Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಳ್ಳಕೆರೆ | ಬೆಳಗೆರೆ ಗ್ರಾಮದ ಆಂಜನೇಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ, ರಾಮ ಜಪ

---Advertisement---

ಸುದ್ದಿಒನ್, ಚಳ್ಳಕೆರೆ, ಜನವರಿ.22 : ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನಾ ಸಮಾರಂಭ ಹಾಗೂ ಶ್ರೀ ರಾಮನ ಪ್ರಾಣ ಪ್ರತಿಷ್ಠಾಪನ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು.

ತಾಲ್ಲೂಕಿನ ಬೆಳಗೆರೆ ಗ್ರಾಮದ ಆಂಜನೇಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ, ರಾಮ ಜಪ, ರಾಮಮಂತ್ರ ಹಾಗೂ ಭಜನೆ ನಂತರ ಅನ್ನ ಸಂತರ್ಪಣೆ ಮತ್ತು ಆರತಿ ಕಾರ್ಯಕ್ರಮ ನಡೆಯಿತು ಎಂದು ಮುಖಂಡ ಕೆ.ಟಿ.ನಿಜಲಿಂಗಪ್ಪ ಹೇಳಿದರು.

ನಂತರ ಮಾತನಾಡಿ, ಇಂದು ನಮ್ಮ ಗ್ರಾಮದಲ್ಲಿ ದೊಡ್ಡ ಹಬ್ಬವಾಗಿ ಈ ಕಾರ್ಯಕ್ರಮವನ್ನು ಆಚರಣೆ ಮಾಡಲಾಗಿದೆ. ಗ್ರಾಮದ ಜಾತಿ ಭೇದ ಇಲ್ಲದೆ ಎಲ್ಲರೂ ಸೇರಿ ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ,ರಾಮ ನಾಮ ಜಪ, ಹಾಗೂ ಭಜನೆ ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಭಕ್ತರಿಗೆ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

ಗ್ರಾಮದ ಮಹಿಳೆಯರಿಂದ ಆರತಿ ಬೆಳಗಲಾಯಿತು, ಗ್ರಾಮದಲ್ಲಿ ಇರುವಂತಹ ಎಲ್ಲಾ ದೇವಾಲಗಳನ್ನು ಸ್ವಚ್ಛತೆ ಮಾಡಿ ಎಲ್ಲಾ ದೇವಾಲಯಗಳು ಇಂದು ವಿಶೇಷ ಪೂಜೆ ಸಲ್ಲಿಸಿ ರಾಮ ನಾಮಸ್ಮಣೆ ಮಾಡಲಾಗಿದೆ. ಇದೇ ರೀತಿಯಾಗಿ ಪ್ರತಿ ವರ್ಷವೂ ಸಹ ಈ ದಿನ ವಿಶೇಷ ಪೂಜೆ ಮಾಡಿ ಆರತಿ ಬೆಳಗುವ  ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಸಂತಸ ವ್ಯಕ್ತ ಪಡಿಸಿದರು.

ಪ್ರಧಾನ ಅರ್ಚಕರಾದ ಮುರುಳಿದರ ಶಾಸ್ತ್ರಿ ಮಾತನಾಡಿ, ಶತಮಾನಗಳ ಬೇಡಿಕೆ ಅಯೋಧ್ಯೆಯ ಶ್ರೀರಾಮಚಂದ್ರ ದೇಗುಲ ಕೊನೆಗೂ ಉದ್ಘಾಟನೆಗೊಂಡಿದ್ದು ರಾಮಲಿಲ್ಲನ ಪ್ರಾಣ ಪ್ರತಿಷ್ಠಾಪನೆ ಕಾರ್ಯ ಇಂದು ಅದ್ದೂರಿಯಾಗಿ ಜರುಗಿದೆ. ಈ ವೈಭವ ಕಣ್ತುಂಬಿಕೊಳ್ಳಲು ಸಂತರು ಸಾಧು ಶರಣರು ಚಲನಚಿತ್ರ ನಟರು  ಸೇರಿದಂತೆ ಗಣ್ಯಾತಿ ಗಣ್ಯರು ಅಯೋಧ್ಯೆ ತೆರಳಿದರು. ಅದರಂತೆ ಇಂದು ನಮ್ಮ ಗ್ರಾಮದಲ್ಲಿ ಪ್ರತಿಯೊಬ್ಬರಲ್ಲೂ ಸಂಭ್ರಮ ಮನೆ ಮಾಡಿತ್ತು. ಎಲ್ಲಾ ಸಮುದಾಯದವರು ಸೇರಿ ಸಂಭ್ರಮ ಆಚರಣೆ ಮಾಡಿದ್ದಾರೆ ಎಂದರು.

ರಘು ಹಾಗೂ ರಂಗಸ್ವಾಮಿ ತಂಡ ಸೇವಾ ಕಾರ್ಯವನ್ನು ನೇತೃತ್ವ ವಹಿಸಿದ್ದರು.

ಈ ಸಂಭ್ರಮದಲ್ಲಿ ನಿವೃತ್ತ ಮುಖ್ಯ ಶಿಕ್ಷಕ ಕೆ.ರಾಜಣ್ಣ,ಗ್ರಾಮಪಂಚಾಯಿತಿ ಸದಸ್ಯರಾದ ನಿಂಗಣ್ಣ,ಮುಖಂಡರಾದ ಗೊಂಚಕಾರ್,  ಶಿವಣ್ಣರಾಜಣ್ಣ,ಪಾರುರಂಗಯ್ಯ, ಪಟೇಲ್ ಗೋಪಿನಾಥ, ಶಿವಕುಮಾರ್ ಕೃಷ್ಣಪ್ಪ, ದೊಡ್ಡಲಿಂಗೆಗೌಡ, ಸಿ.ಗಿರಿಯಪ್ಪ,ಸ್ವಾಮಿ,ರಘು,ರಂಗಸ್ವಾಮಿ, ಮಾರುತಿ,ರಾಮ,ರವಿ,ಬಿಟಿ.ಕೃಷ್ಣ,ಮಂಜುನಾಥ ಶ್ರೀಕಠಪ್ಪ ಹಾಗೂ ಗ್ರಾಮದ ಹಿರಿಯ ಮುಖಂಡರು,ಯುವಕರು ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...