ಚಳ್ಳಕೆರೆ | ನೂತನ ಐದು ಅಶ್ವಮೇಧ ಸಾರಿಗೆ ಬಸ್ಸುಗಳಿಗೆ ಶಾಸಕ ಟಿ. ರಘುಮೂರ್ತಿ ಚಾಲನೆ

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

ಚಳ್ಳಕೆರೆ, ಸೆಪ್ಟೆಂಬರ್ 01 : ನಗರ ಹೊರಭಾಗದಲ್ಲಿ ವಿದ್ಯಾರ್ಥಿ ಗಳ ನಿಲಯಗಳು ಇರುವುದರಿಂದ ಅಲ್ಲಿಂದ ಶಾಲಾ ಕಾಲೇಜುಗಳಿಗೆ ನಗರಕ್ಕೆ ಬರುವ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ವಿದ್ಯಾರ್ಥಿಗಳನ್ನು ಸರಿಯಾದ ಸಮಯಕ್ಕೆ ಶಾಲೆಗೆ ತಲುಪಿಸುವಂತಹ ಕಾರ್ಯವಾಗಬೇಕು. ಜತೆಗೆ ನಗರದ ಒಳಗೆ ಬರುವಂತಹ ಎಲ್ಲಾ ಕೆ ಎಸ್ ಆರ್ ಟಿ ಸಿ ಬಸ್ಸುಗಳು ಕಡ್ಡಾಯವಾಗಿ ಬಸ್ ನಿಲ್ದಾಣಕ್ಕೆ ಬಂದು ಹೋಗುವಂತೆ ನೋಡಿಕೊಳ್ಳಬೇಕು ಎಂದು

ಶಾಸಕ ಟಿ .ರಘುಮೂರ್ತಿ ಹೇಳಿದರು.

ನಗರದ ಸಾರಿಗೆ ಬಸ್ ನಿಲ್ದಾಣದಿಂದ ವಿವಿಧ ಗ್ರಾಮಗಳಿಂದ ಬೆಂಗಳೂರಿಗೆ ನೂತನ ಐದು ಅಶ್ವಮೇಧ ಸಾರಿಗೆ ಬಸ್ ಗಳಿಗೆ ಚಾಲನೆ ನೀಡಿ ಮಾತನಾಡಿದರು. ಗ್ರಾಮೀಣ ಭಾಗದಿಂದ ನಗರಕ್ಕೆ ಬರುವಂತಹ ಪ್ರಯಾಣಿಕರಿಗೆ ಕೆ ಎಸ್ ಆರ್ ಟಿ ಸಿ ಬಸ್ಸು ನಿಂದ ಅನುಕೂಲವಾಗಬೇಕು.

ಜೊತೆಗೆ ವಿದ್ಯಾರ್ಥಿಗಳಿಗೂ ಸಹ ಇದರಿಂದ ಅನುಕೂಲವಾಗುತ್ತದೆ. ಬಸ್ ನಿಲ್ದಾಣದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು . ಪ್ರಯಾಣಿಕರಿಗೆ ಯಾವುದೇ ರೀತಿಯ ತೊಂದರೆ ಆಗಬಾರದು. ನಗರದಿಂದ ಹಾದು ಹೋಗುವ ಎಲ್ಲಾ ಕೆಎಸ್ಆರ್ಟಿಸಿ ಬಸ್ ಗಳು ಬಸ್ ನಿಲ್ದಾಣಕ್ಕೆ ಕಡ್ಡಾಯವಾಗಿ ಬರಬೇಕು. ಶಕ್ತಿ ಯೋಜನೆ ಸಮರ್ಪಕವಾಗಿ ಬಳಕೆಯಾಗಲಿ. ಓಬಳಾಪುರ, ನಾಯಕನಹಟ್ಟಿ ಈ ಮಾರ್ಗಗಳಿಗೆ ಹಲವು
ವರ್ಷಗಳಿಂದ ಬೆಂಗಳೂರಿಗೆ ಸರ್ಕಾರಿ ಬಸ್ಸಿನ
ಬೇಡಿಕೆ ಇತ್ತು ಅದೇರೀತಿ ಗಡಿ ಭಾಗದ . ವಿದ್ಯಾರ್ಥಿಗಳು, ರೈತರು,
ಗ್ರಾಮಸ್ಥರು , ನಗರಗಳಿಗೆ ತೆರಳಲು
ಪರದಾಡುವುದನ್ನು ತಪ್ಪಿಸಲು ನಿತ್ಯವೂ ನಿಗದಿತ ಸಮಯಕ್ಕೆ ಬಸ್ ವ್ಯವಸ್ಥೆ ಮಾಡುವಂತೆ ತಿಳಿಸಿದರು.

ಕೆ ಎಸ್ ಆರ್ ಟಿ ಸಿ ಇಲಾಖೆ ಡಿಸಿ ಅಶ್ವಮೇಧ ನೂತನ ಐದು ಬಸ್ಸಿಗಳಿಗೆ ಇಂದು ಶಾಸಕರು ಚಾಲನೆ ನೀಡಿದ್ದು ಶ್ರೀನಿವಾಸ್ ಮೂರ್ತಿ ಮಾತನಾಡಿ. ಚಳ್ಳಕೆರೆ ಹೋಬಳಾಪುರ ಹಾಗೂ ಬೆಂಗಳೂರು ಈ ಮಾರ್ಗವಾಗಿ ಒಂದು ಬಸ್ ಚಲಿಸುತ್ತೆ.

ಚಳ್ಳಕೆರೆ ನಾಯಕನಹಟ್ಟಿ ಬೆಂಗಳೂರು ಹಾಗೂ ಚಳ್ಳಕೆರೆ ತಪ್ಪಾಗೊಂಡನಹಳ್ಳಿ ಬೆಂಗಳೂರು, ಮತ್ತು ಚಳ್ಳಕೆರೆ ಚಿತ್ರದುರ್ಗ ಚಳ್ಳಕೆರೆ ಬೆಂಗಳೂರು, ಚಳ್ಳಕೆರೆ ಚಿತ್ರದುರ್ಗ ಚಳ್ಳಕೆರೆ ಬೆಂಗಳೂರಿಗೆ ಈ ಬಸ್ಸುಗಳು ಹೋಗಲಿವೆ. ನಿಲ್ದಾಣದಲ್ಲಿ ಸಿಬ್ಬಂದಿಗಳ ಕೊರತೆ ಇದ್ದು ಹೆಚ್ಚಿನ ಸಿಬ್ಬಂದಿಗಳ ವ್ಯವಸ್ಥೆ ಮಾಡಲಾಗುತ್ತದೆ. ನಿಲ್ದಾಣದ ಒಳಗೆ ಖಾಸಗಿ ವಾಹನಗಳು ಬರುತ್ತಿದ್ದು. ವಾಹನ ಕಡೆಗೆ ಕಡಿವಾಣ ಹಾಕಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಜೈತುನ್ಬಿ ಬಿ.ಉಪಾಧ್ಯಕ್ಷೆ ಓ.ಸುಜಾತ, ಸದಸ್ಯರಾದ ಮಂಜುಳ, ಆರ್ ಪ್ರಸನ್ನ ಕುಮಾರ್,ಎಂ.ಜೆ. ರಾಘವೇಂದ್ರ, ವೀರಭದ್ರಪ್ಪ, ಪರಶುರಾಮಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ. ಟಿ. ಶಶಿಧರ್, ಭದ್ರಪ್ಪ, ಚಳ್ಳಕೆರೆ ಕೆ ಎಸ್ ಆರ್ ಟಿ ಸಿ ಡಿಪೋ ವ್ಯವಸ್ಥಾಪಕರಾದ ಎಸ್ ಪ್ರಭು, ತಿಪ್ಪೇಸ್ವಾಮಿ, ಸೂರಪ್ಪನಾಯಕ ,ಧನಂಜಯ, ರೇಖಾ ,ವೀರೇಶ್, ಮುತ್ತಣ್ಣ ,ಚಂದ್ರೇಶ ಶಿವಕುಮಾರ್, ಮುತ್ತುರಾಜ್,ಟಿ.ಸಿ. ಪ್ರದೀಪ್, ಸೇರಿದಂತೆ ನಾಗರಿಕರು ಇದ್ದರು.

suddionenews

Recent Posts

ವಿರಾಟ್ ಕೊಹ್ಲಿ ಸೂಪರ್ ಸೆಂಚುರಿ : ಪಾಕಿಸ್ತಾನವನ್ನು ಹೀನಾಯವಾಗಿ ಸೋಲಿಸಿದ ಭಾರತ

  ಸುದ್ದಿಒನ್ ಚಾಂಪಿಯನ್ಸ್ ಟ್ರೋಫಿಯ ಎರಡನೇ ಪಂದ್ಯದಲ್ಲಿ ಭಾರತ ಪಾಕಿಸ್ತಾನವನ್ನು 6 ವಿಕೆಟ್‌ಗಳಿಂದ ಹೀನಾಯವಾಗಿ ಸೋಲಿಸಿತು. ಇದರೊಂದಿಗೆ, ತಂಡವು 2017…

14 minutes ago

ಕಬೀರಾನಂದಾಶ್ರಮಕ್ಕೆ ಯಾವುದೆ ಜಾತಿ, ಧರ್ಮ ಇಲ್ಲ, ಎಲ್ಲರೂ ಸಮಾನರು : ಡಾ.ಬಸವಕುಮಾರ ಸ್ವಾಮೀಜಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಫೆ. 23…

38 minutes ago

ಸಚಿನ್ ದಾಖಲೆ ಮುರಿದ ಕಿಂಗ್ ಕೊಹ್ಲಿ : ವಿಶೇಷತೆ ಏನು ಗೊತ್ತಾ?

  ಸುದ್ದಿಒನ್ ವಿರಾಟ್ ಕೊಹ್ಲಿ 14,000 ಏಕದಿನ ರನ್ ಗಳಿಸಿದ ವೇಗದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಸಚಿನ್…

1 hour ago

ವಿಜಯೇಂದ್ರ ನೇತೃತ್ವದಲ್ಲಿಯೇ ತಾಲೂಕು, ಜಿಲ್ಲಾ ಪಂಚಾಯತಿಗೆ ಸ್ಪರ್ಧೆ : ರೇಣುಕಾಚಾರ್ಯ

    ದಾವಣಗೆರೆ; ರಾಜ್ಯದಲ್ಲಿ ಇನ್ನೇನು ತಾಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದೆ. ಈ ಸಂಬಂಧ ರೇಣುಕಾಚಾರ್ಯ ಅವರು…

2 hours ago

ತುಮಕೂರಿನ ಈ ಪ್ರದೇಶಗಳಲ್ಲಿ ಫೆಬ್ರವರಿ 24 , 27 ಹಾಗೂ 28ರಂದು ವಿದ್ಯುತ್ ವ್ಯತ್ಯಯ…!

  ತುಮಕೂರು: ಬೆಸ್ಕಾಂ ತುಮಕೂರು ನಗರ ಉಪ ವಿಭಾಗ 1ರ ವ್ಯಾಪ್ತಿಯಲ್ಲಿ ಅಟಲ್ ಭೂ ಜಲ ಯೋಜನೆಯಡಿಯಲ್ಲಿ ಪ್ರತ್ಯೇಕ ಕೃಷಿ…

2 hours ago

ಭಾರತ vs ಪಾಕಿಸ್ತಾನ : 25 ವರ್ಷಗಳ ಹಳೆಯ ದಾಖಲೆ ಮುರಿದ ಕಿಂಗ್ ಕೊಹ್ಲಿ

    ಸುದ್ದಿಒನ್ ಪ್ರತಿಯೊಬ್ಬ ಭಾರತೀಯ ಅಭಿಮಾನಿಯೂ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಬ್ಯಾಟ್‌ನಿಂದ ರನ್‌ಗಳನ್ನು ನಿರೀಕ್ಷಿಸುತ್ತಾರೆ.…

2 hours ago