Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಳ್ಳಕೆರೆ | ಕುರಿಮರಿಗಳ ಮೇಲೆ ಬೀದಿನಾಯಿಗಳ ದಾಳಿ : 8 ಕುರಿಗಳು ಮೃತ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

ಸುದ್ದಿಒನ್, ಚಳ್ಳಕೆರೆ ಆ.22 : ಕುರಿ ಹಟ್ಟಿಯಲ್ಲಿದ್ದ ಕುರಿ ಮರಿಗಳ ಮೇಲೆ ಬೀದಿ ನಾಯಿಗಳು ದಾಳಿ ಮಾಡಿ 8 ಕುರಿ ಮರಿಗಳು ಸಾವನ್ನಪ್ಪಿದ ಘಟನೆ ತಾಲೂಕಿನ ಗೋಪನಹಳ್ಳಿ ಗ್ರಾಮದಲ್ಲಿ ಜರುಗಿದೆ.

ಗ್ರಾಮದ ಜಿ.ಪಿ. ರಂಗಪ್ಪ ಬಡಾವಣೆಯಲ್ಲಿ ವಾಸಿಸುತ್ತಿದ್ದ ಮಾರಣ್ಣ ಎನ್ನುವವರಿಗೆ ಸೇರಿದ ಕುರಿಗಳ ಮೇಲೆ ಬೀದಿ ನಾಯಿಗಳು ದಾಳಿ ಮಾಡಿವೆ.

ಇಂದು (ಗುರುವಾರ) ಬೆಳಗ್ಗೆ 11 ಗಂಟೆ ಸುಮಾರಿನಲ್ಲಿ ನಾಯಿಗಳು ಕುರಿಗಳ ಮೇಲೆ ದಾಳಿ ಮಾಡಿವೆ. ಈ ಘಟನೆಯಿಂದಾಗಿ ಕುರಿಸಾಕಾಣಿಕೆದಾರ ಮಾರಣ್ಣ ಕಂಗಾಲಾಗಿದ್ದಾನೆ. ಮೇಯಿಸಲು ಹೋದಾಗ ನರಿ, ತೋಳ ಹಾಗೂ ಚಿರತೆ ದಾಳಿ ಮಾಡುತ್ತಿದ್ದವು. ಆದರೆ ಈಗ ಅವುಗಳ‌ ಕಾಟ ತಪ್ಪಿದ್ದು ಹಗಲಿನಲ್ಲಿಯೇ ಊರಿನ‌ ಮಧ್ಯೆಯೇ ಕುರಿಗಳ ಮೇಲೆ ಬೀದಿ ನಾಯಿಗಳ ದಾಳಿ ಮಾಡಿ ಈ ರೀತಿ ಕುರಿಗಳನ್ನು ಬಲಿ ಪಡೆದರೆ ಹೇಗೆ ಎಂದು ಮಾರಣ್ಣ ನೋವು ವ್ಯಕ್ತಪಡಿಸಿದ್ದಾನೆ.

ಸಂಬಂಧಪಟ್ಟ ಅಧಿಕಾರಿಕಾರಿಗಳು ಮಾತ್ರ ಬೀದಿನಾಯಿಗಳ ಕಡಿವಾಣ ಹಾಕಲು‌ ಮುಂದಾಗುತ್ತಿಲ್ಲ. ಈಗಲಾದರು ಸಂಬಂಧಪಟ್ಟ ಅಧಿಕಾರಿಗಳು ಬೀದಿ ನಾಯಿಗಳಿಗೆ ಕಡಿವಾಣ ಹಾಕಬೇಕಿದೆ. ನಾಯಿದಾಳಿಗೆ ಸಿಲುಕಿ ಮೃತಪಟ್ಟ ಕುರಿಗಳಿಗೆ ಪರಿಹಾರ ಕೊಡಿಸುವ ಮೂಲಕ ಕುರಿಸಾಕಾಣಿಕೆದಾರರ ನೆರವಿಗೆ ಬರಬೇಕಿದೆ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!