Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಳ್ಳಕೆರೆ ದರೋಡೆ ಪ್ರಕರಣ : ಇಬ್ಬರ ಬಂಧನ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

ಸುದ್ದಿಒನ್, ಚಳ್ಳಕೆರೆ,ಅಕ್ಟೋಬರ್. 09 : ತಾಲೂಕಿನ ಹಿರೇಹಳ್ಳಿ ಗ್ರಾಮದ ಸಮೀಪ ಹೊರವಲಯದಲ್ಲಿದ್ದ ಒಂಟಿ ಮನೆಯ ಬಾಗಿಲು ಮುರಿದು ಒಳಗೆ ನುಗ್ಗಿದ ಕಳ್ಳರು ಮನೆಯ ಯಜಮಾನಿಗೆ ಚಾಕು ತೋರಿಸಿ ಎದುರಿಸಿ ಹಗ್ಗದ ಸಹಾಯದಿಂದ ಕೈಗಳನ್ನು ಕಟ್ಟಿ ಮನೆಯಲ್ಲಿದ್ದ ರೂ. 6,52,500 ನಗದು ಮತ್ತು ಹೆಣ್ಣು ಮಗಳ ಮೈ ಮೇಲಿನ ಆಭರಣಗಳನ್ನ ದೋಚಿಕೊಂಡು ಪರಾರಿಯಾಗಿದ್ದರು.

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಚಿತ್ರದುರ್ಗ ಜಿಲ್ಲಾ ಎಸ್ ಪಿ ರಂಜಿತ್ ಕುಮಾರ್ ಬಂಡಾರು ಹಾಗೂ ಹೆಚ್ಚುವರಿ ಪೊಲೀಸ ಅಧ್ಯಕ್ಷರಾದ ಕುಮಾರಸ್ವಾಮಿ ಚಳ್ಳಕೆರೆ ಡಿ ವೈ ಎಸ್ ಪಿ ಟಿ ಬಿ ರಾಜಣ್ಣ ಇವರ ನೇತೃತ್ವದಲ್ಲಿ ತಳಕು ಪೊಲೀಸ್ ಠಾಣೆಯ ಪಿಎಸ್ಐ ಲೋಕೇಶ್ ಹಾಗೂ ಶಿವಕುಮಾರ್ ಪೋಲಿ ಸ್.ಸಿಬ್ಬಂದಿಗಳು ಸಿಬ್ಬಂದಿಗಳು ಒಂಟಿ ಮನೆ ದರೋಡೆ ಮಾಡಿ ತಲೆ ತಪ್ಪಿಸಿಕೊಂಡಿದ್ದ ದರೋಡೆಕೋರರಾದ ಆಂಧ್ರ ಪ್ರದೇಶ ಅನಂತಪುರ ಜಿಲ್ಲೆಯ ರುದ್ರಂಪೇಟೆ ಎನ್ ಜಿ ಓ ಕಾಲೋನಿಯ ನೀಲಂ ಶ್ರೀರಾಮ್ ವಿಜಯ್, ವಿಜಯವಾಡದ ರಂಗುಲ ಪ್ರಸಾದ್. ಇಬ್ಬರನ್ನ ಪೊಲೀಸರು ಪತ್ತೆ ಮಾಡಿ ವಶಕ್ಕೆ ಪಡೆದಿದ್ದು ದರೋಡೆಯಲ್ಲಿ ಮುಖಂಡತ್ವ ವಹಿಸಿದ ಪಾಲ ವೆಂಕಟೇಶ್ ರಾವ್ ತಲೆ ತಪ್ಪಿಸಿಕೊಂಡಿದ್ದಾನೆ.

ಇಬ್ಬರನ್ನ ವಶಕ ಪಡೆದ ಪೊಲೀಸರು ಅವರಿಂದ ರಾಬರಿ ಮಾಡುವಾಗ ಬಳಸಿದ್ದ ಸಿಸಿ ಕ್ಯಾಮೆರಾ, ಮುಖದ ಕ್ಯಾಪ್, ಚಾಕುಗಳು, ಟಾರ್ಚ್ಗಳು, ಕಟರ್ ‌ಮೊಲ ಹಿಡಿಯುವ ಬಲೆ ,ಪ್ಲಾಸ್ಟಿಕ್ ಹಾಗೂ ಮೊಬೈಲ್ ಇವುಗಳನ್ನ ವಶಕ ಪಡೆದಿದ್ದು ನ್ಯಾಯಾಲಯದ ಮುಂದೆ ಈ ಇಬ್ಬರನ್ನ ಹಾಜರಿ ಪಡಿಸಲಾಗಿದೆ.

ಮೂರು ತಿಂಗಳ ಹಿಂದೆ ನಡೆದ ಒಂಟಿ ಮನೆ ದರೋಡೆಯನ್ನ ಪತ್ತೆ ಹಚ್ಚಿ ಅವರನ್ನು ವಶಕ್ಕೆ ಪಡೆದ ತಂಡವನ್ನು ಜಿಲ್ಲಾ ಎಸ್ ಪಿ ಅಭಿನಂದಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿಜೆಪಿ ಸರ್ಕಾರ ಕೊಟ್ಟಿದ್ದ 2D ಬೇಡ, 2A ಬೇಕು : ಕಾಂಗ್ರೆಸ್ ಗೆ ಪಂಚಮಸಾಲಿ ಸ್ವಾಮೀಜಿ ಒತ್ತಾಯ

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿ ಹೋರಾಟಗಳು ನಡೆಯುತ್ತಿವೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಈ ಸಂಬಂಧ ಸಭೆ ಕೂಡ ನಡೆಸಲಿದ್ದಾರೆ. ಜಯಮೃತ್ಯುಂಜಯ ಸ್ವಾಮೀಜಿ, ಶಾಸಕ ಯತ್ನಾಳ್ ಕೂಡ ಭಾಗಿಯಾಗಲಿದ್ದಾರೆ. ಜಯ

ರಾಮನಗರದ ತೋಟದ ಮನೆಯಲ್ಲಿ ಚನ್ನಪಟ್ಟಣ ಅಭ್ಯರ್ಥಿ ಫೈನಲ್ : ಯೋಗೀಶ್ವರ್ ಸಮಾಧಾನಗೊಳಿಸಲು ನಿರ್ಧಾರ..!

    ರಾಮನಗರ: ಚನ್ನಪಟ್ಟಣ ಬೈಎಲೆಕ್ಷನ್ ವಿಚಾರ ರಾಜ್ಯದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡ್ತಾ ಇದೆ. ಕಾಂಗ್ರೆಸ್ ಪಕ್ಷಕ್ಕೆ ಇದು ಪ್ರತಿಷ್ಠೆಯ ಪ್ರಶ್ನೆಯಾಗಿದ್ರೆ, ಜೆಡಿಎಸ್ ಲೆಕ್ಕಚಾರದಲ್ಲಿ ಮಗನ ರಾಜಕೀಯ ಭವಿಷ್ಯಕ್ಕೂ ಬಹಳ ಮುಖ್ಯವಾಗಿದೆ. ಇಲ್ಲಿ ಮೈತ್ರಿ

ಚಿತ್ರದುರ್ಗ APMC : ಸೂರ್ಯಕಾಂತಿ, ಶೇಂಗಾ, ಕಡಲೆ ಸೇರಿದಂತೆ ಇತರ ಉತ್ಪನ್ನಗಳ ಇಂದಿನ ಮಾರುಕಟ್ಟೆ ಧಾರಣೆ…!

  ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 18 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ (ಸರಕು)    ಇಂದಿನ             

error: Content is protected !!