Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಳ್ಳಕೆರೆಯ ರಂಗಭೂಮಿ ಕಲಾವಿದ ಪಿ. ತಿಪ್ಪೇಸ್ವಾಮಿಯವರಿಗೆ ಒಲಿದ ರಾಜ್ಯೋತ್ಸವ ಪ್ರಶಸ್ತಿ

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 31 : ರಂಗಭೂಮಿ ಕ್ಷೇತ್ರಕ್ಕೆ ನೀಡಿದ ಅಪಾರ ಕೊಡುಗೆಯನ್ನು ಗುರುತಿಸಿ ಜಿಲ್ಲೆಯ ಚಳ್ಳಕೆರೆಯ ರಂಗಭೂಮಿ ಕಲಾವಿದ ಪಿ. ತಿಪ್ಪೇಸ್ವಾಮಿ ಅವರನ್ನು 2023 ನೇ ಸಾಲಿನ ರಾಜ್ಯ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಚಿತ್ರದುರ್ಗ ಜಿಲ್ಲೆಯಿಂದ ಪಿ. ತಿಪ್ಪೇಸ್ವಾಮಿಯವರು ಮಾತ್ರ ರಾಜ್ಯ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ನವಂಬರ್ 1ರಂದು ಬೆಂಗಳೂರಿನಲ್ಲಿ ನಡೆಯುವ ಕನ್ನಡ ರಾಜ್ಯೋತ್ಸವ ಆಚರಣೆ ಅಂಗವಾಗಿ ರಾಜ್ಯ ಸರ್ಕಾರದಿಂದ ಆಯೋಜಿಸಿರುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪಿ. ತಿಪ್ಪೇಸ್ವಾಮಿ ಯವರನ್ನು ಅಭಿನಂದಿಸಿ ಪ್ರಶಸ್ತಿ ನೀಡಿ, ಗೌರವಿಸಲಿದ್ದಾರೆ.

ಪಿ.ತಿಪ್ಪೇಸ್ವಾಮಿಯವರ ಹಿನ್ನೆಲೆ ಈ ಕೆಳಕಂಡಂತಿದೆ : ದಿವಂಗತ ವೀರಣ್ಣ-ವೀರಮ್ಮನವರ ಏಕೈಕ ಪುತ್ರನಾಗಿ ಚಳ್ಳಕೆರೆಯಲ್ಲಿ 1946 ರಲ್ಲಿ ಜನನ.

ಬಾಲ್ಯದಿಂದಲೂ ನಾಟಕ-ಸಂಗೀತದತ್ತ ಒಲವು ಹೊಂದಿದ್ದ ಇವರು ಬಿ.ಎ. ಪದವಿಯ ನಂತರ ಬಿ.ಇಡಿ. ಶಿಕ್ಷಣವನ್ನು ಪೂರೈಸಿ ಚಳ್ಳಕೆರೆಯ ಕಾಟಪ್ಪನಹಟ್ಟಿಯಲ್ಲಿನ ಕಾಟಂಲಿಂಗೇಶ್ವರ ಪ್ರೌಢಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ 1973 ರಿಂದ 2004 ರವರೆಗೆ ಸೇವೆ ಸಲ್ಲಿಸಿ ನಿವೃತ್ತಿ ಪಡೆದರು.

ವೃತ್ತಿಯೊಂದಿಗೇ ಸಾಹಿತ್ಯ-ಸಂಗೀತಗಳ ಪ್ರವೃತ್ತಿಯೂ ಬೆಳೆಸಿಕೊಂಡು ನಾಟಕಗಳ ಗೀಳು, ಹಾರ್ಮೋನಿಯಂ ಕಲಿಯುವಂತೆ ಮಾಡಿತು. ಅದು ಕ್ಯಾಸಿಯೋ ಕೀಬೋರ್ಡ್‌ ಹಂತದವರೆಗೂ ಬೆಳೆಯುತ್ತಾ ಹೋಯಿತು. 1975 ರಲ್ಲಿ ಕಾಟಂಲಿಂಗೇಶ್ವರ ನಾಟಕ ಸಂಘದ ಸ್ಥಾಪನೆ ಮಾಡಿಕೊಂಡು ಜಿಲ್ಲೆಯಾದ್ಯಂತ ನೂರಾರು ನಾಟಕಗಳ ಪ್ರದರ್ಶನ, ನಿರ್ದೇಶನಕ್ಕೆ ಕಾರಣವಾಯಿತು.

ಮರಡಿಹಳ್ಳಿ ಸೀತಾರಾಮರೆಡ್ಡಿ ವಿರಚಿತ “ರಾಜಾವೀರ ಮದಕರಿನಾಯಕ” ನಾಟಕ ಇವರಿಗೆ ಖ್ಯಾತಿಯನ್ನು ತಂದುಕೊಟ್ಟಿದ್ದಲ್ಲದೇ, ನೂರಾರು ಪ್ರಯೋಗಗಳನ್ನು ಕಂಡಿತು. ಇದು ದೆಹಲಿಯಲ್ಲೂ ಪ್ರದರ್ಶನವಾಯಿತು.

ತಮ್ಮ ಮ್ಯಾಸಬೇಡ ಬುಡಕಟ್ಟು ಸಮುದಾಯದ ಸಾಂಸ್ಕೃತಿಕ ವೀರರಾದ ಗಾದಿರಿ ಪಾಲನಾಯಕ ಮತ್ತು ಜಗಲೂರು ಪಾಪನಾಯಕ ನಾಟಕ ರಚನೆಗೆ ಅಗತ್ಯವಾದ ಮೂಲದ್ರವ್ಯವನ್ನು ಒದಗಿಸಿ ಕಾಲುವೇಹಳ್ಳಿ ಗಾದಿರಪ್ಪ ಎಂಬುವವರಿಂದ ನಾಟಕಗಳನ್ನು ಬರೆಯಿಸುವಲ್ಲಿ, ಅವುಗಳನ್ನು ರಂಗಭೂಮಿಗೆ ತರುವಲ್ಲಿ, ಬುಡಕಟ್ಟು ಸಮುದಾಯಕ್ಕೆ ಅವರ ಚರಿತ್ರೆಯನ್ನು ತಿಳಿಸುವಲ್ಲಿ ಇವರದು ಪ್ರಮುಖ ಪಾತ್ರ ವಹಿಸುತ್ತದೆ. ಅಲ್ಲದೆ ಇವರು ತಮ್ಮ ಸಂಗೀತ ಮತ್ತು ನಿರ್ದೇಶನದ ಮೂಲಕ ಹವ್ಯಾಸಿ ಗ್ರಾಮೀಣ ರಂಗಭೂಮಿಯನ್ನು ರೂಪಿಸಿದ ಕೀರ್ತಿಗೆ ಭಾಜನರಾಗಿದ್ದಾರೆ. ರಕ್ತರಾತ್ರಿ, ಭಕ್ತಸುಧನ್ವ, ಕುರುಕ್ಷೇತ್ರ, ದೇವಿ ಮಹಾತ್ಮ, ದಾನಶೂರ ಕರ್ಣ, ವೀರಾಭಿಮನ್ಯು ಮುಂತಾದ ಪೌರಾಣಿಕ ನಾಟಕಗಳಲ್ಲದೇ, ಇಪ್ಪತ್ತೈದಕ್ಕೂ ಹೆಚ್ಚು ಸಾಮಾಜಿಕ ನಾಟಕಗಳನ್ನು ನಿರ್ದೇಶಿಸಿ, ಸಂಗೀತ ನೀಡಿದ್ದಾರೆ. ಹಗಲೆಲ್ಲಾ ಶಾಲೆಯಲ್ಲಿ ಶಿಕ್ಷಕ, ರಾತ್ರಿಯೆಲ್ಲಾ ಹಳ್ಳಿಯ ರಂಗಭೂಮಿಗಳಲ್ಲಿ ನಿರ್ದೇಶನ ಪಾತ್ರ, ಮೂರು ದಶಕಗಳಿಗೂ ಹೆಚ್ಚು ಕಾಲ ನಿರ್ವಹಿಸಿದವರು.

ಇವರ ಗ್ರಾಮೀಣ ರಂಗಭೂಮಿಯ ಸೇವೆಯನ್ನು ಗುರುತಿಸಿ ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ (2001) ನೀಡಿ ಗೌರವಿಸಿದೆ. ಹಾಗೂ ನಾಟಕ ಆಕಾಡೆಮಿಯ ಸದಸ್ಯತ್ವ (2014) ನೀಡಿ ರಂಗಕಲಾವಿದರ ಸೇವೆ ಮಾಡಲು, ಚಿತ್ರದುರ್ಗ ಜಿಲ್ಲೆಯಾದ್ಯಂತ ರಂಗಚಟುವಟಿಕೆಗಳು ಗರಿಗೆದರಲು ಅವಕಾಶ ಕಲ್ಪಿಸಿತ್ತು. ಎಪ್ಪತ್ತರ ಇಳಿವಯಸ್ಸಲ್ಲೂ ಬತ್ತದ ಅವರ ಉತ್ಸಾಹ ಜಾನಪದ ರಂಗಭೂಮಿಯ ಮುಮ್ಮೇಳಗಾರರ (ಭಾಗವತರ) ಸಂಘವನ್ನು ಕಟ್ಟಿ ಅವರಿಗೆ ನ್ಯಾಯಯುತವಾಗಿ ದಕ್ಕಬೇಕಾದ ಮಾಸಾಶನ ಹಾದಿ ಸವಲತ್ತುಗಳನ್ನು ಕೊಡಿಸಲು ಸಂಘಟಿತ ಹೋರಾಟ ನಡೆಸಿದ್ದಾರೆ.

ಚಳ್ಳಕೆರೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕದ ಅಧ್ಯಕ್ಷರಾಗಿ ಎರಡು ಅವಧಿಗೆ (2005-2007, 2008-2010) ಸೇವೆ. ಸಂಚಾಲಕರಗಿ ಜಿಲ್ಲಾ ಜಾನಪದ ಜಾತ್ರೆ (2005-2006), ಕಾಲೇಜು ರಂಗೋತ್ಸವ (2016-2017) ಗಳಲ್ಲಿ ಸೇವೆ.

ಒಲಿದ ಪ್ರಶಸ್ತಿಗಳು :
ಜಾನಪದ ರಂಗ ಚಟುವಟಿಕೆಗಳನ್ನು ಗುರುತಿಸಿ ಜಿಲ್ಲಾ ವಾಲ್ಮೀಕಿ ಪ್ರಶಸ್ತಿ (2015-16), ಯಾದಗಿರಿ ಜಿಲ್ಲೆಯಲ್ಲಿ ನಡೆದ ಜಾನಪದೋತ್ಸವದಲ್ಲಿ ‘ಜಾನಪದ ಕಲಾಲೋಕ ಪ್ರಶಸ್ತಿ’ (2017), ಸಿಜಿಕೆ ನಾಟಕೋತ್ಸವದಲ್ಲಿ ಸಿಜಿಕೆ ಪ್ರಶಸ್ತಿ’ (2018) ಗಳ ಗೌರವ ಸಂದಿವೆ. ಪ್ರಸ್ತುತ ಮಹತ್ವಾಕಾಂಕ್ಷಿಯ ಕ್ಷೇತ್ರಕಾರ್ಯಾಧಾರಿತ ಕೃತಿ ‘ಮ್ಯಾಸ ಬೇಡರ ಮೌಖಿಕ ಕಥನಗಳು’ (2019) ಪ್ರಕಟ. ಈ ಕೃತಿಗೆ 2020 ನೇ ಸಾಲಿನ ಕರ್ನಾಟಕ ಸಾಹಿತ್ಯ ಅಕಾಡೆಮಿಯವರು “ಸಂಶೋಧನೆ ಪ್ರಕಾರದಲ್ಲಿ ಅತ್ಯುತ್ತಮ ಕೃತಿಯೆಂದು ಪರಿಗಣಿಸಿ, ಪುಸ್ತಕ ಬಹುಮಾನ ಪ್ರಶಸ್ತಿ ನೀಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಂದು ಟೀಂ ಇಂಡಿಯಾದ ಉಪನಾಯಕನಾಗಿದ್ದ ಕೆ ಎಲ್ ರಾಹುಲ್ ಈ ಬಾರಿ ತಂಡದಿಂದಾನೇ ಔಟ್..!

ಟ20 ವೇಳೆ ಶ್ವಕಪ್ ಟೂರ್ನಿಗೆ ಆಟಗಾರರನ್ನು ಆಯ್ಕೆ ಮಾಡಲಾಗಿದ್ದಿ, ಕನ್ನಡಿಗ ಕೆ ಎಲ್ ರಾಹುಲ್ ಗೆ ಸ್ಥಾನವನ್ನೇ ನೀಡಿಲ್ಲ. ತಂಡಿದಿಂದ ಹೊರಗೆ ಉಳಿದಿದ್ದಾರೆ. ಈ ಬಾರಿಯ ಐಪಿಎಲ್ ಮ್ಯಾಚ್ ನೆಲ್ಲಾ ಯಾರೆಲ್ಲಾ ಉತ್ತಮ ಪ್ರದರ್ಶ‌

ವಿಚಾರಣೆಗೆ ಹಾಜರಾಗುವಂತೆ ಪ್ರಜ್ವಲ್ ಹಾಗೂ ರೇವಣ್ಣರಿಗೆ ನೋಟೀಸ್ ನೀಡಿದ ಎಸ್ಐಟಿ..!

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಸ್ಐಟಿ ತನಿಖೆ ನಡೆಸುತ್ತಿದೆ. ವಿಡಿಯೋದಲ್ಲಿ ಗುರುತು ಸಿಕ್ಕವರನ್ನು ಕರೆಸಿ , ವಿಚಾರಣೆ ನಡೆಸುತ್ತಿದ್ದಾರೆ. ರಾಜಕೀಯ ನಾಯಕರ ಕೆಸೆರೆಚಾಟದ ನಡುವೆ ತನಿಖೆ ತೀವ್ರಗೊಂಡಿದೆ. ಎಡಿಜಿಪಿ ಬಿಜಯ್

ಚಿತ್ರದುರ್ಗ | ಮೇ 1ರಂದು ವಿದ್ಯುತ್ ವ್ಯತ್ಯಯ

ಚಿತ್ರದುರ್ಗ. ಏ.30: ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿರುವ ಪಂಡರಹಳ್ಳಿ ಲೈನ್‍ನ ಟ್ಯಾಪಿಂಗ್ ಪಾಯಿಂಟ್‍ನಿಂದ ಪಂಡರಹಳ್ಳಿ 66/11 ಕೆವಿ ವಿ.ವಿ ಕೇಂದ್ರದವರೆಗೆ ಡ್ರೇಕ್ ಕಂಡಕ್ಟರ್ ಬಳಸಿ ಉದ್ದೇಶಿತ 66 ಕೆವಿ ಲೈನ್ ಮತ್ತು ಕೊಯೊಟ್ ಕಂಡಕ್ಟರ್ ಬಳಸಿ

error: Content is protected !!