Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಳ್ಳಕೆರೆ | ಕೆಡಿ ಕೋಟೆಯಲ್ಲಿ ದಲಿತರ ಮೇಲೆ ಹಲ್ಲೆ ಖಂಡಿಸಿ ಎಸ್.ಪಿ. ಕಚೇರಿ ಎದುರು ಪ್ರತಿಭಟನೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 08 : ಚಳ್ಳಕೆರೆ ತಾಲ್ಲೂಕು ಕೆಡಿ. ಕೋಟೆಯಲ್ಲಿ ಹಲ್ಲೆಗೊಳಗಾಗಿರುವ ದಲಿತರು ತಮಗೆ ನ್ಯಾಯ ಕೊಡಿಸುವಂತೆ ಜಿಲ್ಲಾ ರಕ್ಷಣಾಧಿಕಾರಿ ಕಚೇರಿ ಎದುರು ಬುಧವಾರ ರಾತ್ರಿ ದಿಢೀರ್ ಧರಣಿ ನಡೆಸಿದರು.

 

ಹಿಂದಿನಿಂದಲೂ ನಿಮ್ಮಗಳ ಚಾಕ್ರಿ ಮಾಡಿಕೊಂಡು ಬರುತ್ತಿರುವ ನಮಗೆ ಗ್ರಾಮದಲ್ಲಿರುವ ಸಮುದಾಯ ಭವನದಲ್ಲಿ ಶುಭ ಕಾರ್ಯಗಳನ್ನು ನಡೆಸಲು ಅವಕಾಶ ಮಾಡಿಕೊಡಿ ಎಂದು ಕೇಳಿದ್ದಕ್ಕೆ ರೆಡ್ಡಿ, ನಾಯಕ ಹಾಗೂ ಗೊಲ್ಲ ಜನಾಂಗದವರು ನಮ್ಮಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿಂತೆ ಪರಶುರಾಂ ಠಾಣೆ ಪಿಎಸ್‍ಐ. ನಮ್ಮ ಹೇಳಿಕೆಗಳನ್ನು ತಿರುಚಿ ಬೇರೆ ರೀತಿಯಲ್ಲಿ ಎಫ್.ಐ.ಆರ್. ಮಾಡಿರುವುದರಿಂದ ಕೂಡಲೆ ಅವರನ್ನು ಸೇವೆಯಿಂದ ಅಮಾನತ್ತುಗೊಳಿಸುವಂತೆ ಧರಣಿ ನಿರತರು ಜಿಲ್ಲಾ ರಕ್ಷಣಾಧಿಕಾರಿಯನ್ನು ಒತ್ತಾಯಿಸಿದರು.

ಕೆಡಿ.ಕೋಟೆಯಲ್ಲಿರುವ ದೇವಸ್ಥಾನದಲ್ಲಿ ಬರುವ ಆದಾಯದಲ್ಲಿ ಚೀಟಿ ಎತ್ತಿಕೊಳ್ಳಲು ಬೇರೆಯವರಿಗೆ ಕೊಟ್ಟಂತೆ ನಮಗೂ ಅವಕಾಶ ಕೊಡಿ ಎಂದು ಕೇಳಿದ್ದನ್ನೆ ದೊಡ್ಡ ಪ್ರಮಾದವನ್ನಾಗಿ ಮಾಡಿರುವ ಅನ್ಯ ಜಾತಿಯವರು ನಮ್ಮಗಳ ಸೇವೆ ಮಾಡಿಕೊಂಡು ಹೇಳಿದಂತೆ ಕೇಳಿಕೊಂಡು ಸುಮ್ಮನಿರಬೇಕೆಂದು ಮೊದಲಿನಿಂದಲೂ ದೌರ್ಜನ್ಯ ನಡೆಸುತ್ತಿದ್ದಾರೆ. ಈ ಗ್ರಾಮದಲ್ಲಿ ನಮಗೆ ಯಾವುದೇ ರೀತಿಯ ಸ್ವಾತಂತ್ರ್ಯವಿಲ್ಲ. ರಕ್ಷಣೆ ನೀಡುವಂತೆ ಹಲ್ಲೆಗೊಳಗಾದವರು ಮನವಿ ಮಾಡಿದರು.

ಮಾದಿಗ ಮಹಾಸಭಾ ರಾಜ್ಯಾಧ್ಯಕ್ಷ ಹನುಮಂತಪ್ಪ ದುರ್ಗಾ, ಮಾದಿಗ ಮುಖಂಡ ಬಿ.ರಾಜಪ್ಪ ಜೆಜೆ.ಹಟ್ಟಿ, ತಿಮ್ಮಪ್ಪಯ್ಯನಹಳ್ಳಿಯ ಮಂಜು, ನ್ಯಾಯವಾದಿ ಸುರೇಶ್
ಹೋರಾಟಗಾರ ವೆಂಕಟೇಶ್ ಇವರುಗಳು ಧರಣಿಯಲ್ಲಿ ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now