Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಾಣೆಯಾಗಿದ್ದ ಚಾಮರಾಜನಗರ ಸ್ವಾಮೀಜಿ ಶವವಾಗಿ ಪತ್ತೆ : ಆತ್ಮಹತ್ಯೆಯ ಶಂಕೆ..!

---Advertisement---

ಚಾಮರಾಜನಗರ: ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದ ಸ್ವಾಮೀಜಿ ಇದೀಗ ಶವವಾಗಿ ಪತ್ತೆಯಾವಿರುವ ಘಟನೆ ಜಿಲ್ಲೆಯ ಹನೂರು ತಾಲೂಕಿನ ಪಿ ಜಿ ಪಾಳ್ಯದಲ್ಲಿ ನಡೆದಿದೆ. 70 ವರ್ಷದ ರಾಜಶೇಖರ ಬುದ್ಧಿ ಸ್ವಾಮೀಜಿ ಹೀಗೆ ಶವವಾಗಿ ಪತ್ತೆಯಾಗಿದ್ದಾರೆ.

ರಾಜಶೇಖರ ಬುದ್ಧಿ ಸ್ವಾಮೀಜಿಗೆ ಮರೆವಿನ ಕಾಯಿಲೆ ಇತ್ತು ಎಂದು ಹೇಳಲಾಗುತ್ತಿದೆ. ಮೂರು ದಿನಗಳ ಹಿಂದೆ ಸುತ್ತೂರು ಜಾತ್ರೆಗೆ ಹೋಗಿ ಬರುವುದಾಗಿ ತಿಳಿಸಿದ್ದರು. ಆದ್ರೆ ಎಷ್ಟು ಸಮಯವಾದರೂ ಸ್ವಾಮೀಜಿ ಮರಳಿ ಬಂದಿರಲಿಲ್ಲ. ಬಳಿಕ ಅವರ ಹುಡುಕಾಟ ಶುರುವಾಗಿತ್ತು.

ಆದ್ರೆ ಇಂದು ಸ್ವಾಮೀಜಿಯ ಶವ ಸತ್ತೇಗಾಲದಲ್ಲಿ ಹರಿಯುವ ನದಿಯಲ್ಲಿ ಪತ್ತೆಯಾಗಿದೆ. ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಕೊಳ್ಳೆಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆಯ ನಂತರ ಸತ್ಯಾಸತ್ಯತೆ ಹೊರಗೆ ಬರುವ ಸಾಧ್ಯತೆ ಇದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...