Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಳ್ಳಕೆರೆ | ಸಾಣಿಕೆರೆ ಗ್ರಾಮದಲ್ಲಿ ಸರಣಿ ಕಳ್ಳತನ

Facebook
Twitter
Telegram
WhatsApp

ಸುದ್ದಿಒನ್, ಚಳ್ಳಕೆರೆ, ಆಗಸ್ಟ್. 22 : ತಾಲೂಕಿನ ಸಾಣಿಕೆರೆ ಗ್ರಾಮದಲ್ಲಿ ಒಂದೇ ದಿನ ರಾತ್ರಿ ಮೂರು ಮನೆಗಳಲ್ಲಿ ಕಳ್ಳತನವಾಗಿದ್ದು ಇದರಿಂದ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಗ್ರಾಮದ ಪುಟ್ಟಮ್ಮ, ತಿಪ್ಪಮ್ಮ ಮತ್ತು ಶಿವಕುಮಾರ್ ಎಂಬುವವರ ಮನೆಯಲ್ಲಿ ಬುಧವಾರ ರಾತ್ರಿ ಕಳ್ಳತನಾವಾಗಿದೆ.

ಗ್ರಾಮದ ಪುಟ್ಟಮ್ಮ ಇವರ ಮನೆಯಲ್ಲಿದ್ದ 3 ತೊಲ ಬಂಗಾರ, 1 ಲಕ್ಷ ರೂಪಾಯಿ ನಗದು ಹಾಗೂ ತಿಪ್ಪಮ್ಮ ಇವರ ಮನೆಯಲ್ಲಿದ್ದ 3 ತೊಲ ಬಂಗಾರ, 5000 ನಗದು ಮತ್ತು ಶಿವಕುಮಾರ್ ಅವರ ಮನೆಯಲ್ಲಿ 25,000 ನಗದು ಹಣ, 4 ರೇಷ್ಮೆ ಸೀರೆಗಳನ್ನು ಕಳ್ಳತನ ಮಾಡಲಾಗಿದೆ.

ಪುಟ್ಟಮ್ಮ ಚಿತ್ರದುರ್ಗ ಆಸ್ಪತ್ರೆಗೆ ಹೋಗಿದ್ದರು.
ತಿಪ್ಪಮ್ಮ ಎನ್ನುವವರು ಮಗಳ ಮನೆಗೆ ಹೋಗಿದ್ದರು.
ಶಿಕ್ಷಕ ಶಿವಕುಮಾರ್ ಕರ್ತವ್ಯ ನಿಮಿತ್ತ ಹೋಗಿದ್ದಾಗ ಈ ಘಟನೆ ನಡೆದಿದೆ.

ಈ ಮೂರು ಮನೆಗಳು ಒಂದೇ ಕುಟುಂಬಕ್ಕೆ ಸೇರಿದ್ದಾವಾಗಿವೆ. ಬುಧವಾರ ರಾತ್ರಿ ಕಳ್ಳತನವಾಗಿದ್ದು ಇಂದು (ಗುರುವಾರ) ಬೆಳಕಿಗೆ ಬಂದಿದೆ.
ಘಟನ ಸ್ಥಳಕ್ಕೆ ಎಎಸ್ ಐ ತಿಪ್ಪೇಸ್ವಾಮಿ, ಪೋಲಿಸ್ ಪೇದೆಗಳಾದ ಕುಮಾರ್ ಹಾಗೂ ತಳವಾರ ಮತ್ತು ಡಾಗ್ ಸ್ಕ್ವಾಡ್ ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಕುರಿತಂತೆ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!