Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಚಳ್ಳಕೆರೆ | ಗ್ರಾಮ ಪಂಚಾಯಿತಿ ಪಿಡಿಒ ಅಮಾನತು

---Advertisement---

ಚಿತ್ರದುರ್ಗ. ಅ.22: ಅನಧಿಕೃತ ಗೈರು ಹಾಜರಿ ಹಾಗೂ ಕರ್ತವ್ಯ ನಿರ್ಲಕ್ಷ್ಯತೆ ಸಂಬಂಧ ಚಳ್ಳಕೆರೆ ತಾಲ್ಲೂಕು ನೇರಲಗುಂಟೆ ಗ್ರಾಮ ಪಂಚಾಯಿತಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಸ್.ಹನುಮಂತ ಕುಮಾರ್ ಅವರನ್ನು ಸೇವೆಯಿಂದ ಅಮಾನತ್ತುಗೊಳಿಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಆದೇಶಿಸಿದ್ದಾರೆ.

ನೇರಲಗುಂಟೆ ಪಿಡಿಒ ಎಸ್.ಹನುಮಂತಕುಮಾರ್ ಅವರು ಗ್ರಾಮ ಪಂಚಾಯಿತಿ ಕಚೇರಿ ಕರ್ತವ್ಯಕ್ಕೆ 2024ರ ಸೆಪ್ಟೆಂಬರ್ 30 ರಿಂದ ಅನಧಿಕೃತವಾಗಿ ಗೈರು ಹಾಜರಾಗಿರುತ್ತಾರೆ. ಸಾರ್ವಜನಿಕರ ಕುಂದುಕೊರತೆಗಳಿಗೆ  ಸಾರ್ವಜನಿಕರು ಮತ್ತು ಜನಪ್ರತಿನಿಧಿಗಳು ದೂರವಾಣಿ ಕರೆ ಮಾಡಿದರೂ ಸಹ ಸ್ವೀಕರಿಸದೇ ಇರುವುದರಿಂದ ಸರ್ಕಾರಿ ಯೋಜನೆಗಳ ಅನುಷ್ಠಾನದಲ್ಲಿ ಅಡಚಣೆ ಉಂಟಾಗಿದ್ದು, ಇವರನ್ನು ಬದಲಾವಣೆ ಮಾಡಿ ಅದೇ ಗ್ರಾಮ ಪಂಚಾಯಿತಿಯ ಗ್ರೇಡ್-1 ಕಾರ್ಯದರ್ಶಿ ಕೆ.ಎಸ್.ಜಯಣ್ಣ ಅವರಿಗೆ ಪ್ರಭಾರ ವ್ಯವಸ್ಥೆ ಮಾಡಿಕೊಡಲು ಪಂಚಾಯಿತಿ ಅಧ್ಯಕ್ಷರು ಮತ್ತು ಸದಸ್ಯರು ಕೋರಿದ್ದು, ಅದರಂತೆ, ನೇರಲಗುಂಟೆ ಗ್ರಾ. ಪಂ ಹಾಜರಾತಿ ಪರಿಶೀಲಿಸಲಾಗಿ ಈ ನೌಕರರು 2024ರಿಂದ  ಇಲ್ಲಿಯವರೆಗೂ ಪೂರ್ವಾನುಮತಿ ಪಡೆಯದೇ ಕಚೇರಿ ಕರ್ತವ್ಯಕ್ಕೆ ಅನಧಿಕೃತವಾಗಿ ಗೈರು ಹಾಜರಾಗಿರುವುದು ಕಂಡುಬಂದಿರುತ್ತದೆ. ಈ ಹಿಂದೆಯೂ ಸಹ ಅನಧಿಕೃತವಾಗಿ ಗೈರು ಹಾಜರಾಗಿದ್ದು, ಅದೇ ಪ್ರವೃತ್ತಿಯನ್ನು ಮುಂದುವರೆಸಿಕೊಂಡು ಬಂದಿರುತ್ತಾರೆ. ಪಿಡಿಒ ಎಸ್.ಹನುಮಂತಕುಮಾರ್ ಅವರು ವಿರುದ್ಧ ಶಿಸ್ತುಕ್ರಮಕೈಗೊಳ್ಳಲು, ಆಡಳಿತಾತ್ಮಕ ಹಿತದೃಷ್ಠಿಯಿಂದ ಗ್ರೇಡ್-1 ಕಾಯದರ್ಶಿ ಕೆ.ಎಸ್.ಜಯಣ್ಣ ಅವರಿಗೆ ನೇರಲಗುಂಟೆ ಗ್ರಾಮ ಪಂಚಾಯಿತಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆಯ ಪ್ರಭಾರ ವ್ಯವಸ್ಥೆ ಮಾಡುವಂತೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ವರದಿ ನೀಡಿರುತ್ತಾರೆ.

ಈ ಹಿನ್ನಲೆಯಲ್ಲಿ ಎಲ್ಲಾ ಅಂಶಗಳನ್ನು ಪರಿಶೀಲಿಸಿ ನೇರಲಗುಂಟೆ ಗ್ರಾಮ ಪಂಚಾಯಿತಿ ಪಿಡಿಒ ಎಸ್. ಹನುಮಂತಕುಮಾರ್ ಅವರು ಒಬ್ಬ ಜವಾಬ್ದಾರಿಯುತ ಸರ್ಕಾರಿ ನೌಕರರಾಗಿದ್ದುಕೊಂಡು, ಮೇಲಾಧಿಕಾರಿಗಳ ಅನುಮತಿ ಪಡೆಯದೇ ಕರ್ತವ್ಯಕ್ಕೆ ಗೈರು ಹಾಜರಾಗಿ ಕಚೇರಿಯ ದೈನಂದಿನ ಕೆಲಸ ಕಾರ್ಯಗಳಿಗೆ ಅಡಚಣೆ ಉಂಟು ಮಾಡುವ ಮೂಲಕ ಸರ್ಕಾರಿ ನೌಕರರ ವೃತ್ತಿಗೆ ತರವಲ್ಲದ ರೀತಿ ವರ್ತಿಸಿ, ಕರ್ನಾಟಕ ನಾಗರೀಕ ಸೇವಾ (ನಡವಳಿ) ನಿಯಾವಳಿಗಳು 3(i), (ii) ಮತ್ತು (iii) ಅನ್ನು ಉಲ್ಲಂಘಿಸಿರುವುದು ಕಂಡು ಬಂದಿರುವ ಕಾರಣ ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ, ತಕ್ಷಣದಿಂದಲೇ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಲಾಗಿದೆ. ಅಮಾನತ್ತು ಅವಧಿಯಲ್ಲಿ ಪ್ರಾಧಿಕಾರದ ಅನುಮತಿ ಪಡೆಯದೇ ಕೇಂದ್ರಸ್ಥಾನ ಬಿಡುವಂತಿಲ್ಲ ಮತ್ತು ಅನ್ಯ ಉದ್ಯೋಗದಲ್ಲಿ ತೊಡಗುವಂತಿಲ್ಲ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಶಿಸ್ತು ಪ್ರಾಧಿಕಾರಿ ಎಸ್.ಜೆ.ಸೋಮಶೇಖರ್ ಆದೇಶಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment