ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729
ಸುದ್ದಿಒನ್, ಚಳ್ಳಕೆರೆ, ಜುಲೈ 27: ಮಳೆಗಾಗಿ ಪ್ರಾರ್ಥಿಸಿ ತಾಲ್ಲೂಕಿನ ಕಾಲುವೆಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿ ಗೌಡರಹಟ್ಟಿ ಗ್ರಾಮಸ್ಥರು ಶನಿವಾರ ಕತ್ತೆಗಳಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಗ್ರಾಮದ ಪ್ರಮುಖ ಬೀದಿಯಲ್ಲಿ ತಮಟೆ ವಾದ್ಯದೊಂದಿಗೆ ಮೆರವಣಿಗೆ ನಡೆಸಿದರು.
ಈ ಸಂದರ್ಭದಲ್ಲಿ ಗೌಡರ ಹಟ್ಟಿ ಗ್ರಾಮದ ಮುಖಂಡ ಎಸ್.ರಂಗಪ್ಪ, ಮುಂಗಾರು ಹಂಗಾಮಿನಲ್ಲಿ ಮೊದಲ ಹಂತದಲ್ಲಿ ಬಿತ್ತಿರುವ ಶೇಂಗಾ, ತೊಗರಿ, ಸಜ್ಜೆ, ಔಡಲ, ಸಿರಿಧಾನ್ಯ ಮುಂತಾದ ಬೆಳೆ ಮಳೆ ಇಲ್ಲದ ಕಾರಣ ಬಾಡುತ್ತಿವೆ.
ಎರಡನೆ ಹಂತದ ಬಿತ್ತನೆಗೆ ಶೇಂಗಾ ಬೀಜ-ಗೊಬ್ಬರ ಸಿದ್ಧತೆ ಮಾಡಿಕೊಂಡು ಮುಗಿಲ ಕಡೆ ಮಳೆ ಎದುರು ನೋಡುವಂತಾಗಿದೆ. ಇನ್ನು3-4 ದಿನದಲ್ಲಿ ಮಳೆ ಬರದೆ ಹೋದರೆ ಜೀವನ ನಡೆಸಲು ತುಂಬಾ ಕಷ್ಟವಾಗುವುದಲ್ಲದೆ ನಗರಪ್ರದೇಶಕ್ಕೆ ಗುಳೆ ಹೋಗುವ ಪರಿಸ್ಥಿತಿ ಒದಗಿಬರುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.
ಗ್ರಾಮದ ರೈತ ಕೆ.ಪಿ.ಹನುಮಂತರಾಯ, ಮಾತನಾಡಿ ರಾಜ್ಯದ ವಿವಿಧೆಡೆ ನದಿ, ಕಣಿವೆ, ಕೆರೆ-ಕಟ್ಟೆ ತುಂಬಿ ಜನರು ನೆರೆ ಹಾವಳಿ ಎದುರಿಸುತ್ತಿದ್ದರೂ ಚಿತ್ರದುರ್ಗ ಜಿಲ್ಲೆಗೆ ಏನಾಗಿದೆ ಸ್ವಾಮಿ ಮಳೆಯೇ ಇಲ್ಲ. ಬಯಲುಸೀಮೆ ಸಮಗ್ರ ನೀರಾವರಿ ಪ್ರದೇಶವನ್ನಾಗಿಸುವ ಮಹತ್ವಕಾಂಕ್ಷಿ ಯೋಜನೆ ಭದ್ರಾ ಮೇಲ್ದಂಡೆ ಯೋಜನೆ ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆಯಿಂದ ನೆನೆಗುದಿಗೆ ಬಿದ್ದಾಗಿದೆ ಎಂದು ಕೇಂದ್ರ ಸರ್ಕಾದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
ಗ್ರಾಮದ ಮುಖಂಡರಾದ ಕೃಷ್ಣಪ್ಪ ಗೋಪಾಲಪ್ಪ ಜಯಣ್ಣ, ಮಂಜುನಾಥ, ಮಲಕಿಸಾಬ್, ಗಾದ್ರಿಪಾಲಯ್ಯ ಯರಓಬಳಯ್ಯ, ಎಸ್.ತಿಪ್ಪೇಶ್ ಮಹಾಂತೇಶ್, ಗಂಗಾಧರ, ರಾಘವೇಂದ್ರ ಗ್ರಾಮಸ್ಥರು ಇದ್ದರು.
ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






