ಸುದ್ದಿಒನ್, ಚಳ್ಳಕೆರೆ, ಡಿಸೆಂಬರ್. 24 : ಕರ್ನಾಟಕ ಮಾಧ್ಯಮ ಮಹಾ ಒಕ್ಕೂಟ ಆಶ್ರಯದಲ್ಲಿ ನಗರದ ಸರ್ಕಾರಿ ನೌಕರರ ಭವನದಲ್ಲಿ ಡಿ.29ರಂದು ಬೆಳಿಗ್ಗೆ 11 : 30 ಕ್ಕೆ ಭದ್ರಾ ಮೇಲ್ದಂಡೆ ಯೋಜನೆ ವಿಳಂಬ ವಿಷಯ ಕುರಿತು ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧ್ಯಕ್ಷ ಕರುನಾಡು ಜಿಯಾವುಲ್ಲಾ ತಿಳಿಸಿದ್ದಾರೆ.
ಶಾಸಕ ಟಿ.ರಘುಮೂರ್ತಿ ಉದ್ಘಾಟಿಸಲಿದ್ದು, ಹಿರಿಯ ಪತ್ರಕರ್ತ ಚಳ್ಳಕೆರೆ ಬಸವರಾಜ್ ಅವರು ಉಪನ್ಯಾಸ ನೀಡಲಿದ್ದಾರೆ. ಸಂಘದ ರಾಜ್ಯಾಧ್ಯಕ್ಷ ಕೆ.ಶಿವಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ದ್ರಾಕ್ಷರಸ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ.ಬಿ.ಯೋಗೀಶ್ಬಾಬು, ಸರ್ಕಾರಿ ನೌಕರ ಸಂಘದ ತಾಲೂಕಾಧ್ಯಕ್ಷ ಸಿ.ಟಿ.ವೀರೇಶ್, ರಾಜ್ಯ ಪ್ರಧಾನ ಕಾರ್ಯದರ್ಶಿ ಡಿ.ಈಶ್ವರಪ್ಪ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.









