ತಿಪ್ಪೇಸ್ವಾಮಿ, ಸೂರಪ್ಪನಾಯಕ ,ಧನಂಜಯ, ರೇಖಾ ,ವೀರೇಶ್, ಮುತ್ತಣ್ಣ ,ಚಂದ್ರೇಶ ಶಿವಕುಮಾರ್, ಮುತ್ತುರಾಜ್,ಟಿ.ಸಿ. ಪ್ರದೀಪ್, ಸೇರಿದಂತೆ ನಾಗರಿಕರು ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!